Vande Bharat Express: ಉತ್ತರ ಕರ್ನಾಟಕಕ್ಕೆ ಅನುಕೂಲವಾಗುವಂತೆ ಎರಡು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು; ಮಾರ್ಗಗಳ ವಿವರ
Vande Bharat Express: ಐಷಾರಾಮಿ ರೈಲುಗಳಲ್ಲಿ ಒಂದಾದ ವಂದೇ ಭಾರತ್ ಎಕ್ಸ್ಪ್ರೆಸ್ ದೇಶಾದ್ಯಂತ ಸಂಚಾರ ಮಾಡುತ್ತಿದ್ದು, ಭಾರೀ ಜನಮನ್ನಣೆ ಪಡೆದುಕೊಂಡಿದೆ. ಇದೀಗ ಕರ್ನಾಟಕಕ್ಕೆ ಎರಡು ಹೊಸ ವಂದೇ ಭಾರತ್ ರೈಲುಗಳು ಎಂಟ್ರಿ ಕೊಡಲಿವೆ. ಹಾಗಾದ್ರೆ ಯಾವೆಲ್ಲಾ ಮಾರ್ಗಗಳಲ್ಲಿ ಓಡಲಿವೆ ಹಾಗೂ ಇದರಿಂದ ಯಾವೆಲ್ಲಾ ಅನುಕೂಲಗಳಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ದೇಶಾದ್ಯಂತ ಐಷಾರಾಮಿ ವಂದೇ ಭಾರತ್ ರೈಲು ಸಂಚಾರ ಮಾಡುತ್ತಿದ್ದು, ಜನಮನ್ನಣೆ ಪಡೆದುಕೊಳ್ಳುತ್ತಲಿವೆ. ಈ ಹೈಸ್ಪೀಡ್ ರೈಲುಗಳಿಗೆ ಪ್ರಯಾಣಿಕರು ಫಿಧಾ ಆಗಿದ್ದು, ಸೇವೆಯನ್ನು ವಿಸ್ತರಣೆ ಮಾಡುವಂತೆ ಒತ್ತಾಯ ಮಾಡುತ್ತಲಿದ್ದಾರೆ. ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಭಾರತೀಯ ರೈಲ್ವೆಯೂ ಈ ರೈಲು ಸೇವೆಯನ್ನು ವಿಸ್ತರಣೆ ಮಾಡುತ್ತಲೇ ಇದೆ. ಇದೀಗ ಉತ್ತರ ಕರ್ನಾಟಕಕ್ಕೆ ಅನುಕೂಲ ಆಗುವಂತೆ ಶೀಘ್ರದಲ್ಲೇ ಎರಡು ಹೊಸ ವಂದೇ ಭಾರತ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಹೌದು.. ಪುಣೆ - ಬೆಳಗಾವಿ ಮತ್ತು ಪುಣೆ - ಕಲಬುರಗಿ - ಹೈದರಾಬಾದ್ ನಡುವೆ ಹೊಸ ವಂದೇ ಭಾರತ್ ರೈಲುಗಳ ಸೇವೆ ಶೀಘ್ರದಲ್ಲೇ ಆರಂಭ ಆಗಲಿದೆ. ಈ ಮೂಲಕ ಕರ್ನಾಟಕದಿಂದ ಮಹಾರಾಷ್ಟ್ರದ ಪ್ರಮುಖ ನಗರಗಳಿಗೆ ಹಾಗೂ ಹೈದರಾಬಾದ್ಗೆ ರೈಲು ಸಂಚಾರ ಮತ್ತಷ್ಟು ಸುಲಭ ಆದಂತಾಗಲಿದೆ.
ಮಹಾರಾಷ್ಟ್ರ ಪ್ರಮುಖ ನಗರವಾದ ಪುಣೆಯಿಂದ 4 ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಓಡಿಸಲು ಭಾರತೀಯ ರೈಲ್ವೆ ನಿರ್ಧರಿಸಿದೆ. ಪುಣೆಯಿಂದ ಬೆಳಗಾವಿ, ಶೇಗಾಂವ್, ವಡೋದರಾ ಹಾಗೂ ಹೈದರಾಬಾದ್ ಸಿಕಂದರಾಬಾದ್ ನಗರಗಳಿಗೆ ಈ ರೈಲುಗಳು ಸಂಚಾರ ಮಾಡಲಿದೆ.
ಪುಣೆ -ಕಲಬುರಗಿ-ಹೈದರಾಬಾದ್ ನಡುವೆ ಸೇವೆ: ಪುಣೆಯಿಂದ ಹೈದರಾಬಾದ್ ಸಿಕಂದರಾಬಾದ್ ನಡುವೆ ಆರಂಭ ಆಗುತ್ತಿರುವ ಹೊಸ ವಂದೇ ಭಾರತ್ ರೈಲು ಮಹಾರಾಷ್ಟ್ರ ಕರ್ನಾಟಕ ಹಾಗೂ ತೆಲಂಗಾಣದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಈ ರೈಲು ದೌಂಡ್, ಸೋಲಾಪುರ ಮತ್ತು ಕಲಬುರಗಿದಲ್ಲಿ ನಿಲುಗಡೆಯಾಗಲಿದೆ. ಇದರಿಂದ ರೈಲು ಪ್ರಯಾಣದ ಸಮಯ 2-3 ಗಂಟೆಗಳಷ್ಟು ಕಡಿಮೆ ಆದಂತಾಗಲಿದೆ.
ಪುಣೆ-ಬೆಳಗಾವಿ ನಡುವೆ ಸೇವೆ: ಈಗಾಗಲೇ ಹುಬ್ಬಳ್ಳಿ ಬೆಳಗಾವಿ ಪುಣೆ ನಡುವೆ ವಾರದಲ್ಲಿ ಮೂರು ಬಾರಿ ವಂದೇ ಭಾರತ್ ರೈಲು ಸಂಚಾರ ಮಾಡುತ್ತಿದೆ. ಇದೀಗ ಪ್ರತಿನಿತ್ಯ ಈ ಮಾರ್ಗದಲ್ಲಿ ಸೆಮಿ ಹೈಸ್ಪೀಡ್ ಓಡಿಸಬೇಕೆಂಬುದು ಬೆಳಗಾವಿ ಜನರು ಬೇಡಿಕೆ ಇಟ್ಟಿದ್ದರು. ಸದ್ಯ ರೈಲ್ವೆ ಇಲಾಖೆ ಬೆಳಗಾವಿ-ಪುಣೆ ನಡುವೆ ಹೊಸ ವಂದೇ ಭಾರತ್ ಆರಂಭಿಸಿದೆ. ಸತಾರಾ, ಸಾಂಗ್ಲಿ ಮತ್ತು ಮಿರಾಜ್ನಲ್ಲಿ ಈ ರೈಲು ನಿಲುಗಡೆಯಾಗಲಿದೆ.
ಬೆಳಗಾವಿ-ಪುಣೆ ಹೊಸ ವಂದೇ ಭಾರತ್ ರೈಲಿನ ವೇಳಾಪಟ್ಟಿ, ಟಿಕೆಟ್ ದರ ಮತ್ತು ಇತರ ವಿವರಗಳ ಕುರಿತು ರೈಲ್ವೆ ಇಲಾಖೆ ಶೀಘ್ರದಲ್ಲೇ ಅಧಿಕೃತ ಮಾಹಿತಿಯನ್ನ ಬಿಡುಗಡೆಗೊಳಿಸುವ ಸಾಧ್ಯತೆಯಿದೆ ಈ ರೈಲು ಸೇವೆಯು ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರದ ಪ್ರಯಾಣಿಕರಿಗೆ ಹೆಚ್ಚು ಅನುಲೂಕ ಆದಂತಾಗಲಿದೆ. ಇದರಿಂದ ವ್ಯಾಪಾರ, ಶಿಕ್ಷಣ ಮತ್ತು ಪ್ರವಾಸೋದ್ಯಮ ಸೇರಿದಂತೆ ಇನ್ನಿತರ ಅಗತ್ಯಗಳಿಗೆ ಅನುಕೂಲ ಆದಂತಾಗಲಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications