ಸಿದ್ದರಾಮಯ್ಯನವರ ವಿನಾಕಾರಣ 2 ಹೇಳಿಕೆ: ಬಿಜೆಪಿಗೆ ಭರ್ಜರಿ ಮೈಲೇಜ್, ಕಾಂಗ್ರೆಸ್ಸಿಗೆ ಭಾರೀ ಮುಜುಗರ?
ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ವೇಳೆ, ಡಿ.ಕೆ.ಶಿವಕುಮಾರ್ ಮತ್ತು ರಮಾನಾಥ ರೈ ಜೊತೆಗೆ ಮೀನೂಟ ಮಾಡಿ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದಿದ್ದ ಸಿದ್ದರಾಮಯ್ಯನವರ ವಿರುದ್ದ ಖಟ್ಟರ್ ಹಿಂದುತ್ವವಾದಿಗಳು ಏಕ್ ಧಂ ತಿರುಗಿಬಿದ್ದಿದ್ದರು. ಕೊನೆಗೆ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಹೇಳಿಕೆ ನೀಡಬೇಕಾಯಿತು.
ಬಿಸಿಬಿಸಿ ಚರ್ಚೆ, ಕೆಸೆರೆರೆಚಾಟಕ್ಕೆ ನಾಂದಿ ಹಾಡಿದ್ದ ಆ ಘಟನೆಯನ್ನು ಸಿದ್ದರಾಮಯ್ಯ, "ದೇವರ ಬಗ್ಗೆ ಸ್ಪಷ್ಟವಾದ ತಿಳುವಳಿಕೆ ಇಲ್ಲದವರು ಇದನ್ನು ವಿನಾಕಾರಣ ಸುದ್ದಿ ಮಾಡುತ್ತಿದ್ದಾರೆ. ಮಾಂಸ ತಿಂದವರು ದೇವಾಲಯಕ್ಕೆ ಹೋಗಬಾರದು ಎನ್ನುವ ನಿಯಮ ಏನಾದರೂ ಇದೆಯಾ"ಎಂದು ಪ್ರಶ್ನಿಸುವ ಮೂಲಕ, ವಿಚಾರವನ್ನು ಮತ್ತಷ್ಟು ಜ್ವಲಂತವಾಗಿ ಇಟ್ಟಿದ್ದರು.
ಅಕ್ಟೋಬರ್ 2017ರಂದು ನಡೆದಿದ್ದ ಈ ಘಟನೆ ರಾಜ್ಯದ ಜನತೆಯಲ್ಲಿ ಎಷ್ಟು ಚರ್ಚೆಯ ವಿಷಯವಾಗಿತ್ತು ಎಂದರೆ, ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯನವರು ಸೋತಾಗ, ಧರ್ಮಸ್ಥಳದ ಮಂಜುನಾಥನ ಶಾಪ ತಟ್ಟಿದೆ ಎಂದೂ ಕೆಲವರು ವಾದ ಮಾಡಿದ್ದುಂಟು.
ಈ ವಿಚಾರ ಒಂದು ಮಟ್ಟಿಗೆ ಇಡೀ ಕಾಂಗ್ರೆಸ್ಸಿಗೆ ಮುಜುಗರ ತಂದಿದ್ದಂತೂ ಹೌದು. ಈ ಘಟನೆಯ ನಂತರ ಇಂತಹ ಸೂಕ್ಷ್ಮ ವಿಚಾರದ ಬಗ್ಗೆ ಜಾಗರೂಕತೆಯಿಂದ ಹೇಳಿಕೆ ನೀಡುತ್ತಿದ್ದ ಸಿದ್ದರಾಮಯ್ಯ, ಕಳೆದ ಎರಡು ದಿನಗಳಲ್ಲಿ ಮತ್ತೆ ಹಲವರ ಪಾಲಿಗೆ ವಿವಾದಕಾರಿ ಆಗುವ ಹೇಳಿಕೆಯನ್ನು ನೀಡಿದ್ದಾರೆ. ಅವರ ಎರಡು ಹೇಳಿಕೆ, ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆಯಿಲ್ಲದಿಲ್ಲ.

ಘಟನೆ - 1 - ಏನು ಇವತ್ತು ಹನುಮಜ್ಜಯಂತಿನಾ
ಘಟನೆ - 1: ಮೈಸೂರಿನ ತಮ್ಮ ಊರಿನ ಮತಗಟ್ಟೆಯಲ್ಲಿ ಗ್ರಾಮ ಪಂಚಾಯತಿ ಚುನಾವಣೆಗೆ ಮತದಾನ ಮಾಡಿ, ತಮ್ಮ ಸ್ನೇಹಿತರ ಮನೆಯಲ್ಲಿ ಸಿದ್ದರಾಮಯ್ಯ ಭರ್ಜರಿ ಬಾಡೂಟ ಮಾಡಿದ್ದರು. ಆ ವೇಳೆ, ಅವರ ಆಪ್ತರೊಬ್ಬರು, ಸರ್..ಇವತ್ತು ಹನುಮಜ್ಜಯಂತಿ ಎಂದು ಅಲರ್ಟ್ ಮಾಡಿದ್ದಾರೆ. ಆಗ, "ಏನು ಇವತ್ತು ಹನುಮಜ್ಜಯಂತಿನಾ, ಆಂಜನೇಯ ಹುಟ್ಟಿದ ದಿನ ನಿನಗೆ ಗೊತ್ತಾ, ಸುಮ್ನೆ ಊಟ ಮಾಡಯ್ಯ"ಎಂದು ಪ್ರೀತಿಯಿಂದ ಸಿದ್ದರಾಮಯ್ಯ ಗದರಿಸಿದ್ದರು. ಇದು ಒಂದು ಕಡೆ ಭಾರೀ ಸುದ್ದಿಯಾಗಿದೆ.

ನಾನು ಗೋಮಾಂಸ ತಿನ್ನುತ್ತೇನೆ, ಅದರಲ್ಲಿ ತಪ್ಪೇನಿದೆ
ಘಟನೆ - 2: ಬೆಂಗಳೂರಿನಲ್ಲಿ ಮಾತನಾಡುತ್ತಿದ್ದ ಸಿದ್ದರಾಮಯ್ಯ, "ನಾನು ಗೋಮಾಂಸ ತಿನ್ನುತ್ತೇನೆ, ಅದರಲ್ಲಿ ತಪ್ಪೇನಿದೆ. ನನ್ನ ಆಹಾರದ ಪದ್ದತಿ ನನ್ನದು, ಅದನ್ನು ಯಾರೂ ಪ್ರಶ್ನಿಸುವಂತಿಲ್ಲ. ವಯಸ್ಸಾದ, ಆರೋಗ್ಯವಾಗಿ ಇಲ್ಲದ ಹಸುಗಳನ್ನು ಮನೆಯಲ್ಲೇ ಇಟ್ಟುಕೊಳ್ಳಲು ಬಿಜೆಪಿಯವರು ದುಡ್ಡು ಕೊಡುತ್ತಾರಾ"ಎಂದು ವಿರೋಧ ಪಕ್ಷದ ನಾಯಕರು ಪ್ರಶ್ನಿಸಿದ್ದರು.

ಹಿಂದುತ್ವ ಈಗಲೂ ಬಿಜೆಪಿಯ ಟ್ರಂಪ್ ಕಾರ್ಡ್
ಈ ವಿಚಾರ ಯಾವ ರೀತಿ ಕಾಂಗ್ರೆಸ್ಸಿಗೆ ತಿರುಗುಬಾಣ ಆಗಬಹುದು ಎಂದರೆ, ಅಭಿವೃದ್ದಿಗಿಂತ ಹೆಚ್ಚಾಗಿ, ರಾಷ್ಟ್ರೀಯತೆ, ಹಿಂದುತ್ವ, ಸರ್ಜಿಕಲ್ ಸ್ಟ್ರೈಕ್ ಮುಂತಾದ ವಿಚಾರವನ್ನು ಮುಂದಿಟ್ಟುಕೊಂಡೇ, ಕಳೆದ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಜಯಭೇರಿ ಬಾರಿಸಿದ್ದು. ಗೋಹತ್ಯೆ, ಹಿಂದುತ್ವ ಈಗಲೂ ಬಿಜೆಪಿಯ ಟ್ರಂಪ್ ಕಾರ್ಡ್. ಅದಕ್ಕಿಂತ ಹೆಚ್ಚಾಗಿ, ಕರ್ನಾಟಕ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕಾನೂನು ಅನುಮೋದನೆ ಪಡೆದುಕೊಂಡಿದೆ ಬೇರೆ..
Recommended Video

ಗೋವಿನಲ್ಲಿ ಮುಕ್ಕೋಟಿ ದೇವರನ್ನು ಕಾಣುವ ಜನ
ಗೋವಿನಲ್ಲಿ ಮುಕ್ಕೋಟಿ ದೇವರನ್ನು ಕಾಣುವ ಜನರು ರಾಜ್ಯದಲ್ಲಿ ಬೇಕಾದಷ್ಟಿದ್ದಾರೆ, ಹಾಗಾಗಿ, ಸಿದ್ದರಾಮಯ್ಯನವರ ಹೇಳಿಕೆ ಕಾಂಗ್ರೆಸ್ ಅನ್ನು ಇನ್ನಷ್ಟು ಬ್ಯಾಕ್ ಸೀಟಿಗೆ ತಳ್ಳಬಹುದು. ಬಿಜೆಪಿಯವರ ಮೊದಲ ಟಾರ್ಗೆಟ್ ಸಿದ್ದರಾಮಯ್ಯ, ಕುಮಾರಸ್ವಾಮಿಯ ಮೊದಲ ಟಾರ್ಗೆಟೇ ಸಿದ್ದರಾಮಯ್ಯ. ಪರಿಸ್ಥಿತಿ ಹೀಗಿರುವಾಗ, ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನವರ ಈ ಎರಡು ಹೇಳಿಕೆಯನ್ನು ಇಟ್ಟುಕೊಂಡು, ಬಿಜೆಪಿ ಮತ್ತು ಜೆಡಿಎಸ್ ಮೈಲೇಜ್ ಪಡೆದುಕೊಳ್ಳಲು ಯಾವರೀತಿ ಇದನ್ನು ಬಳಸಿಕೊಳ್ಳಲಿದೆ ಎನ್ನುವುದಷ್ಟೇ ಕಾದು ನೋಡಬೇಕಾಗಿರುವುದು. ಎಲ್ಲೆಲ್ಲೂ... ರಾಜಕೀಯ ಎನ್ನುವುದಷ್ಟೇ ಇಲ್ಲಿ ಸತ್ಯ. ಗೋವು, ದೇವರು, ಹಿಂದುತ್ವ ಎಲ್ಲಾ ಆಮೇಲೆ..
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications