ನೂತನ ಅಡ್ವೊಕೇಟ್ ಜನರಲ್ ಆಗಿ ಉದಯ್ ಹೊಳ್ಳ ಅಧಿಕಾರ ಸ್ವೀಕಾರ
ಬೆಂಗಳೂರು, ಜೂನ್ 1: ಕರ್ನಾಟಕ ಸರಕಾರದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಉದಯ್ ಹೊಳ್ಳ ಅಧಿಕಾರ ಸ್ವೀಕರಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ ನ ಎಜಿ ಕಚೇರಿಯಲ್ಲಿ ಉದಯ್ ಹೊಳ್ಳ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಮೂರು ದಿನಗಳ ಕಾಲ ಮುಖ್ಯಮಂತ್ರಿಯಾಗಿ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಪ್ರಭುಲಿಂಗ ನಾವಡಗಿಯವರನ್ನು ಎಜಿ ಸ್ಥಾನಕ್ಕೆ ನೇಮಿಸಿದ್ದರು. ಇದೀಗ ಅವರ ಸ್ಥಾನಕ್ಕೆ ಉದಯ್ ಹೊಳ್ಳ ಬಂದಿದ್ದಾರೆ.
ಉಡುಪಿಯ ಬೈಂದೂರು ಮೂಲದವರಾದ ಉದಯ್ ಹೊಳ್ಳ ಈ ಹಿಂದೆ 2006-2009ರ ವರೆಗೆ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿಯೂ ಅಡ್ವೊಕೇಟ್ ಜನರಲ್ ಆಗಿ ಕಾರ್ಯನಿರ್ವಹಿಸಿದ್ದರು.

ಈ ಹಿಂದೆ ಮೂರು ಬಾರಿ ಉದಯ್ ಹೊಳ್ಳ ಅಡ್ವೊಕೇಟ್ ಜನರಲ್ ಆಗಿದ್ದರು. ಇದೀಗ ನಾಲ್ಕನೇ ಬಾರಿಗೆ ಎಜಿಯಾಗಿ ಅವರು ಅಧಿಕಾರ ಸ್ವೀಕರಿಸಿದ್ದಾರೆ.
1973ರಲ್ಲಿ ಬೆಂಗಳೂರಿನ ರೇಣುಕಾಚಾರ್ಯ ಕಾಲೇಜ್ ಆಫ್ ಲಾ ದಿಂದ ಕಾನೂನು ಪದವಿ ಪಡೆದಿರುವ ಅವರು ಕಳೆದ 4 ದಶಕಗಳಿಂದ ವಕೀಲಿ ವೃತ್ತಿಯಲ್ಲಿದ್ದಾರೆ. ಅವರನ್ನು ಅಡ್ವೋಕೇಟ್ ಜನರಲ್ ಆಗಿ ಮೇ 28ರಂದು ನೇಮಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದರು.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications