'ಸಿದ್ದರಾಮಯ್ಯ ಅವರ ಮುಂದಿನ ಗ್ಯಾರಂಟಿ ಮನೆ ಮನೆಗೆ ಬಾರ್ ಭಾಗ್ಯವೇ?'

ಬೆಂಗಳೂರು, ನವೆಂಬರ್‌ 15: ಪ್ರಧಾನಿ ನರೇಂದ್ರ ಮೋದಿ ಅವರ ಹೆಸರೆತ್ತಲೂ ನೈತಿಕತೆ ಇಲ್ಲದ ಕಳಂಕಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ಗ್ಯಾರಂಟಿ 'ಮನೆ ಮನೆಗೆ ಬಾರ್ ಭಾಗ್ಯವೇ' ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪ್ರಶ್ನಿಸಿದ್ದಾರೆ.

ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಜನಪರ ಆಡಳಿತದ ಮೂಲಕ ದೇಶವನ್ನು ವಿಶ್ವದ ಮುಂಚೂಣಿ ಸ್ಥಾನಕ್ಕೇರಿಸಲು ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರೆತ್ತಲೂ ನೈತಿಕತೆ ಇಲ್ಲದ ಕಳಂಕಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಗರಣಗಳ ಸರಮಾಲೆಯನ್ನೇ ಧರಿಸಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಶೋರ್ ಕುಮಾರ್ ಕುಂದಾಪುರ ವಾಗ್ದಾಳಿ ನಡೆಸಿದ್ದಾರೆ.

Udupi Bjp Questions What Is The Next Guarantee Scheme Of Siddaramaiah Government

ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ 700 ಕೋಟಿ ರೂಪಾಯಿ ಮೌಲ್ಯದ ಅಬಕಾರಿ ಹಗರಣದ ಮಧ್ಯೆಯೇ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂಗ್ರೆಸ್ ಮುಖಂಡ, ಬೋಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಬೋಳ ಸೊಸೈಟಿಯ ನಿರ್ದೇಶಕ ಹಾಗೂ ಕಾಂಗ್ರೆಸ್ ನಾಯಕ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಪರಮಾಪ್ತ ಎನಿಸಿಕೊಂಡಿರುವ ಬೋಳದ ಅವಿನಾಶ್ ಮಲ್ಲಿ ಮನೆಯಲ್ಲಿ ರೂ.70 ಲಕ್ಷಕ್ಕೂ ಅಧಿಕ ಮೌಲ್ಯದ 200ಕ್ಕೂ ಅಧಿಕ ವಿಸ್ಕಿ ಬಾಟಲಿಗಳ ಸಂಗ್ರಹ ಪತ್ತೆಯಾಗಿರುವುದು ಆತಂಕ ಮೂಡಿಸಿದೆ.

ಅಬಕಾರಿ ಉಪ ಆಯುಕ್ತೆ ಬಿಂದು ಅವರ ನೇತೃತ್ವದಲ್ಲಿ ಅವಿನಾಶ್ ಮಲ್ಲಿ ಮನೆಗೆ ದಾಳಿ ನಡೆಸಿರುವ ಅಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಬ್ರಾಂಡೆಡ್ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿರುವ ಪ್ರಕರಣ ರಾಜ್ಯ ಕಾಂಗ್ರೆಸ್ ಸರಕಾರದ ಸಾಚಾತನದ ಮುಖವಾಡವನ್ನು ಕಳಚಿದೆ.

ಅಬಕಾರಿ ಹಗರಣ ಸುಳ್ಳು ಎಂದು ಬೊಗಳೆ ಬಿಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಒಬ್ಬ ವ್ಯಕ್ತಿಯ ಮನೆಯಲ್ಲಿ ಇಷ್ಟು ದೊಡ್ಡ ಪ್ರಮಾಣದ ಮದ್ಯ ಬಾಟಲಿಗಳು ಕಳ್ಳಸಂಗ್ರಹಣೆಯಾಗಿದೆ ಎಂದರೆ ಅರ್ಥವೇನು? ಈ ರೀತಿ ದಾಸ್ತಾನು ಮಾಡುವುದಕ್ಕೆ ನೀವು ಅನಧಿಕೃತ ಪರವಾನಿಗೆ ನೀಡಿದ್ದೀರಾ? ಇಂತಹ 'ದೋ ನಂಬರ್' ಮದ್ಯದ ವಹಿವಾಟು ಎಷ್ಟು ಕೋಟಿ ರೂಪಾಯಿ ಮೊತ್ತದ ಹಗರಣ? ಇದು ಅನ್ಯ ರಾಜ್ಯದ ಚುನಾವಣೆಗೋಸ್ಕರವೋ ಅಥವಾ ತಮ್ಮದೇ ಪಕ್ಷದ ಶಾಸಕರ ಖರೀದಿಗೆ ನಡೆಸುತ್ತಿರುವ ಅಕ್ರಮ ಚಟುವಟಿಕೆಯೋ? ಕಾಂಗ್ರೆಸ್ ಸರಕಾರದಲ್ಲಿ ಮನೆ ಮನೆಗೆ 'ಬಾರ್ ಭಾಗ್ಯ' ಕೊಡುತ್ತೀರಾ? ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಕರಣದ ಆರೋಪಿ ತಲೆ ಮರೆಸಿಕೊಂಡಿದ್ದು, ಕಾಂಗ್ರೆಸ್ ಮುಖಂಡರಿಂದ ಪ್ರಕರಣವನ್ನು ಮುಚ್ಚಿಹಾಕುವ ಷಡ್ಯಂತ್ರ ನಡೆಯುತ್ತಿರುವುದು ಖಂಡನೀಯ. ಈಗಾಗಲೇ ಮುಡಾ ಹಗರಣ, ವಾಲ್ಮೀಕಿ ನಿಗಮದ ಕೋಟ್ಯಾಂತರ ರೂಪಾಯಿ ದುರ್ಬಳಕೆ ಪ್ರಕರಣದ ಸಹಿತ ವಿವಿಧ ಇಲಾಖೆಗಳಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಜೊತೆಗೆ ಮಠ ಮಂದಿರ, ದೇವಸ್ಥಾನ ಮತ್ತು ರೈತರ ಭೂ ಕಬಳಿಕೆ ಹುನ್ನಾರದ ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದ್ ಪ್ರಕರಣಗಳಿಂದ ರೋಸಿ ಹೋಗಿರುವ ಜನತೆಗೆ ರಾಜ್ಯ ಕಾಂಗ್ರೆಸ್ ಸರಕಾರವನ್ನು ತೊಲಗಿಸಲು ಸರ್ವ ಸನ್ನದ್ಧರಾಗಿದ್ದು, ಪೊಲೀಸ್ ಇಲಾಖೆ ಸದ್ರಿ ಪ್ರಕರಣದ ಜಾಡು ಹಿಡಿದು ಕೂಲಂಕುಶ ತನಿಖೆ ನಡೆಸಿ, ತಪ್ಪಿತಸ್ಥರನ್ನು ಕಾನೂನಾತ್ಮಕ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+