ಲೋಕಸಭಾ ಪ್ರಚಾರಕ್ಕೆ ಅಪ್ಪನ ಕೈಹಿಡಿದ ದಿವ್ಯಾ ಹೆಗ್ಡೆ
ಕುಂದಾಪುರ, ಏ. 2: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಮತ್ತೊಮ್ಮೆ ಜಯದ ನಗೆ ಬೀರಲು ಶ್ರಮಿಸುತ್ತಿರುವ ಹಾಲಿ ಸಂಸದ, ಕಾಂಗ್ರೆಸ್ಸಿನ ಕೆ ಜಯಪ್ರಕಾಶ್ ಹೆಗ್ಡೆಗೆ ಅವರ ಪುತ್ರಿ ದಿವ್ಯಾ ಹೆಗ್ಡೆ ಸಾಥ್ ನೀಡಿದ್ದಾರೆ.
Brand JP Hegde: 2012ರಲ್ಲಿ ನಡೆದ ಉಪಚುನಾವಣೆಯಲ್ಲಿ ಅಪ್ಪ ಜಯಪ್ರಕಾಶ್ ಹೆಗ್ಡೆ ಅವರನ್ನು ಚುನಾವಣಾ ಕಣದಲ್ಲಿ ಯಶಸ್ವಿಯಾಗಿ ಮಾರುಕಟ್ಟೆ ಮಾಡಿದ್ದ ದಿವ್ಯಾ ಜಯಪ್ರಕಾಶ್ ಹೆಗ್ಡೆ, ಈಗ ಮತ್ತೊಮ್ಮೆ ಎರಡೂ ಜಿಲ್ಲೆಗಳಲ್ಲಿ ಮತದಾರರ ಮನೆಮನೆಗೆ ತೆರಳಿ ಮತಬೇಟೆಯಲ್ಲಿ ತೊಡಗಿದ್ದಾರೆ.
ಪುರಾತನ ಕಾಂಗ್ರೆಸ್ ಪಕ್ಷವು ಪರಂಪರಾಗತ ಮತ ಬ್ಯಾಂಕ್ ಅನ್ನು ಹೊಂದಿದೆ. ಆದರೆ ಬದಲಾದ ಕಾಲಮಾನದಲ್ಲಿ ಅದನ್ನೇ ನೆಚ್ಚಿಕೊಳ್ಳುವ ಹಾಗಿಲ್ಲ. ಇದು ಈಗಿನ ಪೀಳಿಗೆಯ ದಿವ್ಯಾ ಹೆಗ್ಡೆಗೆ ಚೆನ್ನಾಗಿ ಅರ್ಥವಾದಂತಿದೆ. ಹಾಗಾಗಿ, ಅಪ್ಪನ ಗೆಲುವಿಗಾಗಿ ಮತದಾರರನ್ನು ತಲುಪಲು ಮಾಹಿತಿ ತಂತ್ರಜ್ಞಾನವನ್ನು ಬಳಸುತ್ತಿದ್ದಾರೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]

social media ಮೂಲಕ ಮತದಾರರ ಜತೆ ಸೋಷಿಯಲ್ ಆಗಿರುವ ದಿವ್ಯಾ, ಅಮೆರಿಕದ Chicago North Western Universityಯಲ್ಲಿ ಮಾರುಕಟ್ಟೆ ಮತ್ತು ಸಂವಹನ ವಿಷಯದಲ್ಲಿ ಎಂಎಸ್ ಪದವಿ ಪಡೆದಿದ್ದಾರೆ. ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ 1.5 ಲಕ್ಷ ಮಂದಿ Facebook ಬಳಕೆದಾರರಿದ್ದಾರೆ ಎಂಬುದನ್ನು ಅರಿತಿರುವ ದಿವ್ಯಾ, ಅಪ್ಪನಿಗಾಗಿ ಸಾಕಷ್ಟು ಹೋಂವರ್ಕ್ ಮಾಡುತ್ತಿದ್ದಾರೆ. ಅಂದರೆ ಮನೆಯಿಂದಲೇ ಆನ್ ಲೈನ್ ಮುಖಾಂತರ ಲಕ್ಷಾಂತರ ಮಂದಿಯನ್ನು ತಲುಪಿ, ಅಪ್ಪನ ಸಾಧನೆಗಳನ್ನು ಪರಿಚಯಿಸುತ್ತಿದ್ದಾರೆ.
ಅಂದಹಾಗೆ 28 ವರ್ಷದ ದಿವ್ಯಾ, ಬೆಂಗಳೂರಿನಲ್ಲಿ ಸ್ವಂತದ marketing and branding consultancy ಸಂಸ್ಥೆಯನ್ನು ಹೊಂದಿದ್ದಾರೆ. ಮೂಲತಃ ಕುಂದಾಪುರದವರಾದ ಕುಂದಾಪುರ ಜಯಪ್ರಕಾಶ್ ಹೆಗ್ಡೆ 2008ರಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಮತ್ತು 2009ರಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಸೋತಿದ್ದರು. ಅದಾದ ನಂತರ ಎಚ್ಚೆತ್ತ ಮಗಳು ದಿವ್ಯಾ social media ಮೂಲಕ ರಂಗ ಪ್ರವೇಶ ಮಾಡಿದರು.
ತತ್ಫಲವಾಗಿ ಇಂದು, ಸಾಮಾಜಿಕ ಜಾಲತಾಣವೇ ಅಂತಿಮ ಅಲ್ಲದಿದ್ದರೂ ಅಪ್ಪನ ಹೆಸರು (brand JP Hegde) ಜನಗಳ ಮಧ್ಯೆ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಕೊನೆಯ ಹಂತದಲ್ಲಿ ಧನಂಜಯ ಕುಮಾರ್ ಅವರು ಬಿಜೆಪಿಯಿಂದ ಸಿಡಿದೆದ್ದು ಜೆಡಿಎಸ್ ಕೈಹಿಡಿದಿದ್ದರಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿಯಿಂದ ಶೋಭಾ ಕರಂದ್ಲಾಜೆ ಮತ್ತು ಕಾಂಗ್ರೆಸ್ಸಿಂದ ಹಾಲಿ ಸಂಸದ ಜಯಪ್ರಕಾಶ್ ಹೆಗ್ಡೆ ಸ್ಪರ್ಧಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications