ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ: ಜನ ಏನನ್ತಾರೆ?
ಚಿಕ್ಕಮಗಳೂರು, ಮಾರ್ಚ್6- ರಾಜ್ಯದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರವು ಈ ಬಾರಿಯೂ ಪ್ರತಿಷ್ಠೆಯ ಕಣವಾಗಿ ಮಾರ್ಪಡುವ ಲಕ್ಷಣಗಳಿವೆ. ತನ್ನದೇ ಆದ ವಿಶಿಷ್ಟ ಇತಿಹಾಸ ಹೊಂದಿರುವ ಕ್ಷೇತ್ರದಲ್ಲಿ ಜನಸಂಚಾರ ಮಾಡಿ, ಮತದಾರರ ನಾಡಿಮಿಡಿತ ಅರಿತಾಗ ವಿಭಿನ್ನ ಚಿತ್ರಣಗಳು ಮೂಡುತ್ತವೆ.
ಸದಾನಂದ ಗೌಡರು ಮುಖ್ಯಮಂತ್ರಿ ಆಗುವ ಭರದಲ್ಲಿ ಕಾಂಗ್ರೆಸ್ಸಿನ ಜಯಪ್ರಕಾಶ್ ಹೆಗ್ಡೆ ಅವರಿಗೆ 21 ತಿಂಗಳ ಹಿಂದೆ ಫಲತಾಂಬೂಲದೊಂದಿಗೆ ಕಾಣಿಕೆಯಾಗಿ ನೀಡಿದ್ದು ಈಗ ಇತಿಹಾಸ. ಹಾಗಾಗಿ ಸಹಜವಾಗಿ ಕಾಂಗೈ ಮೇಲುಗೈ ಆಗಿದೆ. ಕಾಂಗ್ರೆಸ್ ಪಕ್ಷದಿಂದ ಜಯಪ್ರಕಾಶ್ ಹೆಗ್ಡೆ ಅವರು ಈ ಬಾರಿಯೂ ಕಣಕ್ಕಿಳಿದು, ಜಯಭೇರಿ ಬಾರಿಸಲು ಕಾತುರರಾಗಿದ್ದಾರೆ. ಆದರೂ ಕ್ಷೇತ್ರದಲ್ಲಿ ಬಿಜೆಪಿ ಪ್ರಭಾವವೂ ಪ್ರಧಾನವಾಗಿದೆ.

ಈ ಮಧ್ಯೆ, ಖಡಕ್ ಪೈಪೋಟಿ ನೀಡಲು ಬಿಜೆಪಿ ಸಹ ಪ್ಲಾನ್ ಹಾಕುತ್ತಿದೆ. ಆದರೆ ಅಂತಿಮವಾಗಿ ಅಭ್ಯರ್ಥಿ ಯಾರಾಗುತ್ತಾರೆ ಎಂಬುದು ನಿಗೂಢವಾಗಿದೆ. ಈ ಮಧ್ಯೆ ನಿಮ್ಮ ಮತ ಯಾರಿಗೆ ಶೋಭಾಗೋ, ಅಥವಾ ರವಿಗೋ ಎಂದು ಮತದಾರರನ್ನೇ ಕೇಳುವಂತಾಗಿದೆ.
ನರೇಂದ್ರ ಮೋದಿ ಪ್ರಧಾನಿ ಆಗಬೇಕೆಂಬ ಮಹದಾಸೆ ಹೊತ್ತಿರುವ ಬಿಜೆಪಿಯು ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ರಾಜಿ ಮಾಡಿಕೊಳ್ಳದೆ ಗೆಲ್ಲುವ ಕುದುರೆಯನ್ನಷ್ಟೇ ಮೈದಾನದಲ್ಲಿ ಇಳಿಸಬೇಕು ಎಂಬ ಇರಾದೆ ಹೊಂದಿದೆ. ಆದರೆ ಕೊನೆಯ ಕ್ಷಣದ 'ರಾಜಕೀಯ' ನಿರ್ಧಾರ ಏನಿರುತ್ತದೋ ಎಂಬುದು ಸದ್ಯದ ಕುತೂಹಲ.
ಏನೇ ಆಗಲಿ ಅಂತಿಮ ಕದನಕ್ಕೂ ಮುನ್ನ, ಪಕ್ಷದ ಮಾಜಿ ಸಚಿವರುಗಳಾದ ಶೋಭಾ ಕರಂದ್ಲಾಜೆ ಮತ್ತು ಸಿಟಿ ರವಿ ಮಧ್ಯೆ ಸದ್ಯಕ್ಕಂತೂ ಮುಸುಕಿನ ಗುದ್ದಾಟ ನಡೆದಿದೆ. ಕೊನೆಗೆ ಯಾರ ಕೈ ಮೇಲಾಗುತ್ತದೆ ಎಂಬುದನ್ನು ಅವಲಂಬಿಸಿ, ಜಯಪ್ರಕಾಶ್ ಹೆಗ್ಡೆ ವಿರುದ್ಧ ಕಣಕ್ಕೆ ಇಳಿಯಬಹುದು.
ಮಹಾಭಾರತ ಚುನಾವಣೆ ನಿನ್ನೆಯೇ ಘೋಷಣೆಯಾಗಿದೆ. ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಖೈರಾಗಿದ್ದು, ಇನ್ನೇನು ಇದೇ ವಾರಾಂತ್ಯ ಬಿಡುಗಡೆ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಅವರು ಹೇಳಿದ್ದಾರೆ. ಆದರೆ ಪ್ರಹ್ಲಾದ ಜೋಶಿ ಹೇಳುವಷ್ಟು ಸುಲಲಿತವಾಗಿ ಬಿಜೆಪಿ ಪಟ್ಟಿ ಬಿಡುಗಡೆ ಕಾಣುವುದು ದುಸ್ಸಾಧ್ಯವಾಗಿದೆ. ಕೆಲ ಕ್ಷೇತ್ರಗಳಂತೂ ಪಕ್ಷಕ್ಕೆ ಬಿಸಿ ತಂದಿದೆ. ಅದರಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವೂ ಒಂದು.
ಪಕ್ಷವೇನೋ ತನ್ನದೇ ಅನಿವಾರ್ಯ ಕಾರಣಗಳಿಂದಾಗಿ ಶೋಭಾ ಕರಂದ್ಲಾಜೆ ಅವರಿಗೆ ಮಣೆ ಹಾಕಲು ಮುಂದಾಗಿದೆ. ಆದರೆ ಕ್ಷೇತ್ರದ ಜನ ರವಿ ಪರ ಸೀಟಿ ಹೊಡೆಯುತ್ತಿದ್ದಾರೆ. ರವಿ ಪ್ರಸ್ತುತ ಚಿಕ್ಕಮಗಳೂರು ಶಾಸಕರೂ ಹೌದು. ಖುದ್ದು ರವಿಗೆ ಶೋಭಾ ಇಲ್ಲಿಂದ ಸ್ಪರ್ಧಿಸುವುದು ಇಷ್ಟವಿಲ್ಲ. ತಾವೇ ಕಣಕ್ಕಿಳಿಯ ಬಯಸಿರುವ ರವಿಗೆ ಶೋಭಾ ಕಣಕ್ಕಿಳಿದು ಗೆದ್ದುಬಿಟ್ಟರೆ ಕ್ಷೇತ್ರದ ಮೇಲಿನ ಹಿಡಿತ ತಮ್ಮ ಕೈ ತಪ್ಪುತ್ತದೆ ಎಂಬ ಆತಂಕವೂ ಕಾಡುತ್ತಿದೆ.
ಬೂತ್ ಮಟ್ಟದಲ್ಲಿ ಸಭೆ ಸೇರಿದ್ದ ಬಿಜೆಪಿ ಕಾರ್ಯಕರ್ತರು ಜಿಲ್ಲಾ ನಾಯಕರನ್ನು ಭೇಟಿ ಮಾಡಿ ರವಿ ಪರ ತಮ್ಮ ಇರಾದೆಯನ್ನು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಕ್ಷೇತ್ರದ ಜತೆ ಮೂರನೆಯ ಹೆಸರೂ ತಳುಕು ಹಾಕಿಕೊಂಡು ಬಿಜೆಪಿಗೆ ಶಾನೆ ತಲೆ ಬಿಸಿ ಉಂಟಾಗಿತ್ತು. ಆದರೆ ಮೂರನೆಯ ವ್ಯಕ್ತಿ ಸದಾನಂದ ಗೌಡರನ್ನು ಪಕ್ಷವು ಬೆಂಗಳೂರು ಉತ್ತರ ಕ್ಷೇತ್ರದಲ್ಲೇ ಕಟ್ಟಿಹಾಕಿದ್ದು, ಸದ್ಯಕ್ಕೆ ಶೋಭಾ ಮತ್ತು ರವಿ ಮಧ್ಯೆ ಹೊಯ್ದಾಡುತ್ತಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications