ಉಡುಪಿ ಪರ್ಯಾಯಕ್ಕೆ ವೈಭವದ ತೆರೆ
ಉಡುಪಿ, ಜ 18: ಎಂಟು ಶತಮಾನಗಳ ಹಿಂದೆ ಆಚಾರ್ಯ ಮಧ್ವರು ಸ್ಥಾಪಿಸಿದ ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದು (ಶನಿವಾರ, ಜ 18) ಸೋದೆ ಶ್ರೀಗಳು ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥರಿಗೆ ಶ್ರೀಕೃಷ್ಣ ದ್ವೈವಾರ್ಷಿಕ ಪೂಜಾ ಕೈಂಕರ್ಯ ಮತ್ತು ಮಠದ ಆಡಳಿತವನ್ನು (ಪರ್ಯಾಯ) ಹಸ್ತಾಂತರಿಸಿದ್ದಾರೆ.
ಅತ್ಯಂತ ವೈಭವದಲ್ಲಿ ನಡೆದ ಪರ್ಯಾಯ ಮೆರವಣಿಗೆಯಲ್ಲಿ ಶಿರೂರು ಶ್ರೀಗಳು ಮಾನವ ಹೊರುವ ಪಲ್ಲಕ್ಕಿಯಲ್ಲಿ ಪಟ್ಟದ ದೇವರನ್ನು ಇಟ್ಟು, ತಾನು ಅಲಂಕೃತ ಜೀಪಿನಲ್ಲಿ ಪರ್ಯಾಯ ಮೆರವಣಿಗೆಯಲ್ಲಿ ಬಂದರು.

ಹಿರಿಯ ಮತ್ತು ಕಿರಿಯ ಪೇಜಾವರ ಶ್ರೀಗಳು, ಕಾಣಿಯೂರು, ಕೃಷ್ಣಾಪುರ, ಫಲಿಮಾರು ಶ್ರೀಗಳು ಮಾತ್ರ ಹಿರಿಯ ಪೇಜಾವರ ಶ್ರೀಗಳ ಆದೇಶದಂತೆ ಟ್ಯಾಬ್ಲೋದಲ್ಲಿರಿಸಿದ ಪಲ್ಲಕ್ಕಿಯಲ್ಲಿ ಕೂತು ಮೆರವಣಿಗೆಯಲ್ಲಿ ಸಾಗಿದರು. ಅದಮಾರು ಮತ್ತು ಪುತ್ತಿಗೆ ಮಠಾಧೀಶರುಗಳು ಪರ್ಯಾಯ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿಲ್ಲ. (ಹೊಸವರ್ಷದ ಮುನ್ನ ಪೇಜಾವರರ ಮಹತ್ವದ ನಿರ್ಧಾರ)
ಶನಿವಾರ ಪ್ರಾತಃಕಾಲ ಎರಡು ಗಂಟೆಗೆ ಕಾಣಿಯೂರು ಶ್ರೀಗಳು ದಂಡತೀರ್ಥಕ್ಕೆ ತೆರಳಿ ಪವಿತ್ರ ಸ್ನಾನ ಮತ್ತು ಇತರ ಧಾರ್ಮಿಕ ವಿಧಿವಿಧಾನ ಮುಗಿಸಿದ ನಂತರ ಜೋಡುಕಟ್ಟೆ ವೃತ್ತಕ್ಕೆ ಮೂರು ಗಂಟೆ ಸುಮಾರಿಗೆ ಆಗಮಿಸಿದರು.

ಅಲ್ಲಿ ಪಟ್ಟದ ದೇವರಿಗೆ ಪೂಜೆ ಸಲ್ಲಿಸಿದ ನಂತರ, 3.30ಕ್ಕೆ ವೈಭವದ ಪರ್ಯಾಯ ಮೆರವಣಿಗೆ ಆರಂಭವಾಯಿತು. ದೇಶ, ವಿದೇಶದಿಂದ ಬಂದ ಲಕ್ಷಾಂತರ ಮಂದಿ ಭಕ್ತಾದಿಗಳು ಪರ್ಯಾಯ ಉತ್ಸವಕ್ಕೆ ಸಾಕ್ಷಿಯಾದರು.
ಇಪ್ಪತ್ತು ವಿವಿಧ ಟ್ಯಾಬ್ಲೋಗಳು, ಚಂಡೆ, ಡೊಳ್ಳುಕುಣಿತ, ಹುಲಿವೇಷ, ನಾಸಿಕ್ ಬ್ಯಾಂಡ್ ಮುಂತಾದವು ಮೆರವಣಿಗೆಗೆ ವಿಶೇಷ ಮೆರುಗು ನೀಡಿತು. ಬೆಳಗ್ಗೆ ಆರು ಗಂಟೆ ಸುಮಾರಿಗೆ ಮೆರವಣಿಗೆ ರಥಬೀದಿ ಪ್ರವೇಶಿಸಿತು.

ಅಲ್ಲಿ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಮಾಡಿದ ಕಾಣಿಯೂರು ಶ್ರೀಗಳು ಅನಂತೇಶ್ವರ ಮತ್ತು ಚಂದ್ರಮೌಳೀಶ್ವರ ದೇವರ ದರ್ಶನ ಪಡೆದ ಕೃಷ್ಣಮಠಕ್ಕೆ ಆಗಮಿಸಿ ದೇವರಿಗೆ ಪೂಜೆ ಸಲ್ಲಿಸಿದರು.
ನಂತರ ಮಧ್ವಾಚಾರ್ಯರು ಆಸೀನರಾಗಿದ್ದ ಎಂದು ನಂಬಲಾಗುವ ಸರ್ವಜ್ಞ ಪೀಠದಲ್ಲಿ ಸೋದೆ ಶ್ರೀಗಳು ಕಾಣಿಯೂರು ಶ್ರೀಗಳಿಗೆ ಮಠದ ಕೀಲಿಕೈ ಮತ್ತು ಅಕ್ಷಯ ಸಟ್ಟುಗವನ್ನು ಹಸ್ತಾಂತರಿಸಿದರು. ಈ ಧಾರ್ಮಿಕ ವಿಧಿವಿಧಾನ ಮುಗಿದ ನಂತರ ರಾಜಾಂಗಣದಲ್ಲಿ ಪರ್ಯಾಯ ದರ್ಬಾರ್ ನಡೆಯಿತು. ದರ್ಬಾರಿನಲ್ಲಿ ವಿವಿಧ ಧಾರ್ಮಿಕ ಮುಖಂಡರು, ಸಚಿವರು, ರಾಜಕೀಯ ಮುಖಂಡರು, ಸಮಾಜದ ಗಣ್ಯರು ಭಾಗವಹಿಸಿದ್ದರು.
ಉಡುಪಿ ಜಿಲ್ಲಾಡಳಿತ ಪರ್ಯಾಯ ಭದ್ರತಾ ವ್ಯವಸ್ಥೆಗೆ ಐದು ಜಿಲ್ಲೆಗಳಿಂದ ಬಂದ ಪೊಲೀಸರಿಂದ ಭಾರೀ ಬಂದೋಬಸ್ತ್ ನೀಡಿತ್ತು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications