ಉಡುಪಿ; ಪರಶುರಾಮ ಥೀಮ್ ಪಾರ್ಕ್ ಪ್ರಶ್ನಿಸಿದ್ದ ಪಿಐಎಲ್ ವಜಾ
ಬೆಂಗಳೂರು, ಅಕ್ಟೋಬರ್ 12; ಉಡುಪಿ ಜಿಲ್ಲೆಯ ಕಾರ್ಕಳದಲ್ಲಿನ ಪರುಶರಾಮ ಥೀಮ್ ಪಾರ್ಕ್ ಕಾಮಗಾರಿ ಆಕ್ಷೇಪಿಸಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಪ್ರಮೋದ್ ಮುತಾಲಿಕ್ ಹಾಗೂ ಬೆಂಗಳೂರಿನ ಎಸ್. ಭಾಸ್ಕರನ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಲೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಈ ಅರ್ಜಿಯು ಕಲ್ಪನೆಗಳು, ಊಹೆಗಳು ಮತ್ತು ಅರ್ಜಿದಾರರ ಸ್ವಂತ ಅನಿಸಿಕೆಗಳ 'ಬಂಡಲ್' (ಕಟ್ಟು) ಆಗಿದ್ದು, ಸಾರಸಗಟಾಗಿ ತಳ್ಳಿ ಹಾಕುವಂತಹದ್ದಿದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.
ಈಗಾಗಲೇ ಥೀಮ್ ಪಾರ್ಕ್ ಕಾಮಗಾರಿ ಮುಗಿಯುವ ಹಂತದಲ್ಲಿದೆ. ಈ ಹಿಂದೆ ಯಾವತ್ತೂ ಆಕ್ಷೇಪವೆತ್ತದ ಅರ್ಜಿದಾರರು ಈಗ ಏಕಾಏಕಿ ಕೋರ್ಟ್ಗೆ ಬಂದಿದ್ದಾಾರೆ. ಅಷ್ಟಕ್ಕೂ ಅರ್ಜಿದಾರರಿಬ್ಬರೂ ಸ್ಥಳೀಯರಲ್ಲ. ಒಬ್ಬರು ಧಾರವಾಡದವರು ಮತ್ತೊಬ್ಬರು ಬೆಂಗಳೂರಿನವರು. ಸ್ಥಳೀಯ ಗ್ರಾಮಸ್ಥರು ಕೋರ್ಟ್ಗೆ ಯಾಕೆ ಬಂದಿಲ್ಲ ಎಂದು ಪ್ರಶ್ನಿಸಿತು.
ಗೋಮಾಳ ಜಾಗವನ್ನು ಥೀಮ್ ಪಾರ್ಕ್ಗೆ ಬಳಕೆ ಮಾಡಲಾಗುತ್ತಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾಾರೆ. ಆದರೆ, ಇದರಿಂದ ಪಶುಸಂಗೋಪನೆಗೆ ತೊಂದರೆ ಆಗಲಿದೆ ಎಂದು ಗ್ರಾಮಸ್ಥರಾಗಲಿ ಅಥವಾ ನೆರೆಯ ಗ್ರಾಮಸ್ಥರು ಯಾರೂ ಆತಂಕ ವ್ಯಕ್ತಪಡಿಸಿಲ್ಲ. ಅರ್ಜಿಯಲ್ಲಿ ವಿಚಾರಣೆಗೆ ಪರಿಗಣಿಸುವಂತದ್ದೇನೂ ಇಲ್ಲ. ಅಲ್ಲದೇ ಬಹಳ ತಡವಾಗಿ ಅರ್ಜಿದಾರರು ಕೋರ್ಟ್ ಮೆಟ್ಟಿಲು ಹತ್ತಿದ್ದಾಾರೆ ಎಂದು ನ್ಯಾಯಾಲಯ ಹೇಳಿತು.
ಈ ಪ್ರಕರಣದಲ್ಲಿ ಪ್ರಮೋದ್ ಮುತಾಲಿಕ್ಗೆ ಹಿನ್ನಡೆಯಾಗಿದೆ. ಅಲ್ಲದೇ 'ನಿಮ್ಮ ಬಳಿ ಗೋವುಗಳು ಇದ್ದಾವೆಯೇ?' ಎಂದು ಅರ್ಜಿದಾರರನ್ನು ಪ್ರಶ್ನಿಸಿದ ನ್ಯಾಯಪೀಠ ಗೋವುಗಳನ್ನು ಸಾಕದವರು ಗೋಮಾಳ ರಕ್ಷಣೆ ಮಾಡುವಂತೆ ಕೋರಿ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿಲ್ಲ ಎಂದು 10 ವರ್ಷಗಳ ಹಿಂದೆ ಇದೇ ಹೈಕೋರ್ಟ್ ಪ್ರಕರಣವೊಂದರಲ್ಲಿ ಅಭಿಪ್ರಾಯಪಟ್ಟಿದೆ ಎಂಬ ವಿಚಾರವನ್ನೂ ಇದೇ ವೇಳೆ ಅರ್ಜಿದಾರರ ಗಮನಕ್ಕೆ ತಂದಿತು.
ಏನಿದು ಪ್ರಕರಣ?: ಎರ್ಲಪಾಡಿಯ ಉಮಿಕಲ್ ಬೆಟ್ಟದಲ್ಲಿ ನಿರ್ಮಾಣವಾಗುತ್ತಿರುವ ಪರಶುರಾಮ ಥೀಮ್ ಪಾರ್ಕ್ ಅತ್ಯಂತ ಕಳಪೆ ಗುಣಮಟ್ಟದ್ದಾಗಿದೆ. ಪರುಶುರಾಮನ ಪ್ರತಿಮೆಗೆ ಕಳಪೆ ಗುಣಮಟ್ಟದ ತಾಮ್ರವನ್ನು ಬಳಸಲಾಗಿದೆ. ಮೂರ್ತಿಯ ತಲೆ, ಕೈ, ಕಾಲುಗಳು ಮತ್ತು ಕೈಯಲ್ಲಿ ಹಿಡಿದುಕೊಳ್ಳುವ ಕತ್ತಿಯನ್ನು ಪ್ರತ್ಯೇಕವಾಗಿ ತಂದು ಕೆಟ್ಟ ರೀತಿಯಲ್ಲಿ ಜೋಡಿಸಲಾಗಿದೆ. ಇದಕ್ಕಾಗಿ ನಿರ್ಮಿಸಿರುವ ರಸ್ತೆಯೂ ಕಳಪೆ ಗುಣಮಟ್ಟದ್ದಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.
ಪಾರ್ಕ್ ನಿರ್ಮಾಣಕ್ಕೆ ನಿಗದಿಪಡಿಸಿರುವ ಎರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ವೇ ಸಂಖ್ಯೆ 329/1ರ 1.58 ಎಕರೆ ಭೂಮಿ ಗೋಮಾಳಕ್ಕಾಗಿ ಮೀಸಲಿಟ್ಟಿದ್ದಾಗಿದೆ. ಈ ಜಮೀನಿನಲ್ಲಿ ಯಾವುದೇ ಥೀಮ್ ಪಾರ್ಕ್ ನಿರ್ಮಾಣದ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳು ತಿರಸ್ಕರಿಸಿದ್ದಾರೆ. ಆದರೂ ಕಾಮಗಾರಿ ನಡೆಸಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಗೋಮಾಳದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡುವುದಕ್ಕಾಗಿ ಸರ್ಕಾರದ ತೆರಿಗೆ ಹಣವನ್ನು ವ್ಯಯ ಮಾಡಲಾಗುತ್ತಿದ್ದು, ಇದರಿಂದ ಯಾವುದೇ ಉದ್ದೇಶ ಈಡೇರುವುದಿಲ್ಲ ಎಂದು ಹೇಳಿದ್ದರು. ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರೂ ಪ್ರಯೋಜನವಾಗುತ್ತಿಲ್ಲ, ಹಾಗಾಗಿ ಕಾಮಗಾರಿ ರದ್ದು ಮಾಡಬೇಕು. ಈ ಸಂಬಂಧ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವುದಕ್ಕಾಗಿ ಸಮಿತಿಯೊಂದನ್ನು ರಚನೆ ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications