ಉಡುಪಿ ಶ್ರೀಕೃಷ್ಣ ಮಠದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ
ಉಡುಪಿ: ಇತಿಹಾಸ ಪ್ರಸಿದ್ಧ ಉಡುಪಿ ಶ್ರೀಕೃಷ್ಣ ಮಠದಲ್ಲಿ ಭಕ್ತರ ಶಿಸ್ತು ಮತ್ತು ದೇವಸ್ಥಾನದ ಪಾವಿತ್ರ್ಯತೆಯನ್ನು ಕಾಪಾಡುವ ದೃಷ್ಟಿಯಿಂದ ವಸ್ತ್ರ ಸಂಹಿತೆ (Dress Code) ನಿಯಮಗಳನ್ನು ಬಿಗಿಗೊಳಿಸಲಾಗಿದೆ. ಪರ್ಯಾಯ ಶೀರೂರು ಮಠದ ಆಡಳಿತವು ಜೀನ್ಸ್ ಪ್ಯಾಂಟ್, ಟೀ-ಶರ್ಟ್, ಮತ್ತು ಬರ್ಮುಡಾಗಳಂತಹ ಪಾಶ್ಚಿಮಾತ್ಯ ಉಡುಪುಗಳನ್ನು ಧರಿಸಿ ದೇವರ ದರ್ಶನಕ್ಕೆ ಬರುವುದನ್ನು ನಿಷೇಧಿಸಿದೆ.
ವಸ್ತ್ರ ಸಂಹಿತೆ ಇಡೀ ದಿನಕ್ಕೆ ವಿಸ್ತರಣೆ: ಇದುವರೆಗೆ ಮಧ್ಯಾಹ್ನದ ಮಹಾಪೂಜೆಯವರೆಗೆ ಮಾತ್ರ ಪುರುಷರು ಅಂಗಿ (ಶರ್ಟ್) ಮತ್ತು ಬನಿಯನ್ ತೆಗೆದು, ಪಂಚೆ ಅಥವಾ ಶಲ್ಯ ಧರಿಸಿ ದೇವರ ಗರ್ಭಗುಡಿಯ ಸುತ್ತು ಪೌಳಿಯನ್ನು ಪ್ರವೇಶಿಸಬೇಕಿತ್ತು. ಆದರೆ ಈಗ ಈ ನಿಯಮವನ್ನು ಇಡೀ ದಿನಕ್ಕೆ ವಿಸ್ತರಿಸಲಾಗಿದೆ. ವಸ್ತ್ರಸಂಹಿತೆಯ ವಿವರ ಹೀಗಿದೆ.

ಪುರುಷರಿಗೆ: ದೇವಸ್ಥಾನದ ಒಳ ಪ್ರವೇಶಿಸುವಾಗ ಶರ್ಟ್, ಬನಿಯನ್ ತೆಗೆಯುವುದು ಕಡ್ಡಾಯ. ಮೈಮೇಲೆ ಶಲ್ಯ ಹೊದ್ದುಕೊಳ್ಳಬಹುದು.
ಮಹಿಳೆಯರಿಗೆ: ಸೀರೆ, ಚೂಡಿದಾರ್ ಅಥವಾ ಸಭ್ಯವಾದ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿರಬೇಕು.
ನಿಷೇಧಿತ ಉಡುಪುಗಳು: ಜೀನ್ಸ್, ಟೀ-ಶರ್ಟ್, ಸ್ಲೀವ್ಲೆಸ್ (ತೋಳಿಲ್ಲದ) ಬಟ್ಟೆಗಳು, ಬರ್ಮುಡಾ ಮತ್ತು ಶಾರ್ಟ್ಸ್ ಧರಿಸಿ ಬರುವಂತಿಲ್ಲ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪರ್ಯಾಯ ಶೀರೂರು ಮಠದ ದಿವಾನರಾದ ಡಾ ಉದಯಕುಮಾರ್ ಸರಳತ್ತಾಯ, "ಉಡುಪಿಗೆ ಪ್ರವಾಸಕ್ಕೆಂದು ಬರುವವರು ಬೀಚ್ಗಳಿಗೆ ಧರಿಸುವ ಉಡುಪುಗಳಲ್ಲೇ ದೇವಸ್ಥಾನಕ್ಕೂ ಬರುತ್ತಾರೆ. ಇದರಿಂದ ಇತರೆ ಭಕ್ತರ ಏಕಾಗ್ರತೆಗೆ ಮತ್ತು ಮಠದ ಧಾರ್ಮಿಕ ವಾತಾವರಣಕ್ಕೆ ಧಕ್ಕೆಯಾಗುತ್ತಿದೆ. ದೇವಸ್ಥಾನಕ್ಕೆ ಬರುವವರು ಕೃಷ್ಣ ಭಕ್ತರಾಗಿಯೇ ಬರಬೇಕು. ಹಾಗಾಗಿ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಸೂಕ್ತ ಉಡುಪು ಧರಿಸದವರಿಗೆ ಮಠದ ವತಿಯಿಂದಲೇ ಶಲ್ಯಗಳನ್ನು ನೀಡುವ ವ್ಯವಸ್ಥೆ ಮಾಡಲಾಗಿದೆ" ಎಂದು ತಿಳಿಸಿದ್ದಾರೆ.
ದರ್ಶನ ಅವಧಿ ವಿಸ್ತರಣೆ: ಭಕ್ತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಮತ್ತು ಸಾಲುಗಟ್ಟಿ ನಿಲ್ಲುವ ಭಕ್ತರಿಗೆ ಅನುಕೂಲವಾಗಲು ದೇವರ ದರ್ಶನದ ಅವಧಿಯನ್ನೂ ವಿಸ್ತರಿಸಲಾಗಿದೆ. ಇನ್ನು ಮುಂದೆ ಬೆಳಗ್ಗೆ 4 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶವಿರುತ್ತದೆ ಎಂದು ಮಠದ ಮೂಲಗಳು ತಿಳಿಸಿವೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications