Get Updates
Get notified of breaking news, exclusive insights, and must-see stories!

ಕನ್ನಡದಲ್ಲಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ಮೋದಿ

ಬೆಂಗಳೂರು, ಏಪ್ರಿಲ್ 13; ದೇಶದಲ್ಲಿ ಕೋವಿಡ್ ಭೀತಿಯ ನಡುವೆಯೇ ಯುಗಾದಿ ಹಬ್ಬ ಬಂದಿದೆ. ಹಿಂದೂ ಪುರಾಣಗಳ ಪ್ರಕಾರ ಈ ದಿನ ಬ್ರಹ್ಮ ಬ್ರಹ್ಮಾಂಡವನ್ನು ಸೃಷ್ಟಿಸಿದನು. ಆದ್ದರಿಂದ, ಯುಗಾದಿಯನ್ನು ಹೊಸ ವರ್ಷದ ಆರಂಭ ಎಂದು ಆಚರಣೆ ಮಾಡಲಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಯುಗಾದಿ ಹಬ್ಬದ ಸಂದರ್ಭದಲ್ಲಿ ಕರ್ನಾಟಕದ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಮಂಗಳವಾರ ಅವರು ಈ ಕುರಿತು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.

"ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ" ಎಂದು ಅವರು ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Narendra Modi

ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಜನರು ಯುಗಾದಿ ಹಬ್ಬವನ್ನು ಹೆಚ್ಚು ಸಂಭ್ರಮದಿಂದಲೇ ಆಚರಣೆ ಮಾಡುತ್ತಾರೆ. ಮನೆಯ ಮುಂದೆ ಬಣ್ಣ-ಬಣ್ಣದ ರಂಗೋಲಿ ಬರೆದು, ಬಾಗಿಲಿಗೆ ಹಸಿರು ತೋರಣವನ್ನು ಕಟ್ಟಿ, ಹೊಸ ಬಟ್ಟೆ ತೊಟ್ಟು ಹಬ್ಬವನ್ನು ಆಚರಿಸುತ್ತಾರೆ.

ಯುಗಾದಿಯ ದಿನ ಹೊಸ ವರ್ಷದ ಆರಂಭ ಎಂಬ ನಂಬಿಕೆ ಇದೆ. ಯುಗಾಯ ದಿನ ಜನರು ಎಣ್ಣೆ ಸ್ನಾನವನ್ನು ಮಾಡಿ, ಹೊಸ ಬಟ್ಟೆ ತೊಡುತ್ತಾರೆ. ಬೇವು, ಬೆಲ್ಲ ತಿಂದು ಜೀವನ ಸಿಹಿ ಮತ್ತು ಕಹಿಯಿಂದ ಕೂಡಿರುತ್ತದೆ ಎಂಬ ಸಂದೇಶ ಕೊಡುತ್ತಾರೆ. ವರ್ಷದ ಭವಿಷ್ಯವನ್ನು ಪಂಚಾಗದಲ್ಲಿ ಓದಿ ತಿಳಿದುಕೊಳ್ಳುತ್ತಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+