ಯುಜಿಸಿ ಶಾಕ್: ಕೆಎಸ್ಒಯು ಮಾನ್ಯತೆ ರದ್ದು?
ಬೆಂಗಳೂರು, ಜೂ. 18: ನೀವು ಕರ್ನಾಟಕ ಮುಕ್ತ ವಿಶ್ವದ್ಯಾಲಯದಲ್ಲಿ 2012-13ರ ನಂತರ ಡಿಗ್ರಿ ಪಡೆದುಕೊಂಡಿದ್ದೀರಾ? ಹಾಗಾದರೆ ಈ ಸುದ್ದಿಯನ್ನು ಗಮನವಿಟ್ಟು ಓದಿ. ಕೆಎಸ್ ಒಯು ಕೆಲ ನಿಯಮಗಳನ್ನು ಗಾಳಿಗೆ ತೂರಿದೆ ಎಂದು ಹೇಳಿರುವ ಯುಜಿಸಿ ವಿಶ್ವವಿದ್ಯಾಲಯ ನೀಡಿದ್ದ ಪದವಿಗಳ ಮಾನ್ಯತೆಯನ್ನು ರದ್ದು ಮಾಡಿದೆ.
ದೂರ ಶಿಕ್ಷಣಕ್ಕೆ ಸಂಬಂಧಿಸಿದಂತೆ ಯುಜಿಸಿಯ ನಿಯಮಗಳನ್ನು ಕೆಎಸ್ಒಯು ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ 2012 -2013 ರ ನಂತರದ ಮುಕ್ತ ವಿಶ್ವವಿದ್ಯಾನಿಲಯದ ಎಲ್ಲಾ ಕೋರ್ಸ್ ಗಳ ಮಾನ್ಯತೆ ರದ್ದುಗೊಳಿಸಲಾಗಿದೆ ಎಂದು ಯುಜಿಸಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.[ಮಾನಸ ಗಂಗೋತ್ರಿ ವಿವಿ ಘಟಿಕೋತ್ಸವದ ಚಿತ್ರಗಳು]

ವಿದ್ಯಾರ್ಥಿಗಳು ಕೆಎಸ್ಒಯು ವಿವಿಯಲ್ಲಿ 2012 -13 ನಂತರದ ಯಾವುದೇ ವೃತ್ತಿಪರ/ ತಾಂತ್ರಿಕ ಕೋರ್ಸ್ ಗಳಿಗೂ ನೋಂದಣಿ ಮಾಡದಂತೆ ಯುಜಿಸಿ ಎಚ್ಚರಿಕೆ ನೀಡಿದೆ. ವಿಶ್ವವಿದ್ಯಾನಿಲಯ ಮಾನ್ಯತೆ ರದ್ದು ಬಗ್ಗೆ ಸ್ಪಷ್ಟನೆ ನೀಡಿರುವ ಕುಲಪತಿ ಪ್ರೊ. ಎಂ.ಜಿ ಕೃಷ್ಣನ್, ಮಾನ್ಯತೆ ರದ್ದುಗೊಡಿರುವುದರಿಂದ ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ, ಯುಜಿಸಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲಾಗುವುದು. ಯಾವುದೇ ನಿಯಮಾವಳಿಗಳನ್ನು ಮೀರಿರುವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದ್ದಾರೆ.
ಸದ್ಯ ಕೋರ್ಸ್ ಮುಂದುವರಿಸುತ್ತಿರುವ ಮತ್ತು ಕಳೆದ ವರ್ಷಗಳಲ್ಲಿ ಪದವಿ ಪಡೆದುಕೊಂಡವರು ಆತಂಕಕ್ಕೆ ಸಿಲುಕಿದ್ದಾರೆ. ಯುಜಿಸಿ ಮತ್ತು ವಿವಿಯ ತಿಕ್ಕಾಟದಲ್ಲಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಮಸುಕಾಗಲಿದ್ದು ಶೀಘ್ರ ಪರಿಹಾರ ಕಂಡುಕೊಳ್ಳಬೇಕಾಗಿದೆ.
-
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ











Click it and Unblock the Notifications