ಅಮೂಲ್ಯಳನ್ನು ಜೀವನ ಪರ್ಯಂತ ಅಂಡಮಾನ್ ಜೈಲಿನಲ್ಲಿಡಬೇಕು: ಕಾಂಗ್ರೆಸ್
ಬೆಂಗಳೂರು, ಫೆ. 21: ವೈರಿ ರಾಷ್ಟ್ರದ ಬಗ್ಗೆ ಜೈಕಾರ ಹಾಕಿರುವ ಅಮೂಲ್ಯಳನ್ನು ಅಂಡಮಾನ್ ಜೈಲಿನಲ್ಲಿಡುವುದು ಸೂಕ್ತ ಎಂದು ಮಾಜಿ ಸಂಸದ, ಕೆಪಿಸಿಸಿ ವಕ್ತಾರ ವಿ.ಎಸ್. ಉಗ್ರಪ್ಪ ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.
ಈ ರೀತಿಯ ವ್ಯಕ್ತಿಯನ್ನು ಅಂಡಮಾನ್ ಜೈಲಿನಲ್ಲಿ ಇಡುವುದು ಸೂಕ್ತ. ಆಕೆಯ ವಿರುದ್ಧ ಜೀವನ ಪರ್ಯಂತ ಜೈಲಿನಲ್ಲಿ ಉಳಿಯುವಂತೆ ಕ್ರಮ ಕೈಗೊಳ್ಳಬಹುದು. ಒಬ್ಬ ಹೆಣ್ಣುಮಗಳು ಪಾಕಿಸ್ತಾನ ಪರ ಜಿಂದಾಬಾದ್ ಹಾಕಿರುವುದು ಅಕ್ಷಮ್ಯ ಅಪರಾಧ. ಯಾವುದೇ ಭಾರತೀಯರು ಇದನ್ನು ಒಪ್ಪಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ. ಆಕೆ ಮಾತನಾಡುವ ಧಾಟಿ ನೋಡಿದರೆ ಯೋಚನೆ ಮಾಡಿಯೇ ಮಾತನಾಡಿದಂತಿದೆ. ಪ್ರಕರಣವನ್ನು ಶೀಘ್ರ ವಿಚಾರಸೆಗೊಳಪಡಿಸಿ ಕಠಿಣ ಶಿಕ್ಷೆ ನೀಡಬೇಕು. ಇದಕ್ಕೆ ವಿಶೇಷ ಕೋರ್ಟ್ ಸ್ಥಾಪಿಸಿ ಶೀಘ್ರ ತೀರ್ಪು ನೀಡುವಂತಾಗಬೇಕು. ನಮಗೆ ದೇಶ ಮೊದಲು ನಮ್ಮ. ಶತ್ರು ರಾಷ್ಟ್ರಗಳ ಪರ ಘೋಷಣೆ ಕೂಗುವವರಿಗೆ ಭಾರತದಲ್ಲಿ ಸ್ಥಾನ ಇಲ್ಲ. ಈ ರೀತಿಯ ಹೇಳಿಕೆ ನೀಡುವವರ ಬಗ್ಗೆ ಮಾಹಿತಿ ಪಡೆಯಲು ಬೇಹುಗಾರಿಕೆ ಇಲಾಖೆ ಹೆಚ್ಚು ಬಲಿಷ್ಠಗೊಳ್ಳಬೇಕು ಎಂದು ಸಲಹೆ ಕೊಟ್ಟಿದ್ದಾರೆ.
ನಾವು ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿಲ್ಲ: ನಾವು ಬಿರಿಯಾನಿ ತಿನ್ನಲು, ಜರತಾರಿ ಸೀರೆ ಕೊಡಲು ಪಾಕಿಸ್ತಾನಕ್ಕೆ ಹೋಗಿಲ್ಲ ಎನ್ನುವ ಮೂಲಕಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪಾಕಿಸ್ತಾನ ಭೇಟಿಯನ್ನು ವಿ.ಎಸ್. ಉಗ್ರಪ್ಪ ಅವರು ಪರೋಕ್ಷವಾಗಿ ಟೀಕಿಸಿದ್ದಾರೆ. ನಾವು ಸ್ಟಂಟ್ ಮಾಡಲು ಕಾಶ್ಮೀರ ಪರವಾಗಿಲ್ಲ. ಬಿಜೆಪಿಯವರು ಈಗಲೂ ತಮ್ಮ ಕಚೇರಿಗಳಲ್ಲಿ ರಾಷ್ಟ್ರ ಧ್ವಜ ಹಾರಿಸುವುದಿಲ್ಲ. ಕಾಂಗ್ರೆಸ್ ರಾಷ್ಟ್ರ ರಕ್ಷಣೆ ವಿಚಾರದಲ್ಲಿ ಕಾಂಗ್ರೆಸ್ ಯಾವತ್ತು ಆಟ ಆಡುವುದಿಲ್ಲ ಎಂದಿದ್ದಾರೆ.

ಇನ್ನು ಹುಬ್ಬಳ್ಳಿ ಹಾಗೂ ಬೆಂಗಳೂರು ಘಟನೆಗಳ್ನು ಕಾಂಗ್ರೆಸ್ ಖಂಡಿಸುತ್ತದೆ: ಹುಬ್ಬಳ್ಳಿಯಲ್ಲಿ ನಡೆದ ಘಟನೆ ಹಾಗೂ ಬೆಂಗಳೂರಿನಲ್ಲಿ ನಡೆದ ಘಟನೆಯನ್ನು ಕಾಂಗ್ರೆಸ್ ಖಂಡಿಸುತ್ತದೆ. ಕಾಂಗ್ರೆಸ್ ಯಾವತ್ತೂ ಕಾಶ್ಮೀರ ಪ್ರತ್ಯೇಕತೆಗೆ ಬೆಂಬಲ ಸೂಚಿಸಿಲ್ಲ. ನಮಗೆ ದೇಶ ಮುಖ್ಯ. ಫ್ರೀ ಕಾಶ್ಮೀರ್ ಎಂದರೆ ಅಲ್ಲಿ ತಡೆ ಹಿಡಿದಿದ್ದ ಇಂಟರ್ನೆಟ್ ಹಾಗೂ ಬೇರೆ ಸೌಲಭ್ಯಗಳನ್ನು ನೀಡುವಂತೆ ಒತ್ತಾಯ ಮಾಡಿದ್ದು. ಕಾಶ್ಮೀರ್ ಭಾರತದ ಅವಿಭಾಜ್ಯ ಅಂಗ ಎಂದು ಉಗ್ರಪ್ಪ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ಕೊಟ್ಟಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications