ಕೆಎಂಎಫ್: ಆರಂಭದಲ್ಲೇ ರೇವಣ್ಣಗೆ ಮುಖಭಂಗ ಮಾಡಿದ ಜಾರಕಿಹೊಳಿ
Recommended Video
ಬೆಂಗಳೂರು, ಸೆ 10: ಕರ್ನಾಟಕ ಹಾಲು ಮಹಾಮಂಡಳಿಯ (ಕೆಎಂಎಫ್) ಹಾಲು ಹಂಚಿಕೆ ವಿಚಾರದಲ್ಲಿ, ಮಂಡಳಿಯ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಮಾಜಿ ಅಧ್ಯಕ್ಷ ಎಚ್ ಡಿ ರೇವಣ್ಣಗೆ ಬಲವಾದ ಪೆಟ್ಟು ನೀಡಿದ್ದಾರೆ.
ಬಿಜೆಪಿ ಶಾಸಕರೂ ಆಗಿರುವ ಜಾರಕಿಹೊಳಿ, ಯುಎಚ್ಟಿ (Ultra High Temparature) ಹಾಲು ಹಂಚಿಕೆ ಪೂರೈಕೆ ಪ್ರಮಾಣವನ್ನು ಮರುಹಂಚಿಕೆ ಮಾಡಿದ್ದು, ಕೋಲಾರ - ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಸಹಕಾರ ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ (ಕೋಚಿಮುಲ್) ಸಿಂಹಪಾಲನ್ನು ನೀಡಿದ್ದಾರೆ.
ಕೆಎಂಎಫ್, ರಕ್ಷಣಾ ಸಚಿವಾಲಯದೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ. ಅದರಂತೇ, ಸೇನೆಗೆ ವರ್ಷಕ್ಕೆ ಸುಮಾರು ಒಂದು ಕೋಟಿ ಲೀಟರ್ ಯುಎಚ್ಟಿ ಹಾಲನ್ನು ಪೂರೈಸಬೇಕಿದೆ.

ಸುಮಾರು ಹತ್ತು ವರ್ಷಗಳಿಂದ, ಸಂಪೂರ್ಣವಾಗಿ ಈ ಹಾಲನ್ನು ಕೋಚಿಮುಲ್, ಸೇನೆಗೆ ಒದಗಿಸುತ್ತಿತ್ತು. ಆದರೆ, 2018ರಲ್ಲಿ, ಒಟ್ಟು ಪೂರೈಕೆಯ ಅರ್ಧ ಭಾಗವನ್ನು (ಸುಮಾರು ಐವತ್ತು ಲಕ್ಷ ಲೀಟರ್) ಹಾಸನ ಜಿಲ್ಲಾ ಒಕ್ಕೂಟಕ್ಕೆ ಮರುಹಂಚಿಕೆ ಮಾಡಲಾಗಿತ್ತು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಕೋಚಿಮುಲ್ ಸದಸ್ಯರು, ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರ ಬಳಿ ಮನವಿಯನ್ನು ಸಲ್ಲಿಸಿ, ಯುಎಚ್ಟಿ ಹಾಲು ಪೂರೈಕೆಯನ್ನು ಸಂಪೂರ್ಣವಾಗಿ ತಮಗೇ ನೀಡುವಂತೆ ಒತ್ತಾಯಿಸಿದ್ದರು. ಆದರೆ, ಇದಕ್ಕೆ ರೇವಣ್ಣ ಅನುಮತಿಯನ್ನು ನೀಡಿರಲಿಲ್ಲ.
ಈಗ, ಮಾಲೂರು ಶಾಸಕರಾಗಿರುವ ನಂಜೇಗೌಡರ ನೇತೃತ್ವದಲ್ಲಿ ಮತ್ತೆ ಮನವಿಯನ್ನು ಸಲ್ಲಿಸಲಾಗಿ, ಇದಕ್ಕೆ, ಕೆಎಂಎಫ್ ಅಧ್ಯಕ್ಷರು ಒಪ್ಪಿಗೆಯನ್ನು ನೀಡಿದ್ದಾರೆ. ಹೀಗಾಗಿ, ಮುಂದಿನ ಅವಧಿಯವರೆಗೆ, ಸೇನೆಗೆ 90.50 ಲಕ್ಷ ಲೀಟರ್ ಯುಎಚ್ಟಿ ಹಾಲನ್ನು ಕೋಚಿಮುಲ್ ಪೂರೈಸಲಿದೆ. ಇದರಿಂದ, ರೇವಣ್ಣ ಮುಖಭಂಗ ಎದುರಿಸುವಂತಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications