Flight-Drone: ವಿಮಾನ- ಡ್ರೋನ್ ಸಂಬಂಧಿತ ತಯಾರಿಕಾ ಘಟಕ ಸ್ಥಾಪನೆಗೆ UK ಕಂಪನಿ ಒಲವು: ಎಂಬಿ ಪಾಟೀಲ
ಲಂಡನ್/ಬೆಂಗಳೂರು, ನವೆಂಬರ್ 26: ಕರ್ನಾಟಕ ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಹೂಡಿಕೆ ಸೆಳೆಯುವ ಉದ್ದೇಶದಿಂದ ಮೂರು ದಿನಗಳ ಇಂಗ್ಲೆಂಡ್ ಪ್ರವಾಸದಲ್ಲಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಅವರು ಗ್ರೀನ್-ಜೆಟ್ಸ್, ನಥಿಂಗ್, ಫಿಡೋ ಎಐ, ರೋಡ್ಸ್ ಗ್ರೂಪ್, ಎಂಬಿಡಿಎ ಮುಂತಾದ ದಿಗ್ಗಜ ಕಂಪನಿಗಳೊಂದಿಗೆ ಮಾತುಕತೆ ನಡೆಸಿದರು. ಡ್ರೋನ್, ವಿಮಾನಗಳಿಗೆ ಬೇಕಾದವುಗಳ ತಯಾರಿಕೆ ಘಟಕ ಇಲ್ಲಿ ತೆರೆಯಲು ಕಂಪನಿಗಳು ಒಲವು ವ್ಯಕ್ತಪಡಿಸಿವೆ ಎಂದು ಅವರು ಮಾಹಿತಿ ನೀಡಿದರು.
ಇಂಗ್ಲೇಂಡ್ನಲ್ಲಿನ ಫೋರ್ ಸೀಸನ್ ಹೋಟೆಲಿನಲ್ಲಿ ಎರಡನೇ ದಿನ ಮಂಗಳವಾರ ಸಚಿವರು ಮಾತುಕತೆ ನಡೆಸಿದರು. ಡ್ರೋನ್ ಮತ್ತು ಮುಂದಿನ ತಲೆಮಾರಿನ ವಿಮಾನಗಳಿಗೆ ಬೇಕಾಗುವ ಅಧಿಕ ಸಾಮರ್ಥ್ಯದ ಎಲೆಕ್ಟ್ರಿಕ್ ಜೆಟ್ ಮತ್ತು ಡಕ್ಟೆಡ್-ಫ್ಯಾನ್ ಪ್ರೊಪಲ್ಶನ್ ತಯಾರಿಕೆಗೆ ಹೆಸರಾಗಿರುವ ಗ್ರೀನ್ ಜೆಟ್ಸ್ ಕಂಪನಿಯು ಬೆಂಗಳೂರಿಗೆ ಸಮೀಪವಿರುವ ಜಾಗದಲ್ಲಿ ತನ್ನ ಉತ್ಪಾದನಾ ಘಟಕ ಸ್ಥಾಪಿಸುಲು ಮನಸ್ಸು ಮಾಡಿದೆ. ಆಯಾ ಕಂಪನಿಗಳು ಕೇಳುವ ಅಗತ್ಯ ಸಂಪನ್ಮೂಲ, ಸಹಕಾರವನ್ನು ನೀಡಲು, ಅಗತ್ಯ ಭೂಮಿ ಒದಗಿಸುವುದಾಗಿ ಸಚಿವರು ಭರವಸೆ ನೀಡಿದ್ದಾಗಿ ತಿಳಿಸಿದರು.

AI ಸೇರಿ ವಿವಿಧ ಕಂಪನಿಗಳಿಂದ ನಗರದ ಪ್ಲಾಂಟ್..!
ಫಿಡೋ ಎಐ ಕಂಪನಿ ಕೂಡ ಕರ್ನಾಟಕದಲ್ಲಿ ತನ್ನದೊಂದು ತಯಾರಿಕಾ ಘಟಕ ಆರಂಭಿಸುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆದಿದೆ. ಈ ಬಗ್ಗೆ ಉನ್ನತಾಧಿಕಾರಿಗಳು ಮಾಹಿತ ನೀಡಿದ್ದಾರೆ. ವಿನ್ಯಾಸಕ್ಕೆ ಹೆಚ್ಚಿನ ಮಹತ್ತ್ವವಿರುವ ಸ್ಮಾರ್ಟ್ ಫೋನ್ ತಯಾರಿಸುವ ನಥಿಂಗ್ ಕಂಪನಿಯೊಂದಿಗಿನ ಚರ್ಚೆಯಲ್ಲಿ ರಾಜ್ಯದಲ್ಲಿ ಒಂದು ತಯಾರಿಕಾ ಸ್ಥಾವರ ಸ್ಥಾಪಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದರು.
ಇನ್ನೂ ಉನ್ನತ ಎಂಜಿನಿಯರಿಂಗ್ ವಲಯದಲ್ಲಿ ಹೆಸರು ಮಾಡಿರುವ ರೋಡ್ಸ್ ಗ್ರೂಪ್ ಜತೆಗಿನ ಮಾತುಕತೆಯಲ್ಲಿ, ಕಂಪನಿಯ ಉನ್ನತ ಮಟ್ಟದ ನಿಯೋಗವು ಆದಷ್ಟು ಬೇಗ ಕರ್ನಾಟಕಕ್ಕೆ ಭೇಟಿ ನೀಡಬೇಕೆಂದು ಆಹ್ವಾನಿಸಲಾಗಿದೆ ಎಂದು ಪಾಟೀಲ ತಿಳಿಸಿದ್ದಾರೆ.
ಭಾರೀ ಹೂಡಿಕೆಗೆ ವಿದೇಶಿ ಕಂಪನಿಗಳ ಒಲವು
ಸಚಿವರೊಂದಿಗೆ ಗ್ರೀನ್ ಜೆಟ್ಸ್ ಸಿಇಒ ಅನ್ಮೋಲ್ ಮನೋಹರ್, ಫಿಡೋ ಎಐ ಸಹ ಸಂಸ್ಥಾಪಕಿ ವಿಕ್ಟೋರಿಯಾ ಎಡ್ವರ್ಡ್ಸ್, ನಥಿಂಗ್ ಕಂಪನಿಯ ಜಾಗತಿಕ ಕಾರ್ಯತಂತ್ರ ನಿರ್ದೇಶಕಿ ಟಮೀನಾ, ರೋಡ್ಸ್ ಗ್ರೂಪ್ ಸಿಇಒ ಮಾರ್ಕ್ ರಿಡ್ಜ್ವೇ ಮತ್ತು ಎಂಬಿಡಿಎ ಕಂಪನಿಯ ಭಾರತೀಯ ಪ್ರಾದೇಶಿಕ ವ್ಯವಹಾರಗಳ ಮುಖ್ಯಸ್ಥ ಟಾಮ್ ಫೆಲ್ ಪಾಲ್ಗೊಂಡಿದ್ದರು. ಅವರೆಲ್ಲ ಸಚಿವರಿಗೆ ಕರ್ನಾಟಕದಲ್ಲಿ ಹೂಡಿಕೆ ಮಾಡುವ ಆಸಕ್ತಿ ಹೊಂದಿರುವ ಬಗ್ಗೆ ತಿಳಿಸಿದರು.
ಜಿಸಿಸಿ ಸೆಂಟರ್ ಸ್ಥಾಪನೆಗೆ
ಇನ್ನೂ ಮೊದಲ ದಿನ ಸೋಮವಾರ ಸಚಿವರು ಎಸ್.ಸಿ.ಐ ಸೆಮಿಕಂಡಕ್ಟರ್ ಕಂಪನಿ ಮಾತ್ರವಲ್ಲದೆ, ವಿಯರ್ ಗ್ರೂಪ್, ಲೇಟೋಸ್ ಡೇಟಾ ಸೆಂಟರ್, ಸ್ಯಾಮ್ಕೋ ಹೋಲ್ಡಿಂಗ್ಸ್, ಎ.ಆರ್.ಎಂ. ಸೆಮಿಕಂಡಕ್ಟರ್ಸ್ ಕಂಪನಿಗಳ ಮುಖ್ಯಸ್ಥರ ಜತೆ ಚರ್ಚಿಸಿದರು. ಈ ವೇಳೆ ಎಸ್.ಸಿ.ಐ ಸೆಮಿಕಂಡಕ್ಟರ್ಸ್ ಕಂಪನಿಯು ಕರ್ನಾಟಕದಲ್ಲಿ ತನ್ನ ಗ್ಲೋಬಲ್ ಕೇಪಬಿಲಿಟಿ ಸೆಂಟರ್ (ಜಿಸಿಸಿ) ಸ್ಥಾಪಿಸುವುದಾಗಿ ತಿಳಿಸಿದೆ. ಸರ್ಕಾರ ತನ್ನಿಂದಾಗುವ ಎಲ್ಲ ಸಹಕಾರ, ನೆರವು ನೀಡುವುದಾಗಿ ಸಚಿವರು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications