ವಿಧಾನಪರಿಷತ್ಗೆ ಮೂವರ ಹೆಸರು ಅಂತಿಮ! ವಿರೋಧದ ನಡುವೆ ಸೀತಾರಾಮ್ ಮಣೆ ಹಾಕಿದ ಹೈಕಮಾಂಡ್!
ಬೆಂಗಳೂರು, ಆಗಸ್ಟ್ 16: ತೆರವಾಗಿರುವ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಸುಧಾಮ್ ದಾಸ್ ಅವರಲ್ಲದೆ ಮಾಜಿ ಸಚಿವರಾದ ಉಮಾಶ್ರೀ ಮತ್ತು ಎಂ.ಆರ್.ಸೀತಾರಾಮ್ ಅವರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದು ತಿಳಿದುಬಂದಿದೆ.
ವಿಧಾನಪರಿಷತ್ಗೆ ನಟಿ, ಮಾಜಿ ಸಚಿವೆ ಉಮಾಶ್ರೀ ಎಂಆರ್ ಸೀತಾರಾಮ್ ಹಾಗೂ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನೂ ಅಂತಿಮಗೊಳಿಸಿ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ರವಾನಿಸಿದ್ದಾರೆ. ಇನ್ನೂ ನಾಮನಿರ್ದೇಶನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು ಎಂದು ತಿಳಿದು ಬಂದಿದೆ.

ಈಗಾಗಲೇ ಕಾಂಗ್ರೆಸ್ ಪಾಳಯದಲ್ಲೆ ಕೆಲವು ನಾಯಕರ ವಿರೋಧದ ನಡುವೆಯೂ ಎಂಆರ್ ಸೀತಾರಾಮ್ ಹಾಗೂ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನೂ ಅಂತಿಮಗೊಳಿಸಿದ್ದಾರೆ. ಅಲ್ಲದೇ ಕಲಾವಿದರ ಕೋಟಾದಡಿ ಮಾಜಿ ಸಚಿವೆ, ನಟಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ್ ಹಾಗೂ ಸಮಾಜಸೇವೆ ಹೆಸರಲ್ಲಿ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್ ಅವರಿಗೆ ಸ್ಥಾನ ನೀಡಲಾಗಿದೆ.
ಕಲಾವಿದರ ಕೋಟಾದಡಿ ಮಾಜಿ ಸಚಿವೆ, ನಟಿ ಉಮಾಶ್ರೀ ಅವರಿಗೆ ನೀಡಿರುವುದನ್ನ ಹೊರತು ಪಡಿಸಿ, ಸೀತಾರಾಮ್, ಸುಧಾಮ್ ದಾಸ್ ಹೆಸರಿಗೆ ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಸೀತಾರಾಮ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ತನಿಖೆಯಲ್ಲಿದೆ. ಅಲ್ಲದೇ ಐದು ತಿಂಗಳ ಹಿಂದಷ್ಟೇಕಾಂಗ್ರೆಸ್ ಪಕ್ಷಕ್ಕೆ ಸುಧಾಮ್ ದಾಸ್ ಅವರು ಸೇರ್ಪಡೆಯಾಗಿದ್ದು, ಈ ಇಬ್ಬರನ್ನ ಮೇಲ್ಮನೆಗೆ ಕಳಿಸುವ ಕುರಿತು ಹಿರಿಯ ಸಚಿವರಾದ ಡಾ.ಜಿ.ಪರಮೇಶ್ವರ್, ಹೆಚ್ಸಿ ಮಹದೇವಪ್ಪ, ಕೆಹೆಚ್ ಮುನಿಯಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಸೀತಾರಾಮ್, ಸುಧಾಮ್ ದಾಸ್ ಅವರಿಗೆ ಕಾಂಗ್ರೆಸ್ ಮಣೆ ಹಾಕಿರುವ ಹಿನ್ನಲೆ ಪಕ್ಷದ ಕಾರ್ಯಕರ್ತರು ಹಾಗೂ ಹಿರಿಯ ಸಚಿವರು ಸಾಕಷ್ಟು ವಿರೋಧವನ್ನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸೀತಾರಾಮ್ ಬದಲಿಗೆ ಮನೋಹರ್ ಅವರಿಗೆ ಪರಿಷತ್ ಸ್ಥಾನ ನೀಡುವಂತೆ ಕಾರ್ಯಕರ್ತರು ಮನವಿ ಮಾಡಿದ್ದು, ಈ ಕುರಿತು ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನ ಭುಗಿಲೆದಿದ್ದು, ಅಸಮಾಧಾನ ಶಮನಕ್ಕೆ ಕೈ ನಾಯಕರು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.
-
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ












Click it and Unblock the Notifications