ಪಿಎಸ್ ಐ ಪರೀಕ್ಷೆ ಅಕ್ರಮ ಆರೋಪಿ ಮನೆಗೆ ಉಮೇಶ್ ಜಾಧವ ಭೇಟಿ : ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
ಕಲಬುರಗಿ, ಏಪ್ರಿಲ್ 18: ಸಾವಿರಾರು ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡಿದ ಪಿಎಸ್ಐ ಪರೀಕ್ಷೆ ಅಕ್ರಮ ಹಗರಣದ ಆರೋಪಿ ಮನೆಗೆ ಹೋಗಿ ಬೆಂಬಲ ಕೋರಿ ಬಂದಿರುವ ಬಗ್ಗೆ ಸಂಸದ ಉಮೇಶ್ ಜಾಧವ್ ಸ್ಪಷ್ಟನೆ ನೀಡಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.
ಈ ಕುರಿತು ಕಲಬುರಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಸುಮಾರು 58,000 ಅಭ್ಯರ್ಥಿಗಳು ಪಿಎಸ್ ಐ ಪರೀಕ್ಷೆ ಬರೆದಿದ್ದರು. ಅಕ್ರಮ ಹಗರಣದ ಬಯಲಿಗೆ ಬಂದ ನಂತರ ಒಟ್ಟು 114 ಜನರನ್ನು ಬಂಧಿಸಲಾಗಿದೆ. 54 ಅಭ್ಯರ್ಥಿಗಳು ಅದಾಗಲೇ ಆಯ್ಕೆಯಾಗಿದ್ದರು ಅವರನ್ನು ಖಾಯಂ ಸಸ್ಪೆಂಡ್ ಮಾಡಲಾಗಿದೆ. ಅವರಲ್ಲಿ 24 ಅಭ್ಯರ್ಥಿಗಳು ಕಲಬುರಗಿ ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದರು.

ಹಗಲು ರಾತ್ರಿ ಕಷ್ಟಪಟ್ಟು ಭವಿಷ್ಯದ ಕನಸು ಕಟ್ಟಿಕೊಂಡು ಪರೀಕ್ಷೆ ಬರೆದ ನೈಜ ಅಭ್ಯರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿದ ಆರೋಪಿ ಆರ್ ಡಿ ಪಾಟೀಲ ಮನೆಗೆ ಹೋಗಿ ಚುನಾವಣೆಯಲ್ಲಿ ಬೆಂಬಲ ಕೋರಿದ್ದರ ಬಗ್ಗೆ ಹಾಗೂ ರಾಮನವಮಿ ಉತ್ಸವದಲ್ಲಿ ಮತ್ತೊಬ್ಬ ಆರೋಪಿಯ ಜೊತೆ ಜಾಧವ ಭಾಗಿಯಾಗಿರುವ ಕುರಿತು ಸ್ಪಷ್ಟನೆ ನೀಡಲಿ. ಅಥವಾ ವಿರೋಧ ಪಕ್ಷದ ನಾಯಕ ಆರ್ ಅಶೋಕ ಈ ಬಗ್ಗೆ ರಾಜ್ಯದ ಜನರಿಗೆ ವಿವರಣೆ ನೀಡಲಿ ಎಂದು ಒತ್ತಾಯಿಸಿದರು.
ಚಿಂಚೋಳಿ ಸಂಸದರು ಹೇಗಾದರೂ ಮಾಡಿ ಮತ ಪಡೆಯಲೇ ಬೇಕು ಎಂದುಕೊಂಡು ಬೆಂಬಲ ಕೇಳಲು ಹೋಗಿದ್ದರೋ ಅಥವಾ ಮೊದಲಿನಿಂದಲೂ ಅವರೊಂದಿಗೆ ಜುಗಲ್ ಬಂಧಿ ಇತ್ತೋ ಗೊತ್ತಿಲ್ಲ. ಅಕ್ರಮದ ಆರೋಪಿ ಆರ್ ಡಿ ಪಾಟೀಲ ಈಗ ಜೈಲಿನಲ್ಲಿದ್ದಾನೆ ಇವರು ಅಲ್ಲಿಗೆ ಹೋಗಿರುವುದು ನೋಡಿದರೆ ಬಿಜೆಪಿ ಭ್ರಷ್ಟರೊಂದಿಗೆ ಕೈ ಜೋಡಿಸಿದೆ ಎನ್ನುವ ಅನುಮಾನ ಮೂಡುತ್ತದೆ ಎಂದು ಆರೋಪಿಸಿದರು.
ಪರೀಕ್ಷೆಗಳಲ್ಲಿ ಅಕ್ರಮವಾದರೆ ಲಕ್ಷಾಂತರ ಜನರಿಗೆ ಪರಿಣಾಮ ಬೀರುತ್ತದೆ. ನೈಜ ಅಭ್ಯರ್ಥಿಗಳಿಗೆ ತುಂಬಾ ತೊಂದರೆಯಾಗುತ್ತದೆ. ಅಕ್ರಮ ಬಯಲಿಗೆ ಬಂದಾಗ ಕಾನೂನು ಪ್ರಕ್ರಿಯೆಗಳು ಮುಗಿಯುವದರೊಳಗೆ ಬಹಳ ಜನ ಅಭ್ಯರ್ಥಿಗಳು ಮುಂದಿನ ಪರೀಕ್ಷೆ ಬರೆಯಲು ಆಸಕ್ತಿ ಕಳೆದುಕೊಂಡಿರುತ್ತಾರೆ. ಅಲ್ಲದೇ, ಕೆಲವರ ವಯಸ್ಸು ಮುಗಿರುತ್ತದೆ. ಆದರೆ, ಇದೆಲ್ಲ ಬಿಜೆಪಿ ನಾಯಕರಿಗೆ ಈ ತರಹದ ಆಲೋಚನೆಗಳು ಬರುವುದಿಲ್ಲ ಎಂದು ಹೇಳಿದರು.
ಬಿಜೆಪಿ ಸರ್ಕಾರ ಅವಧಿಯಲ್ಲಿ ಪರೀಕ್ಷೆಗಳಲ್ಲಿ ಅಕ್ರಮ ಸರ್ವೇ ಸಾಮಾನ್ಯವಾಗಿದ್ದವು.ಎಇ, ಜೆಇ, ಕೆಪಿಟಿಸಿಎಲ್ ಸೇರಿದಂತೆ ಪಿಎಸ್ವೈಗಳ ಪರೀಕ್ಷೆ ಗಳಲ್ಲಿ ಅಕ್ರಮ ನಡೆದಿವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಕ್ರಮ ತಡೆಗೆ ಬಿಲ್ ತಂದಿದ್ದೇವೆ. ಅಂದಿನ ಗೃಹ ಸಚಿವ ಅರಗ ಜ್ಞಾನೇಂದ್ರ ಅತ್ಯಂತ ಅಸಮರ್ಥ ಸಚಿವರಾಗಿದ್ದರು. ಆಗ ಅವರೇ ಆರೋಪಿಯೊಬ್ಬರ ಮನೆಗೆ ಹೋಗಿ ಗೋಡಂಬಿ ದ್ರಾಕ್ಷಿ ತಿಂದು ಬಂದಿದ್ದರು. ಈಗ ಜಾಧವ ಊಟ ಮಾಡಿ ಬಂದಿದ್ದಾರೆ ಅಷ್ಟೇ, ಎಂದು ಟೀಕಿಸಿದರು.
ಪರೀಕ್ಷೆಗಳಲ್ಲಿ ಅಕ್ರಮ ತಡೆಯಲು ಕಾಯಿದೆ ತರುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದೆ. ಮತ್ತೊಂದು ಕಡೆ ಮೋದಿ ಭ್ರಷ್ಟಾಚಾರಿಗಳ ವಿರುದ್ದ ಕಠಿಣ ಕ್ರಮದ ಮಾತುಗಳನ್ನಾಡುತ್ತಿದ್ದಾರೆ. ಇಲ್ಲಿ ನೋಡಿದರೆ ಅಭ್ಯರ್ಥಿ ಭ್ರಷ್ಟಚಾರಿಗಳ ಮನೆಗೆ ಹೋಗಿ ಬರುತ್ತಾರೆ. ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕಲಬುರಗಿಗೆ ಬರುತ್ತಿದ್ದಾರೆ ಅವರಿಗೆ ಸ್ವಾಗತ ಈ ವಿಷಯದ ಕುರಿತಂತೆ ಜನರಿಗೆ ಉತ್ತರ ನೀಡಲಿ ಎಂದು ಖರ್ಗೆ ಆಗ್ರಹಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications