ಕೇಂದ್ರ ಸಚಿವರ ಎದುರು ಮಹತ್ವದ ಬೇಡಿಕೆ ಇಟ್ಟ ಸಚಿವ ಉಮೇಶ್ ಕತ್ತಿ!
ಬೆಂಗಳೂರು, ಫೆ. 12: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ಅವರು ನವದೆಹಲಿಯಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ರಾಜ್ಯ ಸಚಿವ ರಾವ್ ಸಾಹೇಬ್ ದಾನ್ವೆ ಅವರನ್ನು ಭೇಟಿಯಾಗಿ ರಾಜ್ಯದ ಪಡಿತರ ವ್ಯವಸ್ಥೆಯ ಸ್ಥಿತಿಗತಿ ಬಗ್ಗೆ ಹಾಗೂ ಪಡಿತರ ವ್ಯವಸ್ಥೆಯಲ್ಲಿ ರಾಗಿ ಮತ್ತು ಜೋಳ ವಿತರಣೆ ಬಗ್ಗೆ ಚರ್ಚಿಸಿದ್ದಾರೆ.
ಪ್ರಸ್ತುತ ಪಡಿತರ ಸರಬರಾಜು ವ್ಯವಸ್ಥೆಯಲ್ಲಿ ಅಕ್ಕಿ ಮತ್ತು ಗೋಧಿಯನ್ನು ವಿತರಣೆ ಮಾಡಲಾಗುತ್ತಿದೆ. ಅಕ್ಕಿ ಮತ್ತು ಗೋಧಿ ವಿತರಣೆಯನ್ನು ಕಡಿತಗೊಳಿಸಿ, ಕಡಿತಗೊಳಿಸಿದ ಪ್ರಮಾಣಕ್ಕೆ ಪರ್ಯಾಯವಾಗಿ ರಾಗಿ, ಜೋಳ ಹಾಗೂ ಸ್ಥಳೀಯ ಧಾನ್ಯಗಳನ್ನು ವಿತರಿಸಲು ಅವಕಾಶ ಮಾಡಿಕೊಡಬೇಕೆಂದು ಇದೇ ಸಂದರ್ಭದಲ್ಲಿ ಸಚಿವ ಕತ್ತಿ ಮನವಿ ಪತ್ರ ಸಲ್ಲಿಸಿದರು.

ಭೌಗೋಳಿಕವಾಗಿ ಸ್ಥಳೀಯ ಜನರ ಆಹಾರ ಪದ್ದತಿಗೆ ಅನುಸಾರವಾಗಿ ಪಡಿತರ ವ್ಯವಸ್ಥೆಯನ್ನು ವಿತರಣೆ ಮಾಡಬೇಕಾಗುತ್ತದೆ, ಪ್ರಸ್ತುತ ಅಕ್ಕಿ ಹಾಗೂ ಗೋಧಿಯನ್ನು ಮಾತ್ರ ಸರಬರಾಜು ಮಾಡಲಾಗುತ್ತಿದೆ. ಭೌಗೋಳಿಕ ಆಹಾರ ಪದ್ದತಿಗೆ ವಿರುದ್ಧವಾಗಿ ಒಂದೇ ವಿಧದ ಆಹಾರ ಸೇವನೆಯಿಂದ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ಒಂದು ಪ್ರದೇಶದ ರೈತರಿಗೆ ಮಾತ್ರ ಲಾಭವಾಗುತ್ತಿದ್ದು, ಸ್ಥಳೀಯ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಲಭಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಕ್ಕಿ, ಗೋಧಿ ಪ್ರಮಾಣ ಕಡಿತಗೊಳಿಸಿ, ಕಡಿತಗೊಳಿಸಿದ ಪ್ರಮಾಣದ ಸಬ್ಸಿಡಿ ದರವನ್ನು ಕರ್ನಾಟಕದ ಆಹಾರ ಪದ್ದತಿಯಲ್ಲಿ ಬಳಸುವ ರಾಗಿ, ಜೋಳ ಹಾಗೂ ಸ್ಥಳೀಯ ಧಾನ್ಯಗಳ ಖರೀದಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಲಾಯಿತು.

Recommended Video
ಮನವಿ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವ ರಾವ್ ಸಾಹೇಬ್ ದಾನ್ವೆ, ಕರ್ನಾಟಕ ಆಹಾರ ಇಲಾಖೆಯ ಅಲೋಚನೆ ಜನರ ಹಿತದೃಷ್ಟಿಯಿಂದ ಅತ್ಯುತ್ತಮವಾದದ್ದು, ಇದರ ಅನುಷ್ಠಾನಕ್ಕೆ ಚಾಲ್ತಿಯಲ್ಲಿರುವ ನೀತಿಯನ್ನು ಬದಲಾವಣೆ ಮಾಡಬೇಕು, ಈ ಬಗ್ಗೆ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿ ಹೊಸ ಪಾಲಿಸಿ ಅನುಷ್ಠಾನಕ್ಕೆ ಕ್ರಮವಹಿಸಲಾಗುವುದೆಂದು ತಿಳಿಸಿದರು. ಈ ವೇಳೆ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಇಲಾಖೆಯ ಕಾರ್ಯದರ್ಶಿ ಬಿ.ಹೆಚ್. ಅನಿಲ್ ಕುಮಾರ್, ಕೇಂದ್ರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications