ಕೇಂದ್ರ ಬಜೆಟ್ 2019 ಹೊಸ ಭಾರತಕ್ಕೆ ಬುನಾದಿ : ಜೋಶಿ
ಬೆಂಗಳೂರು, ಜುಲೈ 05 : 'ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಚೊಚ್ಚಲ ಬಜೆಟ್ ಹೊಸ ಭಾರತಕ್ಕೆ ಬುನಾದಿಯಾಗಲಿದೆ' ಎಂದು ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಶುಕ್ರವಾರ ಬಜೆಟ್ ಮಂಡನೆ ಮಾಡಿದ ಬಳಿಕ ಮಾತನಾಡಿದ ಧಾರವಾಡ ಸಂಸದ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, '2ನೇ ಅವಧಿಯ ಮೊದಲ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ' ಎಂದರು.
'ಈ ಬಜೆಟ್ ನರೇಂದ್ರ ಮೋದಿ ಅವರ ನವ ಭಾರತದ ಕಲ್ಪನೆಗೆ ಬಹುದೊಡ್ಡ ಹೆಜ್ಜೆಯನ್ನು ಇಟ್ಟಿದೆ. ಮುಖ್ಯವಾಗಿ ದೇಶದಲ್ಲಿ ಮೂಲಭೂತ ಸೌಕರ್ಯಗಳು ಅಭಿವೃದ್ಧಿಯಾಗಬೇಕು, ಅದರ ಮೂಲಕ ಆರ್ಥಿಕತೆ ಅಭಿವೃದ್ಧಿಗೊಳ್ಳಬೇಕು' ಎಂದು ತಿಳಿಸಿದರು.

'ಬಡವರು, ಕೂಲಿ ಕಾರ್ಮಿಕರು, ರೈತರು ಇವರ ಯೋಗಕ್ಷೇಮವನ್ನು ಸರಿಯಾಗಿ ನೋಡಿಕೊಳ್ಳಬೇಕು. 2022ರೊಳಗಾಗಿ ವಿಶೇಷವಾಗಿ ರೈತರ ಆದಾಯ ದ್ವಿಗುಣವಾಗಬೇಕು ಈ ಎಲ್ಲಾ ಅಂಶಗಳನ್ನು ನೋಡಿಕೊಂಡು ಬಜೆಟ್ ಮಂಡಿಸಲಾಗಿದೆ' ಎಂದು ಜೋಶಿ ಹೇಳಿದರು.
'ಮೂಲ ಸೌಕರ್ಯಕ್ಕೆ ಹೆಚ್ಚು ಆದ್ಯತೆಯನ್ನು ಕೊಟ್ಟು, ಜೊತೆಗೆ ಆರ್ಥಿಕತೆ ಸುಧಾರಣೆಗೂ ಒತ್ತು ಕೊಟ್ಟಿದ್ದಾರೆ. ಬಡವರು ಮತ್ತು ಬಡವರ ಅವಶ್ಯಕತೆ ಮನೆ, ಶೌಚಾಲಯ, ವಿದ್ಯುತ್, ಅಡುಗೆ ಅನಿಲ ಇವುಗಳಿಗೆ ಆದ್ಯತೆಯನ್ನು ಕೊಡುವ ಮೂಲಕ ಬಜೆಟ್ ಮಂಡಿಸಲಾಗಿದೆ' ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications