ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನೀರಸ: ಎಎಪಿ
ಬೆಂಗಳೂರು, ಫೆಬ್ರವರಿ 01: ನಿರ್ಮಲಾ ಸೀತಾರಾಮನ್ ಅವರಿಂದ ಎರಡೂವರೆ ಗಂಟೆಯ ಸುದೀರ್ಘವಾದ ಬಜೆಟ್ ಭಾಷಣದಲ್ಲಿ ಭಾರತದ ಕುಂಠಿತಗೊಂಡಿರುವ ಆರ್ಥಿಕತೆಯಲ್ಲಿ ಮಹತ್ತರ ಬದಲಾವಣೆಯಾಗುವಂತಹ ಯಾವುದೇ ಅಂಶ ಕಂಡು ಬರಲಿಲ್ಲ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.
ಪಕ್ಷದ ಕರ್ನಾಟಕದ ರಾಜ್ಯ ಸಹ ಸಂಚಾಲಕರಾದ ಶಾಂತಲಾ ದಾಮ್ಲೆ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಕೆಲವು ಸ್ವಾಗತಾರ್ಹ ವಿಷಯಗಳು ಇದ್ದರೂ ಸಹ, ಮುಖ್ಯವಾಗಿ ಜಿಡಿಪಿ ದರ ವೃದ್ಧಿ ಮುಂದಿನ ವರ್ಷ 10% ಏರುವಂತಹ ಸೂಚನೆ ಕಂಡು ಬರಲಿಲ್ಲ ಎಂದು ಹೇಳಿದ್ದಾರೆ.
ಷೇರು ಮಾರುಕಟ್ಟೆ 1% ಕುಸಿತ ತನ್ನದೇ ಕತೆ ಹೇಳುತ್ತದೆ. ಸ್ವಾಗತಾರ್ಹ ಅಂಶಗಳೆಂದರೆ ಚೆನ್ನೈ- ಬೆಂಗಳೂರು ದ್ರೂತಗತಿ ಮಾರ್ಗ, 100 ಹೊಸ ವಿಮಾನ ನಿಲ್ದಾಣ, ರೇಲ್ವೆ ಮಾರ್ಗ ವಿದ್ಯುತೀಕರಣ, ಬ್ಯಾಂಕ್ ಡಿಪಾಸಿಟ್ ವಿಮೆ ಮಿತಿ ಒಂದರಿಂದ 5 ಲಕ್ಷಕ್ಕೆ ಏರಿಕೆಯಾಗಿರುವುದು ಎಂದು ತಿಳಿಸಿದ್ದಾರೆ.

ವೈಯುಕ್ತಿಕ ತೆರಿಗೆ ಸರಳೀಕರಣ ಮತ್ತು ಅದರ ಲಾಭ ಯಾರಿಗೆ? ಎನ್ನುವುದಕ್ಕೆ ಸಂಪೂರ್ಣ ವಿವರದ ಅಧ್ಯಯನ ಮಾಡಬೇಕಿದೆ. ತೆರಿಗೆ ಕಳ್ಳತನವನ್ನು ಅಪರಾಧ ಕಾನೂನಿನ ವ್ಯಾಪ್ತಿಯಿಂದ ಹೊರಹಾಕಿದ್ದು ಸರಿಯಿಲ್ಲ, ಇದರಿಂದ ಇನ್ನಷ್ಟು ಜನ ಹೆದರಿಕೆ ಇಲ್ಲದೆ ಕಳ್ಳತನ ಮಾಡಲು ಪರೋಕ್ಷವಾಗಿ ಸೂಚಿಸಿದಂತಿದೆ ಎಂದು ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಆರ್ಥಿಕ ಖೋತಾ ನಿರೀಕ್ಷೆಗಿಂತ ಜಾಸ್ತಿಯಾಗಿದೆ. ಕಂದಾಯ ವಸೂಲಿಯೂ ಗುರಿ ಮುಟ್ಟಿಲ್ಲ. ಕಳೆದ ಬಜೆಟ್ನಲ್ಲಿ ಮಂಡಿಸಿದ ಅನೇಕ ಅಂಶಗಳು ಜಾರಿಗೆ ಬಂದಿಲ್ಲ. ಹಾಗಾಗಿ ಕಳೆದ ಆರು ವರ್ಷದಲ್ಲಿ ಮಂಡನೆಯಾದ ಅತ್ಯುತ್ತಮ ಬಜೆಟ್ ಇದೆಂದು ಅವರು ತಮಗೆ ತಾವೇ ಹೇಳಿಕೊಳ್ಳಬೇಕು ಎಂದು ಹೇಳಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications