Get Updates
Get notified of breaking news, exclusive insights, and must-see stories!

Union Budget 2026: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಆಗಿದೆಯೇ?: ಬಿ ವೈ ವಿಜಯೇಂದ್ರ ಹೇಳಿದ್ದೇನು?

ಶಿವಮೊಗ್ಗ: ಪ್ರಧಾನಮಂತ್ರಿಗಳ ವಿಕಸಿತ ಭಾರತದ ಸಂಕಲ್ಪಕ್ಕೆ ಪೂರಕವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಮಂಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಇನ್ನೂ ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಅನ್ಯಾಯ ಆಗಿದೆಯೇ ಅಥವಾ ಅನುಕೂಲ ಆಗಿದೆಯೇ ಎಂಬ ಕುರಿತು ನಾಳೆ ಮಾತನಾಡುತ್ತೇನೆ. ಟೀಕೆ ಮಾಡುವುದೇ ಸಿದ್ದರಾಮಯ್ಯರ ಸರಕಾರದ ಸಾಧನೆ ಎಂದು ಆಕ್ಷೇಪಿಸಿದರು.

ಕೇಂದ್ರದ ಆಯವ್ಯಯಪತ್ರ ಮಂಡನೆಯನ್ನು ಇಂದು ವೀಕ್ಷಿಸಿದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಮಾಧ್ಯಮಗಳ ಜೊತೆ ಮಾತನಾಡಿ, 3 ಕರ್ತವ್ಯಶಕ್ತಿಗಳ ಆಧಾರದ ಮೇಲೆ ಮಂಡಿಸಲ್ಪಟ್ಟ ಬಜೆಟ್ ಇದಾಗಿದೆ. ಉತ್ಪಾದನಾ ಹೆಚ್ಚಳ, ಜನರ ಆಶೋತ್ತರಗಳ ಈಡೇರಿಕೆ ಹಾಗೂ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು ತಮ್ಮ ಬಜೆಟ್ ಮಂಡಿಸಿದ್ದಾರೆ ಎಂದು ಬಿ ವೈ ವಿಜಯೇಂದ್ರ ಅವರು ಹೇಳಿದರು.

Union Budget 2026 BY Vijayendra First Reaction After the Announcement of Union Budget 2026

ಕೈಗಾರಿಕೆ, ಪ್ರವಾಸೋದ್ಯಮ, ಐಟಿ, ಬಿಟಿ, ವಿಶೇಷವಾಗಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. ಎಲ್ಲ ಕ್ಷೇತ್ರಗಳಿಗೆ ಅವರು ಆದ್ಯತೆ ನೀಡಿದ್ದಾರೆ. ಯುವ ಶಕ್ತಿಗೂ ಪೂರಕ ಬಜೆಟ್ ಮಂಡಿಸಿದ್ದಾರೆ. ಕ್ರೀಡಾ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಪ್ರಕಟಿಸಿದ್ದಾರೆ ಎಂದು ತಿಳಿಸಿದರು.

ನಾರಿ ಶಕ್ತಿಗೆ ಆದ್ಯತೆ ಕೊಟ್ಟಿದ್ದು, ಎಲ್ಲಕ್ಕಿಂತ ಪ್ರಮುಖವಾಗಿ ಹೊಸ ತೆರಿಗೆಗೆ ಅವಕಾಶ ನೀಡದೇ, ಹೊಸ ತೆರಿಗೆ ಹೇರದೇ ಸರ್ವಸ್ಪರ್ಶಿ, ಸರ್ವವ್ಯಾಪ್ತಿಯಡಿ ಎಲ್ಲ ಕ್ಷೇತ್ರಗಳಿಗೂ ಆದ್ಯತೆ ನೀಡಿದ್ದಾರೆ. ಈ ದೇಶದ ಸರ್ವತೋಮುಖ ಅಭಿವೃದ್ಧಿಗೆ, ಮುಂದಿನ ದಿನಗಳಲ್ಲಿ ಭಾರತವು ಆರ್ಥಿಕವಾಗಿ ಇನ್ನಷ್ಟು ಸದೃಢವಾಗುವ ನಿಟ್ಟಿನಲ್ಲಿ, ಭಾರತವು ವಿಶ್ವಗುರು ಆಗುವ ನಿಟ್ಟಿನಲ್ಲಿ ಒಂದು ಉತ್ತಮ ಬಜೆಟ್ ಅನ್ನು ಮಂಡಿಸಿದ್ದಾರೆ ಎಂದು ಶ್ಲಾಘಿಸಿದರು.

ಈ ದೇಶದ ಪ್ರತಿಯೊಬ್ಬರೂ ಈ ಬಜೆಟ್ ವೀಕ್ಷಿಸಿದ್ದಾರೆ. ರೈತಾಪಿವರ್ಗ, ಮಹಿಳೆಯರು, ಯುವಕರು, ಬಡವರು ಸೇರಿ ಪ್ರತಿಯೊಬ್ಬರೂ ಈ ಬಜೆಟ್ ಸ್ವಾಗತಿಸುತ್ತಿದ್ದಾರೆ. ನಾವೆಲ್ಲರೂ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 9ನೇ ಬಜೆಟ್ ಅನ್ನು ಸಂತೋಷದಿಂದ ಸ್ವಾಗತ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಇನ್ನೂ ಬಜೆಟ್‌ ಕುರಿತು ಬಿಜೆಪಿ ಶಾಸಕ ಸುನೀಲ್‌ ಕುಮಾರ್‌ ಅವರು ಮಾತನಾಡಿ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಕರ್ನಾಟಕವೂ ಸೇರಿದಂತೆ ದೇಶದ ಸಮಗ್ರ ಬೆಳವಣಿಗೆಗೆ ಪೂರಕವಾಗಿದೆ. ಐಟಿ ನವೀನತೆ, ಪ್ರವಾಸೋದ್ಯಮ ವಿಸ್ತರಣೆ, ಒಳನಾಡು ಜಲ ಸಂಪರ್ಕ, ಹೈ-ಸ್ಪೀಡ್ ರೈಲು, ಎಂಎಸ್‌ಎಂಇಗಳು ಹಾಗೂ ಸೇವಾ ಕ್ಷೇತ್ರಗಳಿಗೆ ಒತ್ತು ನೀಡುವ ಮೂಲಕ, ಭವಿಷ್ಯಕ್ಕೆ ಸಿದ್ಧವಾದ ಕರ್ನಾಟಕದ ನಿರ್ಮಾಣಕ್ಕೆ ಈ ಬಜೆಟ್ ದೃಢವಾದ ನೆಲೆಯನ್ನು ಹಾಕಿದೆ.

ಅರ್ಥ ವ್ಯವಸ್ಥೆಯ ಸೂಕ್ಷ್ಮ ಸಂಗತಿಗಳಿಗೂ ಆದ್ಯತೆ ನೀಡುವ ಮೂಲಕ ಪ್ರವಾಸೋದ್ಯಮ, ಕೃಷಿ, ತೋಟಗಾರಿಕೆ, ಎಂಎಸ್ ಎಂಇ, ಮೂಲಸೌಕರ್ಯ, ಆರ್ಥಿಕ ಕಾರಿಡಾರ್ ಗಳ ಅಭಿವೃದ್ಧಿಗೆ ಉತ್ತೇಜನ ನೀಡಲಾಗಿದೆ. ಪರಿಸರ ಸಮತೋಲನಕ್ಕಾಗಿ ವಿಶೇಷ ಆದ್ಯತೆ ನೀಡಿರುವುದು ಈ ಬಜೆಟ್ ಇನ್ನೊಂದು ವಿಶೇಷ. ಹವಾಮಾನ ವೈತರೀತ್ಯದಂಥ ಸಂಗತಿಗಳನ್ನೂ ಕೇಂದ್ರ ಸರ್ಕಾರ ಸೂಕ್ಷ್ಮ ವಾಗಿ ಗಮನಿಸುತ್ತಿದೆ ಎಂಬುದಕ್ಕೆ ಇದೊಂದು ಉದಾಹರಣೆ. ಭಾರತವನ್ನು ಐದು ಟ್ರಿಲಿಯನ್ ಅರ್ಥವ್ಯವಸ್ಥೆಯನ್ನಾಗಿ ರೂಪಿಸುವಲ್ಲಿ ಈ ಬಜೆಟ್ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+