Union Budget 2026: ಹೈ-ಸ್ಪೀಡ್ ರೈಲು ಮಾರ್ಗಗಳು ಬೆಂಗಳೂರನ್ನು ದಕ್ಷಿಣದ ಆರ್ಥಿಕ ಕೇಂದ್ರವನ್ನಾಗಿಸಲಿದೆ: ಆರ್.ಅಶೋಕ್
Union Budget 2026: ಕೇಂದ್ರ ಬಜೆಟ್ನಲ್ಲಿ ಘೋಷಿಸಲಾದ ಏಳು ಹೈ-ಸ್ಪೀಡ್ ರೈಲು ಕಾರಿಡಾರ್ಗಳು, ದೇಶದ ಪ್ರಮುಖ ನಗರಗಳನ್ನು ವೇಗವಾಗಿ ಸಂಪರ್ಕಿಸುವ ಮೂಲಕ ಆರ್ಥಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಲಿವೆ ಎಂದು ಕರ್ನಾಟಕ ಬಿಜೆಪಿ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು-ಹೈದರಾಬಾದ್ ಹೈ-ಸ್ಪೀಡ್ ರೈಲು ಮಾರ್ಗಗಳು, ಬೆಂಗಳೂರನ್ನು ದಕ್ಷಿಣ ಭಾರತದ ಪ್ರಮುಖ ಆರ್ಥಿಕ ಕೇಂದ್ರವಾಗಿ ಮತ್ತಷ್ಟು ಬಲಪಡಿಸಲಿವೆ. ಇದರೊಂದಿಗೆ ಉದ್ಯೋಗ ಸೃಷ್ಟಿ, ಕೈಗಾರಿಕಾ ವಿಸ್ತರಣೆ, ವ್ಯಾಪಾರ ಮತ್ತು ಲಾಜಿಸ್ಟಿಕ್ಸ್ ಕ್ಷೇತ್ರಗಳಿಗೆ ವೇಗ ಸಿಗಲಿದೆ ಎಂದು ಆರ್.ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.
ವಿಕಸಿತ ಭಾರತದ ದಿಕ್ಕಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ-ಕೇಂದ್ರ ಬಜೆಟ್ 2026-27 ಎಂದು ಕರೆದಿರುವ ಅವರು, ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೃಢ ನಾಯಕತ್ವದಲ್ಲಿ, ಮಾನ್ಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಕೇಂದ್ರ ಬಜೆಟ್ ವಿಕಸಿತ ಭಾರತ
@2047 ಗುರಿಯತ್ತ ದೇಶವನ್ನು ಮುನ್ನಡೆಸುವ ದೂರದೃಷ್ಟಿಯ ಮತ್ತು ಸಮತೋಲನದ ಬಜೆಟ್ ಆಗಿದೆ. ಆರ್ಥಿಕ ಶಿಸ್ತು, ಜನಪರ ನೀತಿ ಮತ್ತು ಅಭಿವೃದ್ಧಿ ಆಧಾರಿತ ದೃಷ್ಟಿಕೋನ. ಈ ಮೂರು ಅಂಶಗಳ ಸಮನ್ವಯವೇ ಈ ಬಜೆಟ್ನ ಮೂಲ ತತ್ವ ಎಂದು ಕರೆದಿದ್ದಾರೆ.

ಮೂರು ರಾಷ್ಟ್ರೀಯ ಆದ್ಯತೆ
ಈ ಬಜೆಟ್ ಮೂರು ಪ್ರಮುಖ ರಾಷ್ಟ್ರೀಯ ಆದ್ಯತೆಗಳನ್ನು ಸ್ಪಷ್ಟವಾಗಿ ಪ್ರತಿಪಾದಿಸುತ್ತದೆ. ಮೊದಲನೆಯದು, ಉತ್ಪಾದಕತೆಯನ್ನು ಹೆಚ್ಚಿಸುವ ಮೂಲಕ ಆರ್ಥಿಕ ಬೆಳವಣಿಗೆಗೆ ವೇಗ ನೀಡುವುದು. ಎರಡನೆಯದು, ಜನರ ಆಶೋತ್ತರಗಳಿಗೆ ನೇರ ಸ್ಪಂದನೆ ನೀಡುತ್ತಾ, ಸಮಗ್ರ ಅಭಿವೃದ್ಧಿಯನ್ನು ಸಾಧಿಸುವುದು. ಮೂರನೆಯದು "ಸಬ್ಕಾ ಸಾಥ್, ಸಬ್ಕಾ ವಿಕಾಸ್" ಎಂಬ ತತ್ವದ ಮೂಲಕ ಪ್ರತಿಯೊಬ್ಬ ನಾಗರಿಕನಿಗೂ ಅವಕಾಶ ಒದಗಿಸುವುದು. ಈ ದೃಷ್ಟಿಕೋನವೇ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ವಿಭಿನ್ನವಾಗಿ ಗುರುತಿಸುತ್ತದೆ ಎಂದಿದ್ದಾರೆ.
ರೈತರ ಆದಾಯ ವೃದ್ಧಿಗೆ ಮಹತ್ವದ ಹೆಜ್ಜೆ
ಕೃಷಿ ವಲಯಕ್ಕೆ ಈ ಬಜೆಟ್ನಲ್ಲಿ ವಿಶೇಷ ಒತ್ತು ನೀಡಲಾಗಿದೆ. ಖಾದಿ ಮತ್ತು ಕೈಮಗ್ಗ ಉತ್ಪನ್ನಗಳ ಉತ್ತೇಜನಕ್ಕಾಗಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ, ತೆಂಗು, ಗಂಧ ಮತ್ತು ಗೇರು ಬೆಳೆಗಳಿಗೆ ವಿಶೇಷ ಪ್ಯಾಕೇಜುಗಳು ಹಾಗೂ 2030ರೊಳಗೆ ಗೇರು ಮತ್ತು ಕೋಕೋ ಬೆಳೆಗಳನ್ನು ಜಾಗತಿಕ ರಫ್ತು ಉತ್ಪನ್ನಗಳನ್ನಾಗಿ ರೂಪಿಸುವ ಗುರಿ ಇವೆಲ್ಲವೂ ರೈತರ ಆದಾಯ ವೃದ್ಧಿಗೆ ಮಹತ್ವದ ಹೆಜ್ಜೆಗಳಾಗಿವೆ. ಇದರಿಂದ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳ ರೈತರಿಗೆ ಹೊಸ ಮಾರುಕಟ್ಟೆ ಮತ್ತು ಆರ್ಥಿಕ ಅವಕಾಶಗಳು ಸೃಷ್ಟಿಯಾಗಲಿವೆ ಎಂದಿದ್ದಾರೆ.
ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಬೆಂಬಲ ಘೋಷಣೆ, ಹಾಗೂ ಸೆಮಿಕಂಡಕ್ಟರ್ ವಲಯಕ್ಕೆ ₹40,000 ಕೋಟಿ ಮೀಸಲು, ಕೈಗಾರಿಕಾ ವಲಯಕ್ಕೆ ಭಾರಿ ಉತ್ತೇಜನ ನೀಡಲಿದೆ. ಇದರಿಂದ ಬೆಂಗಳೂರು ಮತ್ತು ಕರ್ನಾಟಕದ ಕೈಗಾರಿಕಾ ಪರಿಸರ ವ್ಯವಸ್ಥೆಗೆ ಬಲ ದೊರೆಯಲಿದ್ದು, ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಲಭ್ಯವಾಗಲಿವೆ. ಮಧ್ಯಮ ವರ್ಗದ ಹಿತದೃಷ್ಟಿಯಿಂದ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಸರಳೀಕರಣಗಳನ್ನು ಮಾಡಲಾಗಿದೆ. ಆದಾಯ ತೆರಿಗೆ ಸಲ್ಲಿಕೆಯಲ್ಲಿ ವಿಳಂಬಕ್ಕೆ ಕೇವಲ 10% ದಂಡ ಮತ್ತು ಯಾವುದೇ ಕ್ರಿಮಿನಲ್ ಶಿಕ್ಷೆ ಇಲ್ಲದಿರುವುದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಟಿಸಿಎಸ್ ದರವನ್ನು ಶೇ 5ರಿಂದ ಶೇ 2ಕ್ಕೆ ಇಳಿಸಿರುವುದು, ಹಾಗೂ ಹೊಸ ಐಟಿ ಕಾಯ್ದೆಯ ಮೂಲಕ ಸರಳ, ಪಾರದರ್ಶಕ ತೆರಿಗೆ ವ್ಯವಸ್ಥೆ ರೂಪಿಸಿರುವುದು ಇವೆಲ್ಲವೂ ಜನಸ್ನೇಹಿ ನಿರ್ಧಾರಗಳಾಗಿವೆ.
17 ಅಗತ್ಯ ಔಷಧಗಳು ಮತ್ತು 6 ಅಪರೂಪದ ಕಾಯಿಲೆಗಳ ಔಷಧಗಳ ಬೆಲೆ ಇಳಿಕೆ, ಅಪಘಾತ ಪರಿಹಾರಕ್ಕೆ ತೆರಿಗೆ ಮುಕ್ತತೆ. ಸಾಮಾನ್ಯ ನಾಗರಿಕರ ಮೇಲೆ ಇರುವ ಆರ್ಥಿಕ ಭಾರವನ್ನು ಕಡಿಮೆ ಮಾಡುವ ಜನಪರ ಕ್ರಮಗಳಾಗಿದ್ದು, ಆರೋಗ್ಯ ಕ್ಷೇತ್ರದಲ್ಲಿ ಮಾನವೀಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಬಜೆಟ್ ಆರ್ಥಿಕ ಶಿಸ್ತು, ಸಾಮಾಜಿಕ ನ್ಯಾಯ ಮತ್ತು ಸಮಗ್ರ ಅಭಿವೃದ್ಧಿಯ ಸಮತೋಲನದ ಬ್ಲೂಪ್ರಿಂಟ್ ಆಗಿದ್ದು, ಭಾರತವನ್ನು ವಿಶ್ವದ ಮುಂಚೂಣಿ ರಾಷ್ಟ್ರಗಳ ಸಾಲಿಗೆ ಕೊಂಡೊಯ್ಯುವ ಶಕ್ತಿಯನ್ನೊಳಗೊಂಡಿದೆ. ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮಾನ್ಯ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ, ದೇಶದ ಭವಿಷ್ಯಕ್ಕೆ ದಿಕ್ಕು ತೋರಿಸುವ ಈ ಜನಪರ ಹಾಗೂ ಅಭಿವೃದ್ಧಿ ಪರ ಬಜೆಟ್ಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಧನ್ಯವಾದಗಳು ಎಂದಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications