ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದು ಕೇಂದ್ರ ಸಂಪುಟ ಸಭೆ: ರಾಜ್ಯಕ್ಕೆ ನೆರೆ ಪರಿಹಾರ ಪ್ಯಾಕೇಜ್ ನಿರೀಕ್ಷೆ

|
Google Oneindia Kannada News

ನವದೆಹಲಿ, ಆಗಸ್ಟ್ 28: ಕೇಂದ್ರ ಸಚಿವ ಸಂಪುಟದ ಸಭೆ ಬುಧವಾರ ಸಂಜೆ 4.30ಕ್ಕೆ ನಡೆಯಲಿದೆ. ಆರ್ಥಿಕ ಹಿಂಜರಿತ, ಜಮ್ಮು ಮತ್ತು ಕಾಶ್ಮೀರ ವಿಚಾರ ಹಾಗೂ ಕರ್ನಾಟಕ ಸೇರಿದಂತೆ ವಿವಿಧೆಡೆ ಉಂಟಾದ ಪ್ರವಾಹ ಪರಿಸ್ಥಿತಿ ಮುಂತಾದ ಮಹತ್ವದ ವಿಚಾರಗಳು ಇಲ್ಲಿ ಚರ್ಚೆಗೆ ಬರುವ ನಿರೀಕ್ಷೆಯಿದೆ.

ರಾಜ್ಯದ ಬಹುತೇಕ ಭಾಗ ಪ್ರವಾಹದಿಂದ ಹಾನಿಗೊಳಗಾಗಿದೆ. ಕೇಂದ್ರದ ಅಧಿಕಾರಿಗಳ ಅಧ್ಯಯನ ತಂಡ ರಾಜ್ಯದ ವಿವಿಧೆಡೆ ಭೇಟಿ ನೀಡಿ ಪ್ರವಾಹದಿಂದ ಉಂಟಾದ ಹಾನಿಯ ಕುರಿತು ಪರಿಶೀಲನೆ ನಡೆಸಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೂ ಹೆಚ್ಚಿನ ನೆರವಿಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನಾಳೆ ಭರ್ಜರಿ ಗಿಫ್ಟ್ ನೀಡಲಿದೆಯಾ ಸರ್ಕಾರ? ಜಮ್ಮು ಮತ್ತು ಕಾಶ್ಮೀರಕ್ಕೆ ನಾಳೆ ಭರ್ಜರಿ ಗಿಫ್ಟ್ ನೀಡಲಿದೆಯಾ ಸರ್ಕಾರ?

ಹೀಗಾಗಿ, ಸಚಿವ ಸಂಪುಟ ಸಭೆಯಲ್ಲಿ ನೆರೆಯಿಂದ ಉಂಟಾದ ನಷ್ಟವನ್ನು ಪರಿಹರಿಸಲು ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ನಿರೀಕ್ಷೆಯಿದೆ. ಒಂದು ವೇಳೆ ಹೆಚ್ಚಿನ ಅನುದಾನ ನೀಡಿದರೆ ಪರಿಹಾರ ಕಾರ್ಯಗಳನ್ನು ನಡೆಸಲು ಅನುಕೂಲವಾಗಲಿದೆ.

Union Cabinet Meeting Karnataka Expecting Special Package For Flood Loss

ರಾಜ್ಯದಲ್ಲಿ ಹಿಂಗಾರು ಕೊರತೆಯಿಂದ ಬರ ಪರಿಸ್ಥಿತಿ ಉಂಟಾಗಿದ್ದರಿಂದ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ, ಬರ ಪರಿಹಾರಕ್ಕೆ 2034 ಕೋಟಿ ರೂ. ನೆರವು ಕೋರಿತ್ತು. ಆದರೆ, ಯಡಿಯೂರಪ್ಪ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ನೆರೆ ಪರಿಹಾರಕ್ಕೆ ಮನವಿ ಮಾಡುತ್ತಿದ್ದ ಸಂದರ್ಭದಲ್ಲಿ 1,029 ಕೋಟಿ ರೂ. ಬರ ಪರಿಹಾರದ ನೆರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿತ್ತು.

ನೆರೆ ಪರಿಹಾರ ಕೇಳಿದರೆ ಬರ ಪರಿಹಾರ ಕೊಟ್ಟ ಕೇಂದ್ರ ಸರ್ಕಾರನೆರೆ ಪರಿಹಾರ ಕೇಳಿದರೆ ಬರ ಪರಿಹಾರ ಕೊಟ್ಟ ಕೇಂದ್ರ ಸರ್ಕಾರ

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಅದು ಎಲ್ಲ ರಾಜ್ಯಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಹೀಗಾಗಿ ಅಲ್ಲಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಭಾರಿ ಅನುದಾನ ಬಿಡುಗಡೆಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸುವ ಸಾದ್ಯತೆ ಇದೆ.

English summary
Union Cabinet meeting will be held on Wednesday. Karnataka is expecting the announcement of special package for flood-hit areas.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X