ಕರ್ನಾಟಕಕ್ಕೆ ಕೇಂದ್ರದ ಉಡುಗೊರೆ; ಮಹದಾಯಿ ಯೋಜನೆ ಅಧಿಸೂಚನೆ ಪ್ರಕಟ
ಬೆಂಗಳೂರು, ಫೆಬ್ರವರಿ 27 : ಮಹದಾಯಿ ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಜಯ ಸಿಕ್ಕಿದೆ. ಸುಪ್ರೀಂಕೋರ್ಟ್ ಆದೇಶದಂತೆ ಮಹದಾಯಿ ಯೋಜನೆ ಕುರಿತು ಕೇಂದ್ರ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದೆ.
ಗುರುವಾರ ರಾತ್ರಿ ಕೇಂದ್ರ ಸರ್ಕಾರ ಕರ್ನಾಟಕ ಮಹಾದಾಯಿ ಯೋಜನೆ ಅನ್ವಯ 13.42 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಬಹುದು ಎಂದು ಅಧಿಸೂಚನೆ ಹೊರಡಿಸಿದೆ. ಇದರಿಂದಾಗಿ ಉತ್ತರ ಕರ್ನಾಟಕ ಭಾಗದ ಜನರ ಬಹುದಿನದ ಬೇಡಿಕೆ ಈಡೇರಿದೆ.
ಫೆಬ್ರವರಿ 20ರಂದು ಸುಪ್ರೀಂಕೋರ್ಟ್ ಮಹಾದಾಯಿ ಯೋಜನೆ ಕುರಿತು ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ವಿವಾದದ ಕುರಿತು ಬಾಕಿ ಇರುವ ಅರ್ಜಿಗಳ ವಿಚಾರಣೆಯನ್ನು ಜುಲೈ 15ರಿಂದ ನಿರಂತರವಾಗಿ ನಡೆಸುವುದಾಗಿ ಹೇಳಿತ್ತು.
ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಮಹದಾಯಿ ವಿವಾದವಿದೆ. ವಿವಾದದ ಬಗ್ಗೆ ಸುಧೀರ್ಘ ವಿಚಾರಣೆ ನಡೆಸಿದ್ದ ಮಹದಾಯಿ ನ್ಯಾಯಾಧೀಕರಣ 2018ರಲ್ಲಿ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿತ್ತು. ಕರ್ನಾಟಕಕ್ಕೆ 13.42 ಟಿಎಂಸಿ ನೀರನ್ನು ಹಂಚಿಕೆ ಮಾಡಿತ್ತು.

ಪ್ರಹ್ಲಾದ್ ಜೋಶಿ ಸಂತಸ
ಮಹದಾಯಿ ಯೋಜನೆ ಕುರಿತು ಅಧಿಸೂಚನೆ ಹೊರಡಿಸಿದ್ದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. "ಬಹು ನಿರೀಕ್ಷಿತ ಮಹದಾಯಿ ನದಿ ನೀರಿನ ಕುರಿತಾದ ಗೆಜೆಟ್ ಹೊರಡಿಸುವ ಕುರಿತು ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ನ ಆದೇಶದ ನಂತರ ಪ್ರತಿನಿತ್ಯ ನಾನು ಕೇಂದ್ರದ ನೀರಾವರಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಸಂಪರ್ಕದಲ್ಲಿದ್ದು, ಈ ಗೆಜೆಟ್ ಹೊರಡಿಸುವ ವಿಷಯ ಕುರಿತು ಸಾಧ್ಯವಾದಷ್ಟು ಬೇಗನೆ ಗೆಜೆಟ್ ಹೊರಡಿಸಲು ಅವರಲ್ಲಿ ವಿನಂತಿಸುತ್ತಿದ್ದೆನು. ಅದರ ಪರಿಣಾಮವಾಗಿ ಇಂದು ಕೇಂದ್ರ ಸರ್ಕಾರ ಗೆಜೆಟ್ ಹೊರಡಿಸಿದ್ದು ನಮಗೆಲ್ಲರಿಗೂ ಅತಿ ಸಂತಸದ ವಿಷಯ" ಎಂದು ಹೇಳಿದ್ದಾರೆ.

ಗೋವಾದ ಸರ್ಕಾರದ ಕ್ಯಾತೆ
ಮಹದಾಯಿ ವಿವಾದಕ್ಕೆ ಕರ್ನಾಟಕದ ಪಕ್ಕದ ಗೋವಾ ರಾಜ್ಯ ಕ್ಯಾತೆ ತೆಗೆದಿದೆ. ಗೋವಾ ಜನರ ಜೀವನದಿಯಾದ ಮಹದಾಯಿ ನೀರನ್ನು ತಿರುಗಿಸಲು ಯಾವುದೇ ಕಾರಣಕ್ಕೂ ಒಪ್ಪಿಗೆ ನೀಡುವುದಿಲ್ಲ ಎಂದು ಹೇಳಿದೆ. ಯೋಜನೆಯಿಂದಾಗಿ ಗೋವಾದ ನೈಸರ್ಗಿಕ ವೈವಿದ್ಯತೆಗೆ ಧಕ್ಕೆಯಾಗಲಿದೆ ಎಂದು ರಾಜ್ಯ ಆತಂಕ ವ್ಯಕ್ತಪಡಿಸಿದೆ.

ಮಹದಾಯಿ ನ್ಯಾಯಾಧೀಕರಣದ ತೀರ್ಪು
ಮೂರು ರಾಜ್ಯಗಳ ನಡುವೆ ಮಹದಾಯಿ ಯೋಜನೆ ವಿಚಾರದಲ್ಲಿ ಒಮ್ಮತವಿಲ್ಲ. 2018ರ ಆಗಸ್ಟ್ನಲ್ಲಿ ಮಹದಾಯಿ ನ್ಯಾಯಾಧೀಕರಣ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದೆ. ನ್ಯಾಯಮೂರ್ತಿ ಜೆ. ಎಂ. ಪಾಂಚಾಲ್ ನೇತೃತ್ವದ ಪೀಠ ಕರ್ನಾಟಕಕ್ಕೆ 13.42 ಟಿಎಂಸಿ, ಗೋವಾಕ್ಕೆ 24 ಟಿಎಂಸಿ ಮತ್ತು ಮಹಾರಾಷ್ಟ್ರಕ್ಕೆ 1.30 ಟಿಎಂಸಿ ನೀರನ್ನು ಹಂಚಿಕೆ ಮಾಡಿದೆ.

ಕರ್ನಾಟಕದ ಬೇಡಿಕೆ ಏನು?
ಮಹದಾಯಿ ನ್ಯಾಯಾಧೀಕರಣದ ಮುಂದೆ ಕರ್ನಾಟಕ ಹೆಚ್ಚಿನ ನೀರು ಬೇಕು ಎಂದು ಬೇಡಿಕೆ ಇಟ್ಟಿತ್ತು. ಹುಬ್ಬಳ್ಳಿ-ಧಾರವಾಡ. ಬೆಳಗಾವಿ ಮತ್ತು ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು 7.5 ಟಿಎಂಸಿ ನೀರನ್ನು ಬಳಸಿಕೊಳ್ಳಲು ಅನುಮತಿ ನೀಡಬೇಕು ಎಂದು ಮನವಿ ಮಾಡಿತ್ತು. ಆದರೆ, ನ್ಯಾಯಾಧೀಕರಣ ಇದನ್ನು ತಳ್ಳಿ ಹಾಕಿತ್ತು. ಕುಡಿಯುವ ನೀರಿನ ಉದ್ದೇಶಕ್ಕೆ 5.5 ಟಿಎಂಸಿ ನೀರನ್ನು ಬಳಸಿಕೊಳ್ಳಲು ಒಪ್ಪಿಗೆ ನೀಡಲಾಗಿದೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications