ಸಚಿವ ಸ್ಥಾನಕ್ಕೆ ಡಿ. ವಿ. ಸದಾನಂದ ಗೌಡ ರಾಜೀನಾಮೆ
ಬೆಂಗಳೂರು, ಜುಲೈ 07; ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆಯಾಗಲಿದ್ದು, ಕರ್ನಾಟಕದ ನಾಲ್ವರು ಸಂಪುಟ ಸೇರಲಿದ್ದಾರೆ.
Recommended Video
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ ಸಚಿವ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಸದಾನಂದ ಗೌಡರ ಹೇಳಿಕೆಯನ್ನು ಪಿಟಿಐ ವರದಿ ಮಾಡಿದೆ.

68 ವರ್ಷದ ಡಿ. ವಿ. ಸದಾನಂದ ಗೌಡ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಎರಡು ಬಾರಿ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಕರ್ನಾಟಕದ ನಾಲ್ವರು ಸಚಿವರಾಗಿ ಸೇರ್ಪಡೆಗೊಳ್ಳಲಿದ್ದಾರೆ. ಡಿ. ವಿ. ಸದಾನಂದ ಗೌಡ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸೇರ್ಪಡೆಗೊಳ್ಳುತ್ತಿದ್ದಾರೆ.
Union Chemicals and Fertilizers Minister D V Sadananda Gowda says he has resigned from Union Council of Ministers
— Press Trust of India (@PTI_News) July 7, 2021

ಬೆಂಗಳೂರು ಉತ್ತರ ಕ್ಷೇತ್ರ
2004ರಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗುವ ಮೂಲಕ ಸದಾನಂದ ಗೌಡ ಮೊದಲ ಬಾರಿ ಲೋಕಸಭೆ ಪ್ರವೇಶಿಸಿದರು. 2009ರಲ್ಲಿ ಉಡುಪಿ, 2014 ಮತ್ತು 2019ರಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.

ರೈಲ್ವೆ ಬಜೆಟ್ ಮಂಡಿಸಿದ್ದಾರೆ
2014ರಲ್ಲಿ ಮೊದಲ ಬಾರಿ ನರೇಂದ್ರ ಮೋದಿ ಪ್ರಧಾನಿಯಾದಾಗ ಸದಾನಂದ ಗೌಡರಿಗೆ ರೈಲ್ವೆ ಖಾತೆ ನೀಡಲಾಗಿತ್ತು. ಒಂದು ಬಾರಿ ರೈಲ್ವೆ ಬಜೆಟ್ ಸಹ ಮಂಡನೆ ಮಾಡಿದ ಹೆಗ್ಗಳಿಗೆ ಸದಾನಂದ ಗೌಡರದ್ದು. ಬಳಿಕ ಕಾನೂನು ಸಚಿವರಾಗಿ, ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಖಾತೆ ಸಚಿವರೂ ಆದರು.

ಎರಡು ಬಾರಿ ಮೋದಿ ಸಂಪುಟದಲ್ಲಿ ಕಾರ್ಯ
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾಗಿದ್ದ ಅನಂತ್ ಕುಮಾರ್ ನಿಧನದ ಬಳಿಕ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಜವಾಬ್ದಾರಿಯನ್ನು ಸದಾನಂದ ಗೌಡರಿಗೆ ವಹಿಸಲಾಯಿತು. 2019ರಲ್ಲಿ ಜಯಗಳಿಸಿದ ಬಳಿಕ ಮತ್ತೊಂದು ಬಾರಿ ಪ್ರಧಾನಿ ಮೋದಿ ಸಂಪುಟವನ್ನು ಸೇರಿದರು.

ಪಕ್ಷ ಸಂಘಟನೆಯಲ್ಲೂ ಕೆಲಸ
ಡಿ. ವಿ. ಸದಾನಂದ ಗೌಡರು ಪಕ್ಷ ಸಂಘಟನೆ ಕೆಲಸವನ್ನು ಮಾಡಿದ್ದಾರೆ. 2006 ರಿಂದ 2010ರ ತನಕ ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದರು. ಕರ್ನಾಟಕದಲ್ಲಿ ಬಿಜೆಪಿ ಆಡಳಿತವಿದ್ದಾಗ ರಾಜಕೀಯ ಸನ್ನಿವೇಶ ಬದಲಾಯಿತು. 2011ರ ಆಗಸ್ಟ್ 4ರಿಂದ 2012ರ ಜುಲೈ 11ರ ತನಕ ರಾಜ್ಯದ ಮುಖ್ಯಮಂತ್ರಿಯಾಗಿಯೂ ಕಾರ್ಯ ನಿರ್ವಹಣೆ ಮಾಡಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications