HD Kumaraswamy: ವೇತನವಿಲ್ಲದೇ ಸಂಕಷ್ಟದಲ್ಲಿದ್ದ ಶಿಕ್ಷಕರು : ತನ್ನ ಸಂಬಳವನ್ನೇ ನೀಡಿದ ಹೆಚ್ ಡಿ ಕುಮಾರಸ್ವಾಮಿ
ಮಂಡ್ಯ, ನವೆಂಬರ್ 06: ಕಳೆದ ಹಲವು ತಿಂಗಳಿಂದ ವೇತನ ಇಲ್ಲದೆ ಸಂಕಷ್ಟದಲ್ಲಿ ಸಿಲುಕಿರುವ ನಗರದ ಐತಿಹಾಸಿಕ ಮೈಷುಗರ್ ಶಾಲೆಯ ಶಿಕ್ಷಕರ ನೆರವಿಗೆ ಧಾವಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಲೋಕಸಭೆ ಸದಸ್ಯನಾಗಿ ತಮ್ಮ ಈವರೆಗಿನ ವೇತನವನ್ನು ಶಿಕ್ಷಕರ ವೇತನ ಪಾವತಿಸಲು ಕೊಡುವುದಾಗಿ ಘೋಷಿಸಿದ್ದಾರೆ.
ಮೈಷುಗರ್ ಶಾಲೆಯ ಆವರಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಸಿಎಸ್ ಆರ್ ನಿಧಿಯಿಂದ ಅತ್ಯಾಧುನಿಕ ಶಾಲಾ ವಾಹನವನ್ನು ಮೈಷುಗರ್ ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು, ಶಿಕ್ಷಕರು ವೇತನವಿಲ್ಲದೆ ಕೆಲಸ ಮಾಡುತ್ತಿರುವುದು ಬಹಳ ನೋವಿನ ವಿಚಾರ. ಈವರೆಗೂ ಸುಮಾರು ₹20 ಲಕ್ಷ ಬಾಕಿ ವೇತನವಿದೆ. ಹೀಗಾಗಿ ನನ್ನ ವೇತನದ ಮೊತ್ತವನ್ನೇ ದೇಣಿಗೆಯಾಗಿ ನೀಡುತ್ತಿದ್ದೇನೆ ಎಂದು ಹೇಳಿದರು.

ಅನೇಕ ತಿಂಗಳಿಂದ ಶಿಕ್ಷಕರಿಗೆ ವೇತನ ನೀಡದಿರುವ ವ್ಯಕ್ತಿಗಳು ನನ್ನ ಬಗ್ಗೆ ಲಘುವಾಗಿ ಮಾತನಾಡುವುದು ಬೇಡ. ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುವ ಅಗತ್ಯವಿಲ್ಲ. ಮಾಧ್ಯಮಗಳ ಮುಂದೆಯೂ ಮಾತನಾಡುವ ಅಗತ್ಯವಿಲ್ಲ. ನಾನು ಈ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾಗ 13 ತಿಂಗಳಿಂದ ಶಿಕ್ಷಕರಿಗೆ ವೇತನ ನೀಡಲಾಗಿಲ್ಲ ಎನ್ನುವ ಮಾಹಿತಿ ಸಿಕ್ಕಿತು. ಸಿಎಸ್ ಆರ್ ನಿಧಿಯಿಂದ ವೇತನ ಕೊಡುವ ಅವಕಾಶ ಇಲ್ಲ ಎಂದು ಮಾಹಿತಿ ನೀಡಿದರು.
ನನ್ನ ಆರೋಗ್ಯದ ಕಾರಣದಿಂದ ಜಿಲ್ಲೆಗೆ ಭೇಟಿ ನೀಡುವುದು ಕೊಂಚ ತಡವಾಯಿತು. ಆದರೂ ನನ್ನ ಕಚೇರಿಯ ತಂಡವನ್ನು ಕಳಿಸಿ ಶಾಲೆಯಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಹಾಗೂ ಶಿಕ್ಷಕರ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಳ್ಳುವಂತೆ ಸೂಚನೆ ನೀಡಿದ್ದೆ. ಅದರಂತೆ ನನ್ನ ಕಚೇರಿ ಸಿಬ್ಬಂದಿ ಶಾಲೆಯ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ. ಅದರ ಅನ್ವಯ ₹10 ಕೋಟಿ ಅಂದಾಜು ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ತೀರ್ಮಾನ ಮಾಡಲಾಗಿದೆ. ಯಾವ ಯಾವ ಕಾಮಗಾರಿಗೆ ಎಷ್ಟು ಮೊತ್ತ ವೆಚ್ಚ ಮಾಡಲಾಗುವುದು ಎಂಬ ಬಗ್ಗೆ ನಿರ್ಧಾರ ಮಾಡಲಾಗುವುದು. ಈ ಬಗ್ಗೆ ಜಿಲ್ಲಾಡಳಿತ ಮತ್ತು ಶಾಲೆಯ ಟ್ರಸ್ಟ್ ಸದಸ್ಯರ ಜತೆ ಚರ್ಚೆ ನಡೆಸಲಾಗಿದೆ. ಈ ₹10 ಕೋಟಿ ಹಣವನ್ನು ಅದಷ್ಟು ಬೇಗ ಬಿಡುಗಡೆ ಮಾಡಲಾಗುವುದು ಎಂದು ಘೋಷಿಸಿದರು.
ಮೈಷುಗರ್ ಶಾಲೆಯ ಅಭಿವೃದ್ಧಿ ಬಗ್ಗೆ ಶಾಲೆಯ ಟ್ರಸ್ಟ್ ನವರು ಈವರೆಗೂ ನನ್ನೊಂದಿಗೆ ಕೊನೇಪಕ್ಷ ಒಂದು ಸಭೆಯನ್ನು ನಡೆಸಿಲ್ಲ. ಆ ಟ್ರಸ್ಟ್ ನಲ್ಲಿ ಯಾರು ಯಾರಿದ್ದಾರೆ ಅನ್ನುವ ಮಾಹಿತಿ ಕೂಡ ನನಗೆ ಇಲ್ಲ. ಸಂಸದನಾಗಿ ನಾನು ಕೂಡ ಒಬ್ಬ ಟ್ರಸ್ಟಿ ಇದ್ದೇನೆ. ಆದರೂ ಸಭೆ ಕರೆದಿಲ್ಲ ಯಾಕೆ? ಶಿಕ್ಷಕರಿಗೆ ಇಷ್ಟು ದೊಡ್ಡ ಮೊತ್ತದ ವೇತನ ಬಾಕಿ ಇಟ್ಟುಕೊಂಡು ಕೆಲವರು ನನ್ನ ಬಗ್ಗೆ ಕೆಟ್ಟದ್ದಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಯಾವ ನೈತಿಕತೆ ಇದೆ? ಎಂದು ಸಚಿವ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದರು.
ನನ್ನ ವೇತನದ ಹಣವನ್ನು ಶಿಕ್ಷಕರಿಗೆ ಕೊಡುತ್ತಿದ್ದೇನೆ. ಇದು ಪಾಪದ ಹಣವಲ್ಲ. ನಾನೇನು ಕಮಿಶನ್ ತೆಗೆದುಕೊಂಡಿಲ್ಲ. ವರ್ಗಾವಣೆಯಿಂದ ಹೊಡೆದುಕೊಂಡ ಹಣವಲ್ಲ. ನನ್ನ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ನನ್ನ ಬಗ್ಗೆ ಯಾರೇ ಏನೇ ಹೇಳಿಕೆ ಕೊಟ್ಟರು ಕೂಡ ನಾನು ಗಂಭೀರವಾಗಿ ಪರಿಗಣಿಸುತ್ತೇನೆ ಎಂಬುದು ಗೊತ್ತಿಲ್ಲವೇ? ನನ್ನ ಕೈಯಲ್ಲಿ ಆಗುವಷ್ಟು ಅಭಿವೃದ್ಧಿಪರ ಕೆಲಸಗಳನ್ನು ಮಾಡುತ್ತಿದ್ದೇನೆ ಎಂದು ಕೇಂದ್ರ ಸಚಿವರು ಖಾರವಾಗಿ ನುಡಿದರು.
ಶಾಲೆಯ ಅಭಿವೃದ್ಧಿ ಬಗ್ಗೆ ನನಗೂ ಕಾಳಜಿ ಇದೆ. ಟ್ರಸ್ಟ್ ನವರು ಜವಾಬ್ದಾರಿ ತೆಗೆದುಕೊಂಡರೆ ಹಂತ ಹಂತವಾಗಿ ಸರ್ವ ರೀತಿಯಲ್ಲಿಯೂ ಶಾಲೆಯ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಶಾಲೆಯ ಬಗ್ಗೆ ನಾನು ಟ್ರಸ್ಟ್ ಸದಸ್ಯರನ್ನು ಬಿಟ್ಟು ಬೇರೆಯವರ ಜತೆ ಚರ್ಚಿಸಲು ತಯಾರಿಲ್ಲ. ಏಕೆಂದರೆ, ಇಂತಹ ಉತ್ತಮ ಶಾಲೆಯ ವಿಶ್ವದಲ್ಲಿ ರಾಜಕೀಯ ತರೋದು ಅನಗತ್ಯ ಎಂದು ಹೇಳಿದರು.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications