Get Updates
Get notified of breaking news, exclusive insights, and must-see stories!

HD Kumaraswamy: ವೇತನವಿಲ್ಲದೇ ಸಂಕಷ್ಟದಲ್ಲಿದ್ದ ಶಿಕ್ಷಕರು : ತನ್ನ ಸಂಬಳವನ್ನೇ ನೀಡಿದ ಹೆಚ್‌ ಡಿ ಕುಮಾರಸ್ವಾಮಿ

ಮಂಡ್ಯ, ನವೆಂಬರ್‌ 06: ಕಳೆದ ಹಲವು ತಿಂಗಳಿಂದ ವೇತನ ಇಲ್ಲದೆ ಸಂಕಷ್ಟದಲ್ಲಿ ಸಿಲುಕಿರುವ ನಗರದ ಐತಿಹಾಸಿಕ ಮೈಷುಗರ್ ಶಾಲೆಯ ಶಿಕ್ಷಕರ ನೆರವಿಗೆ ಧಾವಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಲೋಕಸಭೆ ಸದಸ್ಯನಾಗಿ ತಮ್ಮ ಈವರೆಗಿನ ವೇತನವನ್ನು ಶಿಕ್ಷಕರ ವೇತನ ಪಾವತಿಸಲು ಕೊಡುವುದಾಗಿ ಘೋಷಿಸಿದ್ದಾರೆ.

ಮೈಷುಗರ್ ಶಾಲೆಯ ಆವರಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಸಿಎಸ್ ಆರ್ ನಿಧಿಯಿಂದ ಅತ್ಯಾಧುನಿಕ ಶಾಲಾ ವಾಹನವನ್ನು ಮೈಷುಗರ್ ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು, ಶಿಕ್ಷಕರು ವೇತನವಿಲ್ಲದೆ ಕೆಲಸ ಮಾಡುತ್ತಿರುವುದು ಬಹಳ ನೋವಿನ ವಿಚಾರ. ಈವರೆಗೂ ಸುಮಾರು ₹20 ಲಕ್ಷ ಬಾಕಿ ವೇತನವಿದೆ. ಹೀಗಾಗಿ ನನ್ನ ವೇತನದ ಮೊತ್ತವನ್ನೇ ದೇಣಿಗೆಯಾಗಿ ನೀಡುತ್ತಿದ್ದೇನೆ ಎಂದು ಹೇಳಿದರು.

Union Minister H D Kumaraswamy has rushed to the aid of the teachers of Mysugar School

ಅನೇಕ ತಿಂಗಳಿಂದ ಶಿಕ್ಷಕರಿಗೆ ವೇತನ ನೀಡದಿರುವ ವ್ಯಕ್ತಿಗಳು ನನ್ನ ಬಗ್ಗೆ ಲಘುವಾಗಿ ಮಾತನಾಡುವುದು ಬೇಡ. ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುವ ಅಗತ್ಯವಿಲ್ಲ. ಮಾಧ್ಯಮಗಳ ಮುಂದೆಯೂ ಮಾತನಾಡುವ ಅಗತ್ಯವಿಲ್ಲ. ನಾನು ಈ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾಗ 13 ತಿಂಗಳಿಂದ ಶಿಕ್ಷಕರಿಗೆ ವೇತನ ನೀಡಲಾಗಿಲ್ಲ ಎನ್ನುವ ಮಾಹಿತಿ ಸಿಕ್ಕಿತು. ಸಿಎಸ್ ಆರ್ ನಿಧಿಯಿಂದ ವೇತನ ಕೊಡುವ ಅವಕಾಶ ಇಲ್ಲ ಎಂದು ಮಾಹಿತಿ ನೀಡಿದರು.

ನನ್ನ ಆರೋಗ್ಯದ ಕಾರಣದಿಂದ ಜಿಲ್ಲೆಗೆ ಭೇಟಿ ನೀಡುವುದು ಕೊಂಚ ತಡವಾಯಿತು. ಆದರೂ ನನ್ನ ಕಚೇರಿಯ ತಂಡವನ್ನು ಕಳಿಸಿ ಶಾಲೆಯಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಹಾಗೂ ಶಿಕ್ಷಕರ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಳ್ಳುವಂತೆ ಸೂಚನೆ ನೀಡಿದ್ದೆ. ಅದರಂತೆ ನನ್ನ ಕಚೇರಿ ಸಿಬ್ಬಂದಿ ಶಾಲೆಯ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ. ಅದರ ಅನ್ವಯ ₹10 ಕೋಟಿ ಅಂದಾಜು ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ತೀರ್ಮಾನ ಮಾಡಲಾಗಿದೆ. ಯಾವ ಯಾವ ಕಾಮಗಾರಿಗೆ ಎಷ್ಟು ಮೊತ್ತ ವೆಚ್ಚ ಮಾಡಲಾಗುವುದು ಎಂಬ ಬಗ್ಗೆ ನಿರ್ಧಾರ ಮಾಡಲಾಗುವುದು. ಈ ಬಗ್ಗೆ ಜಿಲ್ಲಾಡಳಿತ ಮತ್ತು ಶಾಲೆಯ ಟ್ರಸ್ಟ್ ಸದಸ್ಯರ ಜತೆ ಚರ್ಚೆ ನಡೆಸಲಾಗಿದೆ. ಈ ₹10 ಕೋಟಿ ಹಣವನ್ನು ಅದಷ್ಟು ಬೇಗ ಬಿಡುಗಡೆ ಮಾಡಲಾಗುವುದು ಎಂದು ಘೋಷಿಸಿದರು.

ಮೈಷುಗರ್ ಶಾಲೆಯ ಅಭಿವೃದ್ಧಿ ಬಗ್ಗೆ ಶಾಲೆಯ ಟ್ರಸ್ಟ್ ನವರು ಈವರೆಗೂ ನನ್ನೊಂದಿಗೆ ಕೊನೇಪಕ್ಷ ಒಂದು ಸಭೆಯನ್ನು ನಡೆಸಿಲ್ಲ. ಆ ಟ್ರಸ್ಟ್ ನಲ್ಲಿ ಯಾರು ಯಾರಿದ್ದಾರೆ ಅನ್ನುವ ಮಾಹಿತಿ ಕೂಡ ನನಗೆ ಇಲ್ಲ. ಸಂಸದನಾಗಿ ನಾನು ಕೂಡ ಒಬ್ಬ ಟ್ರಸ್ಟಿ ಇದ್ದೇನೆ. ಆದರೂ ಸಭೆ ಕರೆದಿಲ್ಲ ಯಾಕೆ? ಶಿಕ್ಷಕರಿಗೆ ಇಷ್ಟು ದೊಡ್ಡ ಮೊತ್ತದ ವೇತನ ಬಾಕಿ ಇಟ್ಟುಕೊಂಡು ಕೆಲವರು ನನ್ನ ಬಗ್ಗೆ ಕೆಟ್ಟದ್ದಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಯಾವ ನೈತಿಕತೆ ಇದೆ? ಎಂದು ಸಚಿವ ಹೆಚ್‌ ಡಿ ಕುಮಾರಸ್ವಾಮಿ ಕಿಡಿಕಾರಿದರು.

ನನ್ನ ವೇತನದ ಹಣವನ್ನು ಶಿಕ್ಷಕರಿಗೆ ಕೊಡುತ್ತಿದ್ದೇನೆ. ಇದು ಪಾಪದ ಹಣವಲ್ಲ. ನಾನೇನು ಕಮಿಶನ್ ತೆಗೆದುಕೊಂಡಿಲ್ಲ. ವರ್ಗಾವಣೆಯಿಂದ ಹೊಡೆದುಕೊಂಡ ಹಣವಲ್ಲ. ನನ್ನ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ನನ್ನ ಬಗ್ಗೆ ಯಾರೇ ಏನೇ ಹೇಳಿಕೆ ಕೊಟ್ಟರು ಕೂಡ ನಾನು ಗಂಭೀರವಾಗಿ ಪರಿಗಣಿಸುತ್ತೇನೆ ಎಂಬುದು ಗೊತ್ತಿಲ್ಲವೇ? ನನ್ನ ಕೈಯಲ್ಲಿ ಆಗುವಷ್ಟು ಅಭಿವೃದ್ಧಿಪರ ಕೆಲಸಗಳನ್ನು ಮಾಡುತ್ತಿದ್ದೇನೆ ಎಂದು ಕೇಂದ್ರ ಸಚಿವರು ಖಾರವಾಗಿ ನುಡಿದರು.

ಶಾಲೆಯ ಅಭಿವೃದ್ಧಿ ಬಗ್ಗೆ ನನಗೂ ಕಾಳಜಿ ಇದೆ. ಟ್ರಸ್ಟ್ ನವರು ಜವಾಬ್ದಾರಿ ತೆಗೆದುಕೊಂಡರೆ ಹಂತ ಹಂತವಾಗಿ ಸರ್ವ ರೀತಿಯಲ್ಲಿಯೂ ಶಾಲೆಯ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಶಾಲೆಯ ಬಗ್ಗೆ ನಾನು ಟ್ರಸ್ಟ್ ಸದಸ್ಯರನ್ನು ಬಿಟ್ಟು ಬೇರೆಯವರ ಜತೆ ಚರ್ಚಿಸಲು ತಯಾರಿಲ್ಲ. ಏಕೆಂದರೆ, ಇಂತಹ ಉತ್ತಮ ಶಾಲೆಯ ವಿಶ್ವದಲ್ಲಿ ರಾಜಕೀಯ ತರೋದು ಅನಗತ್ಯ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+