Get Updates
Get notified of breaking news, exclusive insights, and must-see stories!

HD Kumaraswamy: ಕುಮಾರಸ್ವಾಮಿ ಫೋನ್‌ ಮಾಡಿದ್ರು ಡೋಂಟ್‌ ಕೇರ್: ರಾಮನಗರ ಡಿಸಿಗೆ ಖಡಕ್‌ ಎಚ್ಚರಿಕೆ

ರಾಮನಗರ: ರಾಮನಗರ ಜಿಲ್ಲೆಯ ಜಿಲ್ಲಾಧಿಕಾರಿ ನನ್ನ ಮೊಬೈಲ್ ಕರೆಯನ್ನೇ ಸ್ವೀಕರಿಸಿಲ್ಲ. ನನ್ನ ನಂಬರ್ ನೋಡಿದ ಕೂಡಲೇ ತೆಗೆಯುವುದೇ ಇಲ್ಲ. ಅಧಿಕಾರಿಗಳಿಗೆ ನಾನು ಎಚ್ಚರಿಕೆ ಕೊಡುತ್ತಿದ್ದೇನೆ. ಯಾರೋ ಒತ್ತಡ ಹೇರಿದರೂ ಅಂತ ತಪ್ಪು ಮಾಡಬೇಡಿ ಎಂದು ರಾಮನಗರ ಜಿಲ್ಲಾಧಿಕಾರಿ ವಿರುದ್ದ ಮಾಜಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ನಿವೃತ್ತರಾದರೂ ನೀವು ತಪ್ಪಿಸಿಕೊಳ್ಳಲು ಆಗಲ್ಲ. ಚಿತ್ರದುರ್ಗದ ಎಂಜಿನಿಯರ್ ಒಬ್ಬರು ಇದ್ದರು. ಅಧಿಕಾರದಲ್ಲಿ ಇದ್ದಾಗ ಮುಖ್ಯ ಅಭ್ಯಂತರರಾಗಿ ಮಾಡಿದ ತಪ್ಪಿಗೆ ಈಗ ಜೈಲಿಗೆ ಹೋಗಿದ್ದಾರೆ. ಇಡೀ ರಾಜ್ಯದ ಅಧಿಕಾರಿಗಳಿಗೆ ಹೇಳ್ತಿದ್ದೀನಿ, ಈ‌ ಸರ್ಕಾರದ ಶಾಸಕರು, ಸಚಿವರ ಒತ್ತಡಕ್ಕೆ ಜನರಿಗೆ ದ್ರೋಹ ಬಗೆಯಬೇಡಿ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಹೇಳಿದರು.

Union Minister HD Kumaraswamy warns Ramanagara Deputy Commissioner

ರಾಮನಗರ ಜಿಲ್ಲೆಯ ಬಿಡದಿ ಸುತ್ತಮುತ್ತಲಿನ ಫಲವತ್ತಾದ ಕೃಷಿ ಭೂಮಿಯನ್ನು ರಾಜ್ಯ ಸರ್ಕಾರ ಅಕ್ರಮವಾಗಿ ಸ್ವಾಧೀನ ಮಾಡಿಕೊಳ್ಳುವುದಕ್ಕೆ ಬಿಡುವುದಿಲ್ಲ. ಒಂದು ಇಂಚು ಭೂಮಿ ಸ್ವಾಧೀನಕ್ಕೂ ಅವಕಾಶ ನೀಡುವುದಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ನಮ್ಮ ಭೂಮಿಯನ್ನು ಉಳಿಸಿಕೊಡಿ ಎಂದು ರೈತ ಮಹಿಳೆಯರು ಸೆರಗೊಡ್ಡಿ ಬೇಡಿದಾಗ ಅಕ್ಷರಶಃ ಗದ್ಗದಿತರಾದ ಹೆಚ್‌ ಡಿ ಕುಮಾರಸ್ವಾಮಿ ಅವರು, ನನ್ನ ಸಹೋದರಿಯರ ಈ ಭೂಮಿಯನ್ನು ಉಳಿಸಿಕೊಡುವ ಭಾರ ನನ್ನದು. ಒಂದು ಇಂಚು ಭೂಮಿಯನ್ನು ಬಿಡುವುದು ಬೇಡ. ಅದು ಹೇಗೆ ಸ್ವಾಧೀನ ಮಾಡಿಕೊಳ್ಳುತ್ತಾರೋ ನೋಡೋಣ ಎಂದು ರಾಜ್ಯ ಸರಕಾರಕ್ಕೆ ಸವಾಲು ಹಾಕಿದರು.

ನೀವು ಯಾರೂ ಹೆದರಬೇಕಿಲ್ಲ. ನಿಮ್ಮ ಜತೆ ನಾನಿದ್ದೇನೆ. ಅದೇನೆ ಬಂದರೂ ಹೆದರಿಸೋಣ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಜನರು ಶಾಶ್ವತ. ಸರ್ಕಾರಗಳು ಜನಾಭಿಪ್ರಾಯಕ್ಕೆ ಮಣಿಯಬೇಕು. ಇಲ್ಲವಾದರೆ ಹೇಗೆ ಬುದ್ಧಿ ಕಲಿಸಬೇಕು ಎಂಬುದು ಜನರಿಗೆ ಗೊತ್ತಿದೆ ಎಂದು ಗುಡುಗಿದರು. ತಮ್ಮ ಮುಂದೆ ಕಣ್ಣೀರಿಟ್ಟುಕೊಂಡ ರೈತ ಮಹಿಳೆಯರಿಗೆ ಧೈರ್ಯ ಹೇಳಿದ ಕುಮಾರಸ್ವಾಮಿ ಅವರು, ನನ್ನ ಸಹೋದರಿಯರ ಕಣ್ಣಲ್ಲಿ ನೀರು ಬರುವುದು ಬೇಡ. ನಿಮ್ಮ ಕಣ್ಣೀರಿಗೆ ಕಾರಣರಾದವರಿಗೆ ತಕ್ಕ ಶಾಸ್ತಿ ಕಾದಿದೆ. 2028ಕ್ಕೆ ನಿಮ್ಮ ಶಕ್ತಿ ಏನೆಂಬುದನ್ನು ತೋರಿಸಿ. ಯಾವುದೇ ಕಾರಣಕ್ಕೆ ನಮಲ್ಲಿ ಒಗ್ಗಟ್ಟು ಒಡೆಯುವುದು ಬೇಡ. ರೈತರ ಒಗ್ಗಟಿಗೆ ಬೆಂಕಿ ಹಾಕಲು ಕೆಲವರು ಪ್ರಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಲವರು ಸ್ವಾಧೀನದ ಪರವಾಗಿದ್ದಾರೆ ಎನ್ನುವ ಮಾತು ಕೇಳಿದೆ. ಅದು ಒಳ್ಳೆಯದಲ್ಲ. ಸರ್ಕಾರ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಈ ಫಲವತ್ತಾದ ಭೂಮಿಯನ್ನು ಅಗ್ಗದ ಬೆಲೆಗೆ ಹೊಡೆದುಕೊಳ್ಳಲು ಹೊರಟಿದೆ. ಕೆಲವರು ಈಗಾಗಲೇ ಬೇನಾಮಿಗಳ ಹೆಸರಿನಲ್ಲಿ ಲ್ಯಾಂಡ್ ಬ್ಯಾಂಕ್ ಮಾಡಿಕೊಂಡು ದರೋಡೆ ಮಾಡಲು ಹೊರಟಿದ್ದಾರೆ. ಅವರು ಜನರಿಗೆ, ಸರಕಾರಕ್ಕೆ ಮೋಸ, ವಂಚನೆ ಮಾಡುತ್ತಿದ್ದಾರೆ. ಇಂತಹವರನ್ನು ಬೀದಿಯಲ್ಲಿ ನಿಲ್ಲಿಸುವ ದಿನಗಳು ದೂರವಿಲ್ಲ ಎಂದರು.

ಈ ಭಾಗದ ಕಾಂಗ್ರೆಸ್ ನಾಯಕರುಗಳು ಇಲ್ಲಿ ನಡೆಯುತ್ತಿರುವ ಮೋಡವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಈ ಸರ್ಕಾರದಲ್ಲಿ ಇರುವವರು ನಿಮ್ಮನ್ನು ಕೂಡ ಮೋಸ ಮಾಡುತ್ತಿದ್ದಾರೆ. ನಿಮ್ಮನ್ನು ದಾಳವನ್ನಾಗಿ ಮಾಡಿಕೊಂಡು ನಿಮ್ಮ ಬದುಕನ್ನು ಕೂಡ ಕಸಿದುಕೊಳ್ಳುತ್ತಿದ್ದಾರೆ. ನನ್ನ ಜೊತೆಯಲ್ಲೇ ಇದ್ದವರು ಅಧಿಕಾರ ದರ್ಪದಿಂದ ಮಾತನಾಡುತ್ತಿದ್ದಾರೆ. ಅವರಿಗೆ ಗೊತ್ತಿರಲಿ, ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂದು ಕುಮಾರಸ್ವಾಮಿ ಅವರು ಗುಡುಗಿದರು.

ಈ ಸರಕಾರದಲ್ಲಿ ಇರುವವರು ಮಾಡುತ್ತಿರುವ ಟೌನ್ ಶಿಪ್ ಬೇರೆ. ಅಂದು ನಾನು ಆಲೋಚನೆ ಮಾಡಿದ್ದ ಯೋಜನೆಯೇ ಬೇರೆ. ಅವರಿಗೂ ನನಗೂ ಹೋಲಿಕೆ ಮಾಡಬೇಡಿ. ಜನರು ಬೇಡ ಎಂದಾಗ ನಾನು ಎರಡನೇ ಮಾತಿಲ್ಲದೆ ಅದನ್ನು ನಿಲ್ಲಿಸಿದೆ. ಆಗ ಇಲ್ಲಿನ ಭೂಮಿಯ ಬೆಲೆ 1 ಲಕ್ಷದೊಳಗೆ ಇತ್ತು. ನಾನು ಅಂದು ನಿಮ್ಮೆಲ್ಲರನ್ನು ಕೃಷ್ಣಾ ಕಚೇರಿಗೆ ಕರೆದು ಚರ್ಚೆ ನಡೆಸಿದೆ. ನನ್ನ ನೈತಿಕತೆ ಅದು. ಆದರೆ, ಇವರಿಗೆ ರೈತರಿಗೆ ಮುಖ ಕೊಡುವ ಧೈರ್ಯವೇ ಇಲ್ಲ ಎಂದು ಕಿಡಿಕಾರಿದರು.

ನಾನು ಇವರಂತೆ ದಬ್ಬಾಳಿಕೆ ನಡೆಸಿಲ್ಲ. ಅವತ್ತೇ ನಾನು ಟೌನ್ ಶಿಪ್ ಮಾಡಿದಿದ್ರೆ ಚೆನ್ನಾಗಿರುತ್ತಿತ್ತು ಯಾರೋ ತಾಯಿ ಹೇಳಿದರು. ಇವತ್ತಿನ ಭೂಮಿಯ ಬೆಲೆ ಕ್ಷಣಕ್ಷಣಕ್ಕೂ ಏರುತ್ತಿದೆ. ಡಿ.ಕೆ. ಶಿವಕುಮಾರ್ ಅವರಿಗೆ ನಾನು ಹೇಳುವುದು ಇಷ್ಟೇ, ರೈತರ ಬದುಕಿನ ಬಗ್ಗೆ ಗೌರವ ಇಟ್ಟುಕೊಳ್ಳಿ. ಈಗಲ್ ಟನ್ ಕರಾಬು ಭೂಮಿ ಬಗ್ಗೆ ಏನ್ ಮಾಡಿದ್ದೀರಿ ಎನ್ನುವುದು ಗೊತ್ತಿದೆ. ಎಕರೆಗೆ 13 ಕೋಟಿ ದಂಡ ನಿಗದಿ ಮಾಡಿದ್ದು ನೆನಪು ಇದೆ ತಾನೇ? ಆದರೆ, ಈ ರೈತರ ಭೂಮಿಗೆ ಎಕರೆಗೇ ಕೇವಲ ₹2.45 ಕೋಟಿ ಕೊಡ್ತೀವಿ ಅಂತೀರಿ? ಇದು ಯಾವ ನ್ಯಾಯ? ರೈತರಿಗೆ ಒಂದು ಲೆಕ್ಕ, ಈಗಲ್ ಟನ್ ಗೆ ಇನ್ನೊಂದು ಲೆಕ್ಕ ಇದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+