HD Kumaraswamy: ಕುಮಾರಸ್ವಾಮಿ ಫೋನ್ ಮಾಡಿದ್ರು ಡೋಂಟ್ ಕೇರ್: ರಾಮನಗರ ಡಿಸಿಗೆ ಖಡಕ್ ಎಚ್ಚರಿಕೆ
ರಾಮನಗರ: ರಾಮನಗರ ಜಿಲ್ಲೆಯ ಜಿಲ್ಲಾಧಿಕಾರಿ ನನ್ನ ಮೊಬೈಲ್ ಕರೆಯನ್ನೇ ಸ್ವೀಕರಿಸಿಲ್ಲ. ನನ್ನ ನಂಬರ್ ನೋಡಿದ ಕೂಡಲೇ ತೆಗೆಯುವುದೇ ಇಲ್ಲ. ಅಧಿಕಾರಿಗಳಿಗೆ ನಾನು ಎಚ್ಚರಿಕೆ ಕೊಡುತ್ತಿದ್ದೇನೆ. ಯಾರೋ ಒತ್ತಡ ಹೇರಿದರೂ ಅಂತ ತಪ್ಪು ಮಾಡಬೇಡಿ ಎಂದು ರಾಮನಗರ ಜಿಲ್ಲಾಧಿಕಾರಿ ವಿರುದ್ದ ಮಾಜಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.
ನಿವೃತ್ತರಾದರೂ ನೀವು ತಪ್ಪಿಸಿಕೊಳ್ಳಲು ಆಗಲ್ಲ. ಚಿತ್ರದುರ್ಗದ ಎಂಜಿನಿಯರ್ ಒಬ್ಬರು ಇದ್ದರು. ಅಧಿಕಾರದಲ್ಲಿ ಇದ್ದಾಗ ಮುಖ್ಯ ಅಭ್ಯಂತರರಾಗಿ ಮಾಡಿದ ತಪ್ಪಿಗೆ ಈಗ ಜೈಲಿಗೆ ಹೋಗಿದ್ದಾರೆ. ಇಡೀ ರಾಜ್ಯದ ಅಧಿಕಾರಿಗಳಿಗೆ ಹೇಳ್ತಿದ್ದೀನಿ, ಈ ಸರ್ಕಾರದ ಶಾಸಕರು, ಸಚಿವರ ಒತ್ತಡಕ್ಕೆ ಜನರಿಗೆ ದ್ರೋಹ ಬಗೆಯಬೇಡಿ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ರಾಮನಗರ ಜಿಲ್ಲೆಯ ಬಿಡದಿ ಸುತ್ತಮುತ್ತಲಿನ ಫಲವತ್ತಾದ ಕೃಷಿ ಭೂಮಿಯನ್ನು ರಾಜ್ಯ ಸರ್ಕಾರ ಅಕ್ರಮವಾಗಿ ಸ್ವಾಧೀನ ಮಾಡಿಕೊಳ್ಳುವುದಕ್ಕೆ ಬಿಡುವುದಿಲ್ಲ. ಒಂದು ಇಂಚು ಭೂಮಿ ಸ್ವಾಧೀನಕ್ಕೂ ಅವಕಾಶ ನೀಡುವುದಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.
ನಮ್ಮ ಭೂಮಿಯನ್ನು ಉಳಿಸಿಕೊಡಿ ಎಂದು ರೈತ ಮಹಿಳೆಯರು ಸೆರಗೊಡ್ಡಿ ಬೇಡಿದಾಗ ಅಕ್ಷರಶಃ ಗದ್ಗದಿತರಾದ ಹೆಚ್ ಡಿ ಕುಮಾರಸ್ವಾಮಿ ಅವರು, ನನ್ನ ಸಹೋದರಿಯರ ಈ ಭೂಮಿಯನ್ನು ಉಳಿಸಿಕೊಡುವ ಭಾರ ನನ್ನದು. ಒಂದು ಇಂಚು ಭೂಮಿಯನ್ನು ಬಿಡುವುದು ಬೇಡ. ಅದು ಹೇಗೆ ಸ್ವಾಧೀನ ಮಾಡಿಕೊಳ್ಳುತ್ತಾರೋ ನೋಡೋಣ ಎಂದು ರಾಜ್ಯ ಸರಕಾರಕ್ಕೆ ಸವಾಲು ಹಾಕಿದರು.
ನೀವು ಯಾರೂ ಹೆದರಬೇಕಿಲ್ಲ. ನಿಮ್ಮ ಜತೆ ನಾನಿದ್ದೇನೆ. ಅದೇನೆ ಬಂದರೂ ಹೆದರಿಸೋಣ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಜನರು ಶಾಶ್ವತ. ಸರ್ಕಾರಗಳು ಜನಾಭಿಪ್ರಾಯಕ್ಕೆ ಮಣಿಯಬೇಕು. ಇಲ್ಲವಾದರೆ ಹೇಗೆ ಬುದ್ಧಿ ಕಲಿಸಬೇಕು ಎಂಬುದು ಜನರಿಗೆ ಗೊತ್ತಿದೆ ಎಂದು ಗುಡುಗಿದರು. ತಮ್ಮ ಮುಂದೆ ಕಣ್ಣೀರಿಟ್ಟುಕೊಂಡ ರೈತ ಮಹಿಳೆಯರಿಗೆ ಧೈರ್ಯ ಹೇಳಿದ ಕುಮಾರಸ್ವಾಮಿ ಅವರು, ನನ್ನ ಸಹೋದರಿಯರ ಕಣ್ಣಲ್ಲಿ ನೀರು ಬರುವುದು ಬೇಡ. ನಿಮ್ಮ ಕಣ್ಣೀರಿಗೆ ಕಾರಣರಾದವರಿಗೆ ತಕ್ಕ ಶಾಸ್ತಿ ಕಾದಿದೆ. 2028ಕ್ಕೆ ನಿಮ್ಮ ಶಕ್ತಿ ಏನೆಂಬುದನ್ನು ತೋರಿಸಿ. ಯಾವುದೇ ಕಾರಣಕ್ಕೆ ನಮಲ್ಲಿ ಒಗ್ಗಟ್ಟು ಒಡೆಯುವುದು ಬೇಡ. ರೈತರ ಒಗ್ಗಟಿಗೆ ಬೆಂಕಿ ಹಾಕಲು ಕೆಲವರು ಪ್ರಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಲವರು ಸ್ವಾಧೀನದ ಪರವಾಗಿದ್ದಾರೆ ಎನ್ನುವ ಮಾತು ಕೇಳಿದೆ. ಅದು ಒಳ್ಳೆಯದಲ್ಲ. ಸರ್ಕಾರ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಈ ಫಲವತ್ತಾದ ಭೂಮಿಯನ್ನು ಅಗ್ಗದ ಬೆಲೆಗೆ ಹೊಡೆದುಕೊಳ್ಳಲು ಹೊರಟಿದೆ. ಕೆಲವರು ಈಗಾಗಲೇ ಬೇನಾಮಿಗಳ ಹೆಸರಿನಲ್ಲಿ ಲ್ಯಾಂಡ್ ಬ್ಯಾಂಕ್ ಮಾಡಿಕೊಂಡು ದರೋಡೆ ಮಾಡಲು ಹೊರಟಿದ್ದಾರೆ. ಅವರು ಜನರಿಗೆ, ಸರಕಾರಕ್ಕೆ ಮೋಸ, ವಂಚನೆ ಮಾಡುತ್ತಿದ್ದಾರೆ. ಇಂತಹವರನ್ನು ಬೀದಿಯಲ್ಲಿ ನಿಲ್ಲಿಸುವ ದಿನಗಳು ದೂರವಿಲ್ಲ ಎಂದರು.
ಈ ಭಾಗದ ಕಾಂಗ್ರೆಸ್ ನಾಯಕರುಗಳು ಇಲ್ಲಿ ನಡೆಯುತ್ತಿರುವ ಮೋಡವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಈ ಸರ್ಕಾರದಲ್ಲಿ ಇರುವವರು ನಿಮ್ಮನ್ನು ಕೂಡ ಮೋಸ ಮಾಡುತ್ತಿದ್ದಾರೆ. ನಿಮ್ಮನ್ನು ದಾಳವನ್ನಾಗಿ ಮಾಡಿಕೊಂಡು ನಿಮ್ಮ ಬದುಕನ್ನು ಕೂಡ ಕಸಿದುಕೊಳ್ಳುತ್ತಿದ್ದಾರೆ. ನನ್ನ ಜೊತೆಯಲ್ಲೇ ಇದ್ದವರು ಅಧಿಕಾರ ದರ್ಪದಿಂದ ಮಾತನಾಡುತ್ತಿದ್ದಾರೆ. ಅವರಿಗೆ ಗೊತ್ತಿರಲಿ, ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂದು ಕುಮಾರಸ್ವಾಮಿ ಅವರು ಗುಡುಗಿದರು.
ಈ ಸರಕಾರದಲ್ಲಿ ಇರುವವರು ಮಾಡುತ್ತಿರುವ ಟೌನ್ ಶಿಪ್ ಬೇರೆ. ಅಂದು ನಾನು ಆಲೋಚನೆ ಮಾಡಿದ್ದ ಯೋಜನೆಯೇ ಬೇರೆ. ಅವರಿಗೂ ನನಗೂ ಹೋಲಿಕೆ ಮಾಡಬೇಡಿ. ಜನರು ಬೇಡ ಎಂದಾಗ ನಾನು ಎರಡನೇ ಮಾತಿಲ್ಲದೆ ಅದನ್ನು ನಿಲ್ಲಿಸಿದೆ. ಆಗ ಇಲ್ಲಿನ ಭೂಮಿಯ ಬೆಲೆ 1 ಲಕ್ಷದೊಳಗೆ ಇತ್ತು. ನಾನು ಅಂದು ನಿಮ್ಮೆಲ್ಲರನ್ನು ಕೃಷ್ಣಾ ಕಚೇರಿಗೆ ಕರೆದು ಚರ್ಚೆ ನಡೆಸಿದೆ. ನನ್ನ ನೈತಿಕತೆ ಅದು. ಆದರೆ, ಇವರಿಗೆ ರೈತರಿಗೆ ಮುಖ ಕೊಡುವ ಧೈರ್ಯವೇ ಇಲ್ಲ ಎಂದು ಕಿಡಿಕಾರಿದರು.
ನಾನು ಇವರಂತೆ ದಬ್ಬಾಳಿಕೆ ನಡೆಸಿಲ್ಲ. ಅವತ್ತೇ ನಾನು ಟೌನ್ ಶಿಪ್ ಮಾಡಿದಿದ್ರೆ ಚೆನ್ನಾಗಿರುತ್ತಿತ್ತು ಯಾರೋ ತಾಯಿ ಹೇಳಿದರು. ಇವತ್ತಿನ ಭೂಮಿಯ ಬೆಲೆ ಕ್ಷಣಕ್ಷಣಕ್ಕೂ ಏರುತ್ತಿದೆ. ಡಿ.ಕೆ. ಶಿವಕುಮಾರ್ ಅವರಿಗೆ ನಾನು ಹೇಳುವುದು ಇಷ್ಟೇ, ರೈತರ ಬದುಕಿನ ಬಗ್ಗೆ ಗೌರವ ಇಟ್ಟುಕೊಳ್ಳಿ. ಈಗಲ್ ಟನ್ ಕರಾಬು ಭೂಮಿ ಬಗ್ಗೆ ಏನ್ ಮಾಡಿದ್ದೀರಿ ಎನ್ನುವುದು ಗೊತ್ತಿದೆ. ಎಕರೆಗೆ 13 ಕೋಟಿ ದಂಡ ನಿಗದಿ ಮಾಡಿದ್ದು ನೆನಪು ಇದೆ ತಾನೇ? ಆದರೆ, ಈ ರೈತರ ಭೂಮಿಗೆ ಎಕರೆಗೇ ಕೇವಲ ₹2.45 ಕೋಟಿ ಕೊಡ್ತೀವಿ ಅಂತೀರಿ? ಇದು ಯಾವ ನ್ಯಾಯ? ರೈತರಿಗೆ ಒಂದು ಲೆಕ್ಕ, ಈಗಲ್ ಟನ್ ಗೆ ಇನ್ನೊಂದು ಲೆಕ್ಕ ಇದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications