Chitradurga-Davangere Highway: ದಾವಣಗೆರೆ-ಚಿತ್ರದುರ್ಗ ಹೆದ್ದಾರಿ ಚಿತ್ರಗಳನ್ನು ಹಂಚಿಕೊಂಡ ಸಚಿವ ನಿತಿನ್ ಗಡ್ಕರಿ
ಬೆಂಗಳೂರು, ಮೇ. 06: ಕಳೆದ ವರ್ಷ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ರಾಜ್ಯಕ್ಕೆ ಆರು ಪಥಗಳ ರಾಷ್ಟ್ರೀಯ ಹೆದ್ದಾರಿಯನ್ನು ಘೋಷಿಸಿದ್ದರು. ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಚಿತ್ರದುರ್ಗ ಮತ್ತು ದಾವಣಗೆರೆ ನಡುವೆ ಹೆದ್ದಾರಿಯನ್ನು ನಿರ್ಮಿಸಲಿದೆ ಎಂದಿದ್ದರು. ಈಗ ಅದರ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ರಾಜ್ಯದ ಎರಡು ಪ್ರಮುಖ ಜಿಲ್ಲೆಗಳನ್ನು ಒಂದು ಮಾಡುವ ಚಿತ್ರದುರ್ಗ ಮತ್ತು ದಾವಣಗೆರೆ ಹೆದ್ದಾರಿ ಫೊಟೋಗಳು ನಯನ ಮನೋಹರವಾಗಿದ್ದು, ನಾಲ್ಕು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಬೆಂಗಳೂರು ಮತ್ತು ಮುಂಬೈಯನ್ನು ಸಂಪರ್ಕಿಸುವ ಜೀವನಾಡಿ ಎಂದು ಕರೆದಿದ್ದಾರೆ.

"ಬೆಂಗಳೂರು ಮತ್ತು ಮುಂಬೈಯನ್ನು ಸಂಪರ್ಕಿಸುವ ಜೀವನಾಡಿಯಾಗಿರುವ ಚಿತ್ರದುರ್ಗ - ದಾವಣಗೆರೆ 6 ಪಥಗಳ ಹೆದ್ದಾರಿಯ ಉದ್ದಕ್ಕೂ ಕಣ್ಣುಕುಕ್ಕುವ ದೃಶ್ಯಗಳನ್ನು ನೋಡಿ. ಈ ಮಾರ್ಗವು ಕೇವಲ ಗಮ್ಯಸ್ಥಾನಗಳನ್ನು ತಲುಪುವ ಬಗ್ಗೆಯಲ್ಲ. ಇದು ಸಮಯದ ಉಳಿತಾಯ, ಇಂಧನ ಉಳಿತಾಯ ಮತ್ತು ಪರಿಸರ ಸ್ನೇಹಿ ಪ್ರಯಾಣದ ಸ್ವರಮೇಳವಾಗಿದೆ. ಇದು ಕರ್ನಾಟಕದ ನೈಸರ್ಗಿಕ ವೈಭವದ ನೇಯ್ಗೆಯಾಗಿದೆ" ಎಂದು ಹೇಳಿದ್ದಾರೆ.
ಸಚಿವ ನಿತಿನ್ ಗಡ್ಕರಿ ಈ ಹಿಂದೆ ಟ್ವಿಟರ್ನಲ್ಲಿ "ಕರ್ನಾಟಕ ಜನರಿಗೆ ಆಧುನಿಕ ರಸ್ತೆ ಸಂಪರ್ಕ ಒದಗಿಸಲು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಚಿತ್ರದುರ್ಗದಿಂದ ದಾವಣಗೆರೆಗೆ ಚಿತ್ರದುರ್ಗ ಬೈಪಾಸ್ ಸೇರಿದಂತೆ 6 ಪಥಗಳ ಹೆದ್ದಾರಿ ನಿರ್ಮಿಸುತ್ತಿದೆ. 72 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರಕ್ಕೆ 1,400 ಕೋಟಿ ರೂಪಾಯಿಗಳನ್ನು ನೀಡಲಿದೆ" ಎಂದು ಹೇಳಿದ್ದರು.

"ಸುಸ್ಥಿರ ರಸ್ತೆಗಳನ್ನು ನಿರ್ಮಿಸುವ ಮತ್ತು ರಸ್ತೆ ವಾಸ್ತುಶಿಲ್ಪದಲ್ಲಿ ಪರ್ಯಾಯ ವಸ್ತುಗಳ ಬಳಕೆಯನ್ನು ಉತ್ತೇಜಿಸುವ ನಮ್ಮ ಪ್ರಯತ್ನಗಳಲ್ಲಿ, ಈ ಯೋಜನೆಯು ಬಿಟುಮಿನಸ್ ಕಾಂಕ್ರೀಟ್ ಮತ್ತು ಮಿಲ್ಲಿಂಗ್ ವಸ್ತುಗಳಲ್ಲಿ ಪ್ಲಾಸ್ಟಿಕ್ ಅನ್ನು ಬಳಸಲಾಗುತ್ತದೆ. ಇದು ಭವಿಷ್ಯದಲ್ಲಿ ರಸ್ತೆಗಳ ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡುತ್ತದೆ" ಎಂದು ನಿತಿನ್ ಗಡ್ಕರಿ ಟ್ವೀಟ್ನಲ್ಲಿ ಮಾಹಿತಿ ನೀಡಿದ್ದರು.
"ಈ ಹೆದ್ದಾರಿ ಯೋಜನೆಯು ಚಿತ್ರದುರ್ಗ ಮತ್ತು ದಾವಣಗೆರೆ ನಡುವೆ ಮಾತ್ರವಲ್ಲದೆ ಬೆಂಗಳೂರು ಮತ್ತು ಮುಂಬೈ ನಡುವಿನ ರಸ್ತೆ ಸಾರಿಗೆಯನ್ನು ಅಭಿವೃದ್ಧಿ ಪಡಿಸುತ್ತದೆ. ಏಕೆಂದರೆ ಹೆದ್ದಾರಿ ಎರಡೂ ರಾಜಧಾನಿ ನಗರಗಳನ್ನು ಭಾಗಶಃ ಸಂಪರ್ಕಿಸುತ್ತದೆ. ಈ ಯೋಜನೆಯು ಚಿತ್ರದುರ್ಗದಿಂದ ದಾವಣಗೆರೆಗೆ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಐಟಿ ರಾಜಧಾನಿ ಬೆಂಗಳೂರು ಮತ್ತು ಆರ್ಥಿಕ ರಾಜಧಾನಿ ಮುಂಬೈ ನಡುವಿನ ಸಾರಿಗೆಯನ್ನು ಸುಧಾರಿಸುತ್ತದೆ" ಎಂದು ಮತ್ತೊಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
Traverse the breathtaking vistas along the 6-lane Chitradurga-Davangere stretch 🛣️, a lifeline linking Bangalore and Mumbai. This route isn't just about reaching destinations; it's a symphony of time-saving, fuel-efficient, and eco-friendly travel, weaving through Karnataka's… pic.twitter.com/bBxNrJOSxW
— Nitin Gadkari (मोदी का परिवार) (@nitin_gadkari) May 6, 2024
" ಈ ಯೋಜನೆಯು ಚಿತ್ರದುರ್ಗ ಮತ್ತು ದಾವಣಗೆರೆ ನಡುವೆ ಮಾತ್ರವಲ್ಲದೆ ಬೆಂಗಳೂರು ಮತ್ತು ಮುಂಬೈ ನಡುವಿನ ರಸ್ತೆ ಸಾರಿಗೆಯನ್ನು ಹೆಚ್ಚಿಸುತ್ತದೆ ಏಕೆಂದರೆ ಹೆದ್ದಾರಿ ಎರಡೂ ರಾಜಧಾನಿ ನಗರಗಳನ್ನು ಭಾಗಶಃ ಸಂಪರ್ಕಿಸುತ್ತದೆ. ಈ ಯೋಜನೆಯು ಚಿತ್ರದುರ್ಗದಿಂದ ದಾವಣಗೆರೆಗೆ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಐಟಿ ರಾಜಧಾನಿ ಬೆಂಗಳೂರು ಮತ್ತು ಆರ್ಥಿಕ ರಾಜಧಾನಿ ಮುಂಬೈ ನಡುವಿನ ಸಾರಿಗೆಯನ್ನು ಸುಧಾರಿಸುತ್ತದೆ" ಎಂದು ವಿವರವಾಗಿ ಮಾಹಿತಿ ಹಂಚಿಕೊಂಡಿದ್ದರು.
ಇನ್ನು, ಚಿತ್ರದುರ್ಗ ಮತ್ತು ದಾವಣಗೆರೆ ನಡುವಿನ ಹೆದ್ದಾರಿ ಘೋಷಣೆ ವೇಳೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿ-75 ರ ಅಡಿಯಲ್ಲಿ ಬರುವ ರಾಜ್ಯದಲ್ಲಿ ನೆಲಮಂಗಲ ಮತ್ತು ದೇವಿಹಳ್ಳಿ ನಡುವೆ ಹೆದ್ದಾರಿ ನಿರ್ಮಾಣವನ್ನು ಘೋಷಿಸಿತ್ತು. ಕಳೆದ ವರ್ಷ ಉದ್ಘಾಟನೆಯಾದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಬಗ್ಗೆ ಬಿಜೆಪಿ ನಾಯಕರು ಹೆಚ್ಚು ಪ್ರಚಾರ ಮಾಡಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications