ಭಾರತವನ್ನು ವಿಶ್ವಗುರು ಮಾಡುವುದೇ ಬಿಜೆಪಿ ಪಕ್ಷದ ಗುರಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ರಾಷ್ಟ್ರೀಯ ಹಿತಚಿಂತನೆ ಹೊಂದಿರುವ ಬಿಜೆಪಿ ಇಂದು ಇಡೀ ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ಪ್ರಲ್ಹಾದ ಜೋಶಿ ಅವರು ಇಂದು ಕುಂದಗೋಳ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜನೆ ಮಾಡಿದ್ದ, ಬಿಜೆಪಿ ಸದಸ್ಯತ್ವ ಅಭಿಯಾನ ಪೂರ್ವಭಾವಿ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಕೇಂದ್ರ ಸಚಿವರು, ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯುವ ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಬಗ್ಗೆ ಮಾಹಿತಿ ನೀಡಿದರು.
ಅಂದಹಾಗೆ ಬಿಜೆಪಿ ಎಂದೆಂದಿಗೂ ಭಾರತದ ಪ್ರಗತಿ ಜೊತೆ ಜೊತೆಗೆ ದೇಶವಾಸಿಗಳ ಏಳಿಗೆಯನ್ನು ಕೂಡ ಗಮನದಲ್ಲಿ ಇಟ್ಟುಕೊಂಡು ಆಡಳಿತಾತ್ಮಕವಾಗಿ ಇದೀಗ ಹೆಜ್ಜೆಯ ಹಾಕುತ್ತಿದೆ ಎಂದರು. ರಾಷ್ಟ್ರೀಯ ಹಿತ ಚಿಂತನೆಯ ಜೊತೆಗೆ ಭಾರತವನ್ನು ಮುನ್ನಡೆಸುತ್ತಿದೆ. ಇದರ ಫಲವಾಗಿ ಬಿಜೆಪಿ ಇಂದು ವಿಶ್ವದಲ್ಲೇ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರ ಹೊಮ್ಮಿದೆ ಎಂದು ಇದೇ ವೇಳೆ, ತಿಳಿಸಿದರು. ಇದರ ಜೊತೆಗೆ ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯುವ ಬಗ್ಗೆ ಕೂಡ ಮಾತನಾಡಿದರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು.

ರಾಷ್ಟ್ರೀಯತೆ & ಏಕತೆ ಬೆಂಬಲಿಸಲು ಕರೆ
ಅಷ್ಟಕ್ಕೂ ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಏರಿಸುವ ಧ್ಯೇಯದೊಂದಿಗೆ ಬಿಜೆಪಿ ದಾಪುಗಾಲು ಹಾಕುತ್ತಿದೆ. ಈ ಮಹತ್ವದ ಕಾರ್ಯದಲ್ಲಿ ಯುವ ಸಮುದಾಯ & ಸರ್ವರೂ ಭಾಗಿ ಆಗಬೇಕಿದೆ. ಈ ಹಿನ್ನೆಲೆ ಬಿಜೆಪಿ ಸದಸ್ಯತ್ವ ಅಭಿಯಾನವನ್ನ ಆರಂಭಿಸಿದೆ ಅಂತ ಕೇಂದ್ರ ಸಚಿವರಾದ ಜೋಶಿ ತಿಳಿಸಿದರು. ಅಲ್ಲದೆ ಬಿಜೆಪಿ ಸದಸ್ಯತ್ವ ಅಭಿಯಾನ ಇದೇ ಸೆಪ್ಟೆಂಬರ್ 2ಕ್ಕೆ ಆರಂಭ ಆಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆದು ರಾಷ್ಟ್ರೀಯತೆ, ಏಕತೆಯನ್ನ ಬೆಂಬಲಿಸಿ ಎಂದು ಇದೇ ವೇಳೆ ಕೇಂದ್ರ ಸಚಿವರು ಕರೆ ನೀಡಿದರು.
ಸಭೆಯಲ್ಲಿ ಮಹತ್ವದ ಚರ್ಚೆ
ಕುಂದಗೋಳ ಕ್ಷೇತ್ರದಲ್ಲಿ ನಡೆದ ಪೂರ್ವಭಾವಿ ಕಾರ್ಯಾಗಾರದಲ್ಲಿ ಬಿಜೆಪಿ ಪಕ್ಷದ ಮುಖಂಡರು ಸೇರಿದಂತೆ ಪಕ್ಷದ ಹಿರಿಯರು ಹಾಗೂ ಪ್ರಮುಖರು ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಹಾಗೂ ಸ್ಥಳೀಯ ಮಟ್ಟದಲ್ಲಿ ಕಾರ್ಯಾಗಾರ ಯಶಸ್ವಿಯಾಗಿ ನಡೆಯಲು ಬೇಕಾದ ಸಿದ್ಧತೆಗಳ ಕುರಿತು ಈ ಸಮಯದಲ್ಲಿ ಚರ್ಚೆ ನಡೆಸಲಾಯಿತು. ಬಿಜೆಪಿ ಕಾರ್ಯಕರ್ತರು ಈ ಮಹತ್ವದ ಸದಸ್ಯ ಕಾರ್ಯಾಗಾರದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಈ ಬಗ್ಗೆ ಕೂಡ ಸಭೆಯಲ್ಲಿ ಚರ್ಚೆಯು ನಡೆಯಿತು. ಈಗಾಗಲೇ ಬಿಜೆಪಿ ಇಡೀ ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂಬ ಕೀರ್ತಿ ಪಡೆದಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications