ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಮಲತಾರನ್ನು ನೋಡಿ ಜೆಡಿಎಸ್ ಸಾಕಷ್ಟು ಕಲಿಯಬೇಕು : ಡಿವಿಎಸ್

|
Google Oneindia Kannada News

Recommended Video

ಸುಮಲತಾ ನೋಡಿ ಜೆಡಿಎಸ್‍ನವರು ಕಲಿಯಲಿ ಎಂದ ಗೌಡ್ರು | Oneindia Kannada

ಬೆಂಗಳೂರು, ಜೂನ್ 09 : 'ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್‌ ಅವರ ಪ್ರಬುದ್ಧತೆಯನ್ನು ನೋಡಿ ಜೆಡಿಎಸ್‌ನವರು ಕಲಿಯಬೇಕು' ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.

ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, 'ಯಾವ ಪಕ್ಷಕ್ಕೂ ಸೇರಿ ಯಾರ ಬಳಿಯೂ ಭಿಕ್ಷೆ ಬೇಡಲ್ಲ ಎಂದು ಸುಮಲತಾ ಹೇಳಿದ್ದಾರೆ. ಇದನ್ನು ನೋಡಿ ಜೆಡಿಎಸ್‌ನವರು ಕಲಿಯಬೇಕು' ಎಂದರು.

ಬಿಜೆಪಿ ಕಚೇರಿಯಲ್ಲಿ ಸುಮಲತಾ, ಮುಂದಿನ ನಡೆಯ ಬಗ್ಗೆ ಹೇಳಿದ್ದೇನು?ಬಿಜೆಪಿ ಕಚೇರಿಯಲ್ಲಿ ಸುಮಲತಾ, ಮುಂದಿನ ನಡೆಯ ಬಗ್ಗೆ ಹೇಳಿದ್ದೇನು?

'ಜೆಡಿಎಸ್‌ ಈ ಜನ್ಮ ಪೂರ್ತಿ ಸುಮಲತಾ ಅವರಿಂದ ಕಲಿಯಲು ಸಾಧ್ಯವಿಲ್ಲ. ಆದರೆ, ಸ್ವಲ್ಪವಾದರೂ ಕಲಿಯಿರಿ. ಮಂಡ್ಯದಲ್ಲಿ ಜನರು ಕಪಾಳಮೋಕ್ಷ ಮಾಡಿದರೂ ಬುದ್ಧಿ ಬಂದಿಲ್ಲ' ಎಂದು ಟೀಕಿಸಿದರು.

ಏಕಾಂಗಿಯಾಗಿ ಹೋರಾಡಿದ್ದರೆ ಕಾಂಗ್ರೆಸ್ 10 ಸ್ಥಾನ ಗೆಲ್ಲುತ್ತಿತ್ತು: ಸುಮಲತಾಏಕಾಂಗಿಯಾಗಿ ಹೋರಾಡಿದ್ದರೆ ಕಾಂಗ್ರೆಸ್ 10 ಸ್ಥಾನ ಗೆಲ್ಲುತ್ತಿತ್ತು: ಸುಮಲತಾ

Sadananda Gowda

'ನಿಖಿಲ್ ಕುಮಾರಸ್ವಾಮಿ ಇಷ್ಟು ದೊಡ್ಡ ರಾಜಕಾರಣಿ ಆದರಲ್ಲ ನನಗೆ ಆಶ್ಚರ್ಯ ಆಗುತ್ತಿದೆ. ನಿನ್ನೆ ಮೊನ್ನೆ ರಾಜಕಾರಣಕ್ಕೆ ಬಂದವರು ನಿಖಿಲ್. ಸಿನಿಮಾದಲ್ಲಿ ರಾಜಕಾರಣ ಮಾಡಿರಬಹುದು. ಆದರೆ, ರಾಜಕಾರಣವನ್ನು ಸಿನಿಮಾ ರೀತಿ ಮಾಡಲು ಸಾಧ್ಯವಿಲ್ಲ' ಎಂದು ಸಲಹೆ ನೀಡಿದರು.

ಸುಮಲತಾ ಸೇರಿ, 2019ರ ಪಕ್ಷೇತರ ಸಂಸದರು ಯಾರು ಯಾರು?ಸುಮಲತಾ ಸೇರಿ, 2019ರ ಪಕ್ಷೇತರ ಸಂಸದರು ಯಾರು ಯಾರು?

'ಸಂಪುಟ ವಿಸ್ತರಣೆ ರಾಜ್ಯದ ಸಮ್ಮಿಶ್ರ ಸರ್ಕಾರ ಬೀಳಲು ಅಡಿಗಲ್ಲು ಹಾಕಿದ ಹಾಗೆ. ಅವರವರು ಜಗಳ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರ ಉಳಿಸಲು ಹೋಗುವ ಅವರ ಸಾಹಸವೇ ಅವರನ್ನು ಮುಳುಗಿಸುತ್ತದೆ' ಎಂದು ಸದಾನಂದ ಗೌಡರು ಭವಿಷ್ಯ ನುಡಿದರು.

'ಬರಗಾಲದಿಂದಾಗಿ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ಕ್ಷೇತ್ರಗಳಿಗೆ ಭೇಟಿ ನೀಡಿದರೆ ಇದರ ಅರಿವಾಗುತ್ತದೆ. ರಾಜ್ಯ ಸರ್ಕಾರ ಜನರ ಸಮಸ್ಯೆ ಬಗ್ಗೆ ಗಮನಹರಿಸುತ್ತಿಲ್ಲ. ಇದನ್ನು ಗಮನಿಸಿಯೇ ಲೋಕಸಭಾ ಚುನಾವಣೆಯಲ್ಲಿ ಜನರು ಅವರನ್ನು ರಿಜೆಕ್ಟ್ ಮಾಡಿದ್ದಾರೆ' ಎಂದು ಹೇಳಿದರು.

English summary
Union minister for Chemicals and Fertilisers D.V.Sadananda Gowda slammed Karnataka JD(S) leaders. Sadananda Gowda said that party leaders to learn various things from Mandya MP Sumalatha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X