ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣೆ ಬಂದಾಗ ಗ್ಯಾರಂಟಿ ಕೊಡುವ ಪಕ್ಷಗಳು: ಶೋಭಾ ಕರಂದ್ಲಾಜೆ ವಾಗ್ದಾಳಿ
ಬೆಂಗಳೂರು, ಮಾರ್ಚ್28: ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ನಾಯಕರು ಅಬ್ಬರದ ಪ್ರಚಾರ ಕಅರ್ಯವನ್ನ ಚುರುಕುಗೊಳಿಸಿದ್ದು, ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ದ ಟೀಕಾ ಪ್ರಹಾರವನ್ನ ಆರಂಭಿಸಿವೆ.
ಚುನಾವಣಾ ದಿನಾಂಕ ಘೋಷಣೆ ಕುರಿತು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಮಾತನಾಡಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣೆ ಬಂದಾಗ ಗ್ಯಾರಂಟಿ ಕೊಡುವ ಪಕ್ಷಗಳು. ಚುನಾವಣೆಗಾಗಿ ಜಾತಿ, ಧರ್ಮದ ಹೆಸರು ಹೇಳಿ ಒಡೆದು ಆಳುವ ಕೆಲಸ ಮಾಡುವವರು ಈ ಪಕ್ಷಗಳು ಎಂದು ಆರೋಪಿಸಿದರು.

2013-18ರ ಕಾಲಾವಧಿಯಲ್ಲಿ ಕೂಡ ಕಾಂಗ್ರೆಸ್ ಆಡಳಿತವಿದ್ದಾಗ ಆ ಪಕ್ಷ ಇದನ್ನೇ ಮಾಡಿತ್ತು. ಸಿದ್ದರಾಮಯ್ಯರ ಸರಕಾರ ಸಮಾಜ, ಧರ್ಮವನ್ನು ಒಡೆಯುವ ದುಷ್ಕೃತ್ಯ ಮಾಡಿತ್ತು. ಬಿಜೆಪಿ ಸರ್ವ ಜನಾಂಗವನ್ನು ಒಟ್ಟಿಗೆ ಒಯ್ಯುವ, ಯಾವುದೇ ಯೋಜನೆ ಇದ್ದರೂ ಎಲ್ಲ ಜನಾಂಗಗಳ ಕೊನೆ ವ್ಯಕ್ತಿಗಳಿಗೆ ತಲುಪಿಸುವ ಕಾರ್ಯವನ್ನು ಮೋದಿಜಿ ನೇತೃತ್ವದ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರ ಮಾಡುತ್ತಿದೆ ಎಂದು ತಿಳಿಸಿದರು.
ಮೇ 10ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜನತೆ ಡಬಲ್ ಎಂಜಿನ್ ಸರಕಾರ ರಚನೆಗೆ ಮತ್ತೆ ಅವಕಾಶ ಮಾಡಿಕೊಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, 2008ರಲ್ಲಿ ಚುನಾವಣೆ ನಡೆದಾಗ ನಾವು 108 ಸ್ಥಾನಗಳನ್ನು ಗೆದ್ದಿದ್ದೆವು. ಬಹುಮತಕ್ಕೆ 3 ಸೀಟುಗಳ ಕೊರತೆ ಇತ್ತು. 2018ರಲ್ಲಿ ಕೂಡ 104 ಸೀಟುಗಳ ಜೊತೆ ಅತ್ಯಂತ ದೊಡ್ಡ ಪಕ್ಷವಾಗಿ ರಾಜ್ಯದ ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದರು. ಆದರೆ, ಬಹುಮತ ಸಿಗಲಿಲ್ಲ. ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿ ಸರಕಾರ ರಚಿಸಲಾಯಿತು. ಕಾಲಾನಂತರ ಆ ಸರಕಾರದ ಕುರಿತು ಬೇಸತ್ತು ಹಲವರು ನಮ್ಮ ಪಕ್ಷ ಸೇರಿದ್ದರಿಂದ ಮರು ಚುನಾವಣೆ ನಡೆದು ಮತ್ತೆ ನಮ್ಮ ಸರಕಾರ ರಚಿಸಿದೆವು ಎಂದರು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ಹೆಚ್ಚು ವೇಗವಾಗಿ ಅಭಿವೃದ್ಧಿ ಕಾರ್ಯ ಸಾಧ್ಯ ಎಂದು ಜನರು ಅಭಿಪ್ರಾಯ ಹೊಂದಿದ್ದಾರೆ. 9.17 ಲಕ್ಷ ಯುವಜನರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. ಅವರು ಏಪ್ರಿಲ್ 1ವರೆಗೆ ಮತದಾರರ ನೋಂದಣಿ ಮಾಡಬಹುದು.
ನರೇಂದ್ರ ಮೋದಿಯವರ ಸರಕಾರ ಯೋಜನೆಗಳನ್ನು ಮತ್ತು ಕರ್ನಾಟಕದಲ್ಲಿ ಯಡಿಯೂರಪ್ಪ- ಬಸವರಾಜ ಬೊಮ್ಮಾಯಿಯವರ ಯೋಜನೆಗಳನ್ನು ನಾವು ನಿರಂತರವಾಗಿ ಜನರ ಮಧ್ಯೆ ತಿಳಿಸುವ ಕಾರ್ಯವನ್ನು ನಾವು ಚುನಾವಣೆ ಇಲ್ಲದ ಕಾಲದಲ್ಲೂ ಮಾಡಿದ್ದೇವೆ. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣೆ ಬಂದಾಗ ಎಚ್ಚರಗೊಳ್ಳುವ ಪಕ್ಷಗಳು ಎಂದು ಟೀಕಿಸಿದರು.
ಇನ್ನೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲೆಂಬ ಅಪೇಕ್ಷೆ ಇತ್ತು. ಅದೇ ನಿರೀಕ್ಷೆಯಂತೆ ಚುನಾವಣೆ ನಡೆಯುತ್ತಿದೆ. ಶಾಂತಿಯುತ ಮತದಾನ ಆಗಲಿ; ಗೊಂದಲ, ಗಲಭೆಯಿಂದ ಮರು ಮತದಾನ ಆಗದಿರಲಿ ಎಂಬ ಅಪೇಕ್ಷೆ ನಮ್ಮದು ಎಂದು ತಿಳಿಸಿದರು. 80 ವರ್ಷಕ್ಕಿಂತ ಮೇಲ್ಪಟ್ಟ 12 ಲಕ್ಷಕ್ಕೂ ಹೆಚ್ಚು ಮತದಾರರು, ಸಾವಿರಾರು ದಿವ್ಯಾಂಗ ಮತದಾರರು ಮನೆಯಲ್ಲೇ ಕುಳಿತು ಮತದಾನ ಮಾಡಲು ಅವಕಾಶ ಮಾಡಿಕೊಟ್ಟ ಚುನಾವಣಾ ಆಯೋಗಕ್ಕೆ ಧನ್ಯವಾದಗಳು. ತಂತ್ರಜ್ಞಾನಕ್ಕೆ ಒತ್ತು ಕೊಟ್ಟ ಕಾರಣ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.
ಬೆಂಗಳೂರಿನಂಥ ಮಹಾನಗರದಲ್ಲಿ ಮತದಾನದ ಶೇಕಡಾವಾರು ಕಡಿಮೆ ಆಗುವ ಕುರಿತು ಆಯೋಗ ಆತಂಕ ವ್ಯಕ್ತಪಡಿಸಿ, ಹೆಚ್ಚು ಒತ್ತು ಕೊಡಲು ಕೋರಿದೆ. ಇದಕ್ಕಾಗಿ ನಗರ ಮತದಾರರನ್ನು ಕರೆತರಲು ಮತ್ತು ಮನ ಒಲಿಸಲು ವಿಶೇಷ ಪ್ರಯತ್ನ ಅಗತ್ಯವಿದೆ. ಪುರುಷ ಮತದಾರರ ಬಹುತೇಕ ಸರಿಸಮವಾಗಿ ಮಹಿಳಾ ಮತದಾರರು, ಕೆಲವೆಡೆ ಹೆಚ್ಚು ಮತದಾರರಿರುವುದು ಖುಷಿಯ ವಿಚಾರ ಎಂದು ತಿಳಿಸಿದರು.
ರಾಜ್ಯದಲ್ಲಿ ವಿಮಾನನಿಲ್ದಾಣ, ರೈಲ್ವೆ ನಿಲ್ದಾಣಗಳ ಅಭಿವೃದ್ಧಿ, ರೈಲ್ವೆ ಸ್ಟೇಷನ್ಗಳ ಸ್ವಚ್ಛತೆ, ಲೈನ್ಗಳ ಡಬಲಿಂಗ್, ಹೆಚ್ಚು ರೈಲುಗಳನ್ನು ಓಡಿಸಿದ್ದು, ಹೆದ್ದಾರಿಗಳ ಅಭಿವೃದ್ಧಿ, ಜಲಜೀವನ್ ಮಿಷನ್ ಸಾಧನೆ, ಆಯುಷ್ಮಾನ್ ಕಾರ್ಡ್ ಸಾಧ್ಯವಾಗಲು ಡಬಲ್ ಎಂಜಿನ್ ಸರಕಾರವೇ ಕಾರಣ ಎಂದು ತಿಳಿಸಿದರು.
-
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು









Click it and Unblock the Notifications