Congress Manifesto 2023: ಮುಸ್ಲಿಮರ ಓಲೈಕೆಯ ಕಾಂಗ್ರೆಸ್ ಪ್ರಣಾಳಿಕೆ ಪ್ರಕಟ: ಶೋಭಾ ಕರಂದ್ಲಾಜೆ ಕಿಡಿ

ಬೆಂಗಳೂರು,ಮೇ2: ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ ಕುರಿತು ಕಿಡಿಕಾರಿದೆ.

ಈ ಕುರಿತು ಮಂಗಳವಾರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ಗೆ ವಿನಾಶಕಾಲೇ ವಿಪರೀತ ಬುದ್ದಿ ಎಂಬಂತೆ ವಿನಾಶಕಾಲ ಬಂದಿದೆ. ಇಂದು ಕಾಂಗ್ರೆಸ್ ಬಿಡುಗಡೆ ಮಾಡಿದ ಚುನಾವಣಾ ಪ್ರಣಾಳಿಕೆಯಲ್ಲಿ ಪಿಎಫ್‍ಐ ಮತ್ತು ಭಜರಂಗದಳ ನಿಷೇಧಿಸುವುದಾಗಿ ಹೇಳಲಾಗಿದೆ. ಆದರೆ, ಈಗಾಗಲೇ ಭಯೋತ್ಪಾದಕ ಮತ್ತು ದೇಶವಿರೋಧಿ ಚಟುವಟಿಕೆ ನಡೆಸುತ್ತಿದ್ದ ಪಿಎಫ್‍ಐ ಅನ್ನು ಅನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ ಎಂದು ತಿಳಿಸಿದರು.

Union Minister Shobha Karandlaje Fierce Attack Against Congress Manifesto

ಇದೇ ಪಿಎಫ್‍ಐ ಮೇಲಿನ ಪ್ರಕರಣಗಳನ್ನು ಅಂದಿನ ಕಾಂಗ್ರೆಸ್ ಸರ್ಕಾರ ಹಿಂತೆಗೆದುಕೊಂಡು ಆ ಸಂಘಟನೆಯ ನೂರಾರು ಪ್ರಕರಣಗಳನ್ನು ಹಿಂತೆಗೆದುಕೊಂಡಿತ್ತು. ಕಾಂಗ್ರೆಸ್, ಭಜರಂಗದಳವನ್ನು ಗುರಿಯಾಗಿಸಿಕೊಂಡಿದೆ. ಪಿಎಫ್‍ಐ ಸಖ್ಯವನ್ನು ಹೊಂದಿದೆ. ಭಜರಂಗದಳ, ಆರೆಸ್ಸೆಸ್‍ನ ಭಾಗವಾಗಿದ್ದು, ಯುವಕರ ಮಧ್ಯೆ ದೇಶಕ್ಕಾಗಿ ಕೆಲಸ ಮಾಡುತ್ತಿದೆ. ಅದು ಯಾವತ್ತೂ ದೇಶ ವಿರೋಧಿ ಕೆಲಸ ಮಾಡಿಲ್ಲ. ಇಂತಹ ಸಂಘಟನೆಯನ್ನು ಬಾಂಬ್ ಸ್ಫೋಟಿಸುವ, ಮತೀಯ ಗಲಭೆಗಳನ್ನು ನಡೆಸುವ, ದೇಶವಿರೋಧಿ ಚಟುವಟಿಕೆಗಳನ್ನು ನಡೆಸುವ ಪಿಎಫ್‍ಐ ನೊಂದಿಗೆ ಕಾಂಗ್ರೆಸ್ ಹೋಲಿಕೆ ಮಾಡಿದೆ ಎಂದು ಕಿಡಿಕಾರಿದರು.

ಭಜರಂಗದಳವನ್ನು ನಿಷೇಧಿಸುವ ಶಕ್ತಿಯನ್ನು ಕಾಂಗ್ರೆಸ್ ತೋರಿಸಲಿ. ಇದಕ್ಕೆ ಬಿಜೆಪಿ ತಕ್ಕ ಉತ್ತರ ನೀಡುತ್ತದೆ. ಕಾಂಗ್ರೆಸ್ ಈ ಹಿಂದೆ ಆರೆಸ್ಸೆಸ್ ನಿಷೇಧಿಸಿತ್ತು. ಆದರೆ, ಸುಪ್ರೀಂಕೋರ್ಟ್ ಈ ನಿಷೇಧ ಕ್ರಮವನ್ನು ತಿರಸ್ಕರಿಸಿತ್ತು. ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸಿದೆ. ಬಿಜೆಪಿ, ಭಜರಂಗದಳದೊಂದಿಗೆ ಇದೆ. ದೇಶದ್ರೋಹಿಗಳ ಜೊತೆ ಕಾಂಗ್ರೆಸ್ ಇದೆ ಎಂದು ಹೇಳಿದರು.

ಇನ್ನೂ ಮುಸ್ಲಿಮರಿಗೆ 10,000 ಕೋಟಿ ರೂ. ನೀಡುವುದಾಗಿ, ಟಿಪ್ಪು ವಿಶ್ವವಿದ್ಯಾಲಯ ಸ್ಥಾಪನೆ, ಟಿಪ್ಪು ಜಯಂತಿ ಮತ್ತೆ ಆಚರಣೆ, ಗೋಹತ್ಯೆ, ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವುದಾಗಿ ಕಾಂಗ್ರೆಸ್ ಹೇಳಿದೆ. ಗೋಹತ್ಯೆ, ಮತಾಂತರ ನಿಷೇಧ ಕಾಯ್ದೆ ಜನವಿರೋಧಿಯಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

Union Minister Shobha Karandlaje Fierce Attack Against Congress Manifesto

ಸಿದ್ದರಾಮಯ್ಯ ಮಸ್ಲಿಮರ ನಾಯಕರಾಗಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಪಿಎಫ್‍ಐ ಒತ್ತಡದಿಂದ ಭಜರಂಗದಳ ನಿಷೇಧಿಸುವ ಭರವಸೆ ನೀಡಿದ್ದಾರೆ. ಕೇರಳದ ಮಲಪ್ಪುರಂನಂತೆ ಕರ್ನಾಟಕವನ್ನು ದೇಶವಿರೋಧಿ ಚಟುವಟಿಕೆಗಳು ನಡೆಯಲು ಬಿಜೆಪಿ ಬಿಡುವುದಿಲ್ಲ. ಜನರು ಕಾಂಗ್ರೆಸ್‍ಗೆ ತಕ್ಕ ಪಾಠ ಕಲಿಸಲಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್, ಒಂದಂಕಿಗೆ ಇಳಿಯಲಿದೆ ಎಂದು ಹೇಳಿದರು.

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹೇಳಿದ್ದೇನು?

ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಚಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗ ಭಜರಂಗದಳ ಮತ್ತು ಪಿ.ಎಫ್.ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+