ಬಜರಂಗದಳ, ಆರೆಸ್ಸೆಸ್ನ ಒಂದು ಭಾಗ; ಹಿಂದೂಗಳ ಭಾವನೆಗಳ ಜತೆ ಕಾಂಗ್ರೆಸ್ ಚೆಲ್ಲಾಟ: ಶೋಭಾ ಕರಂದ್ಲಾಜೆ
ಬೆಂಗಳೂರು, ಮೇ 5: ಚುನಾವಣೆಯಲ್ಲಿ ಗೆಲ್ಲಬೇಕೆಂದು ಹಿಂದೂಗಳ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು.
ಬಿಜೆಪಿ, ಬಜರಂಗದಳದವರಿಗೆ ಹನುಮಾನ್ ಚಾಲಿಸಾ ಪಠಿಸಲು ಬರುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೇವಾಲ ಹುಡುಗಾಟದ ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆ. ಅವರ ಈ ಸವಾಲನ್ನು ಸ್ವೀಕರಿಸಿ ಬಿಜೆಪಿ ಕಾರ್ಯರ್ತರ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸ ಪಠಿಸಲಿದ್ದಾರೆ. ತಾವು ಸಹ ಇಂದು ಮಲ್ಲೇಶ್ವರನ ಶ್ರೀರಾಮ ಮಂದಿರಲ್ಲಿ ಹನುಮಾನ್ ಚಾಲಿಸಾ ಪಠಿಸಲಿದ್ದು, ಸುರ್ಜೆವಾಲ ಮತ್ತು ಕಾಂಗ್ರೆಸ್ನವರು ದೇವಸ್ಥಾನಗಳಿಗೆ ಬಂದು ಕೇಳಲಿ ಎಂದು ಆಹ್ವಾನಿಸಿದರು.

ಹನುಮನನ್ನು ನಾವು ನಂಬಿರುವುದು ಮತ್ತು ಹನುಮನ ಶಕ್ತಿ ಬಗ್ಗೆ ವಿಶ್ವಕ್ಕೇ ಗೊತ್ತು. ಕರ್ನಾಟಕ, ಹನುಮ ಉದಯಿಸಿದ ನಾಡು. ಅಂಜನಾದ್ರಿ ಬೆಟ್ಟ, ಹಂಪಿ ಪ್ರದೇಶಗಳಲ್ಲಿ ಓಡಾಡಿದವರು. ಹನುಮಂತನ ಮೇಲೆ ಕನ್ನಡಿಗರಿಗಿರುವ ಭಕ್ತಿ, ಹೆಮ್ಮೆ, ಗೌರವವನ್ನು ಕದ್ದೊಯ್ಯುವ ಪ್ರಯತ್ನವನ್ನು ಕಾಂಗ್ರೆಸ್ ನವರು ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಸುರ್ಜೇವಾಲಗೆ ಆಂಜನೇಯನ ಬಗ್ಗೆ ಗೊತ್ತಿಲ್ಲ. ಆಂಜನೇಯನ ಅಪ್ಪ-ಅಮ್ಮ ಯಾರೆಂದು ಗೊತ್ತಿಲ್ಲ. ಆದರೂ ಆಂಜನೇಯನ ಶಕ್ತಿ ಬಗ್ಗೆ ಮಾತನಾಡಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಚುನಾವಣೆ, ಕುರ್ಚಿಗಾಗಿ ಏನು ಬೇಕಾದರೂ ಮಾಡಲು ಕಾಂಗ್ರೆಸ್ ಹೊರಟಿದೆ. ಹಿಂದೂಗಳು ಎಲ್ಲವನ್ನೂ ಸಹಿಸಿಕೊಳ್ಳುತ್ತಾರೆ ಎಂದು ತಿಳಿದಿದೆ. ಇದೇ ಎಸ್ಡಿಪಿಐ ಅನ್ನು ಖುಷಿ ಪಡಿಸಲು ಕಾಂಗ್ರೆಸ್ ಇಂತಹ ಹೇಳಿಕೆಗಳನ್ನು ನೀಡುತ್ತಿದೆ. ನಿಷೇಧಿತ ಪಿಎಫ್ಐನವರೇ ಎಸ್ಡಿಪಿಐನಲ್ಲಿದ್ದಾರೆ. ಎಸ್ಡಿಪಿಐ ಪ್ರಣಾಳಿಕೆ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿದೆ. ಈ ಚುನಾವಣೆಯಲ್ಲಿ ಧರ್ಮವನ್ನು ಎಳೆದುತಂದು ಕಾಂಗ್ರೆಸ್ ಕೆಟ್ಟ ರಾಜಕೀಯ ಮಾಡುತ್ತಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದರು.
ಬಿಜೆಪಿ, ಆರೆಸ್ಸೆಸ್ನ ಒಂದು ಭಾಗವಿದ್ದಂತೆ. ಅದೇ ರೀತಿ ಬಜರಂಗದಳ, ಆರೆಸ್ಸೆಸ್ನ ಒಂದು ಭಾಗ. ಯುವಕರಲ್ಲಿ ಶಕ್ತಿ ತುಂಬುವ ಕೆಲಸವನ್ನು ಬಜರಂಗದಳ ಮಾಡುತ್ತಿದೆ. ಧರ್ಮ, ದೇವಸ್ಥಾನಗಳನ್ನು ರಕ್ಷಿಸುವ ಕೆಲಸದಲ್ಲಿ ನಿರತವಾಗಿದೆ ಎಂದು ಹೇಳಿದರು.

ಈ ವೇಳೆ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಮಾತನಾಡಿ, ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಸಾಧನೆಗಳ ಪಟ್ಟಿಯನ್ನು ಜನರ ಮುಂದಿಟ್ಟು ಕರ್ನಾಟಕದ ಬಗ್ಗೆ ದೂರದೃಷ್ಟಿ ಹೊಂದಿದೆ. ಆದರೆ, ಕಾಂಗ್ರೆಸ್, ತನ್ನ ಪ್ರಣಾಳಿಕೆ ಮೂಲಕ ಕೋಮು ವಿಷ ಕಾರಿದೆ. ಹನುಮನನ್ನು ಅವಮಾನಿಸಲು ಕಾಂಗ್ರೆಸ್ ಗೆ ಎಷ್ಟು ಧೈರ್ಯ? ಎಂದು ಆಕ್ಷೇಪಿಸಿದರು.
ಚುನಾವಣೆ ವೇಳೆ ಹಿಂದೂಗಳ ಭಾವನೆಗಳ ಜೊತೆ ಕಾಂಗ್ರೆಸ್ ಆಟ ಆಡುತ್ತಿದೆ. ಸಹಿಷ್ಣುತೆಗೆ ಹಿಂದೂಗಳು ಸುಮ್ಮನಿರಬೇಕೆ? ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಆದ ಮೇಲೆ ಹಿಂದೂ ಸಮುದಾಯ ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸುತ್ತಿದೆ. ಜನರು ದೇವಸ್ಥಾನಗಳಲ್ಲಿ ಹನುಮಾನ್ ಚಾಲಿಸಾ ಪರಾಯಣ ಮಾಡುತ್ತಿದ್ದಾರೆ ಎಂದು ಹೇಳಿದರು.
ಬಜರಂಗದಳವನ್ನು ಕಾಂಗ್ರೆಸ್ ಅಧಿಕಾರವಿರುವ ರಾಜ್ಯಗಳಲ್ಲಿ ಏಕೆ ನಿಷೇಧಿಸಿಲ್ಲ ಎಂದು ಪ್ರಶ್ನಿಸಿದ ಭಾಟಿಯಾ ಅವರು, ಕಾಂಗ್ರೆಸ್, ಜನರನ್ನು ಮೋಸಗೊಳಿಸಿ, ದಾರಿತಪ್ಪಿಸುತ್ತಿದೆ. ಚುನಾವಣೆಯಲ್ಲಿ ಕೋಮು ವಿಷ ಕಾರುತ್ತಿದೆ. ಪ್ರಗತಿಪರ ಕರ್ನಾಟಕವನ್ನು ನಾಶ ಮಾಡಲು ಬಿಜೆಪಿ ಬಿಡುವುದಿಲ್ಲ. ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ರಾಜ್ಯದ ನಿಜವಾದ ಧ್ವನಿಯಾಗಿದ್ದಾರೆ.
ಮುಸ್ಲಿಮರು ಒಂದಾಗಿ ಲಿಂಗಾಯತ ಸಮುದಾಯಕ್ಕೆ ಪಾಠ ಕಲಿಸುತ್ತಾರೆ ಎಂದು ಕಾಂಗ್ರೆಸ್ನ ಶಾಸಕ ರಹೀಮ್ ಖಾನ್ ಹೇಳಿದ್ದಾರೆ. ಜನಪ್ರತಿನಿಧಿಯೊಬ್ಬರು ಧರ್ಮದ ಹೆಸರಿನಲ್ಲಿ ಜನರಿಗೆ ಮನವಿ ಮಾಡಿದ್ದಾರೆ. ಖರ್ಗೆ, ರಾಹುಲ್ ಗಾಂಧಿ ಅನುಮತಿ ಇಲ್ಲದೆ ಅವರು ಈ ಹೇಳಿಕೆ ನೀಡಿರಲು ಸಾಧ್ಯವಿಲ್ಲ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯಲು ಚುನಾವಣಾ ಈ ಆಯೋಗ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಿಷೇಧಿತ ಪಿಎಫ್ಐನವರು ಎಸ್ಡಿಪಿಐನಲ್ಲಿದ್ದಾರೆ. ಇಂತಹ ಎಸ್ಡಿಪಿಐನೊಂದಿಗೆ ಕಾಂಗ್ರೆಸ್ ಸಖ್ಯ ಹೊಂದಿದೆ. ಚುನಾವಣೆಗೆ ಬೆಂಬಲವನ್ನು ಪಡೆದಿದೆ ಎಂದು ಗೌರವ್ ಭಾಟಿಯಾ ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications