ಚಿಕ್ಕಬಳ್ಳಾಪುರ: 2000 ಮಕ್ಕಳ ಸಾನಿಧ್ಯದಲ್ಲಿ ಗಣರಾಜ್ಯೋತ್ಸವ
ಚಿಕ್ಕಬಳ್ಳಾಪುರ, ಜನವರಿ,30: ಶಿಡ್ಲಘಟ್ಟದ ಪ್ರಸಿದ್ದ ಜನಸೇವೆ ಸಂಸ್ಥೆ ಯೂನಿಟಿ ಸಿಲ್ ಸಿಲಾ ಫೌಂಡೇಶನ್ ನ ಮುಸ್ಲಿಂ ಯುವಕರು 2000 ಕ್ಕು ಹೆಚ್ಚು ಶಾಲಾ ಮತ್ತು ಅರಬ್ಬಿ ಮದರಸಾದ ಮಕ್ಕಳಿಗೆ ಕುಡಿಯುವ ನೀರು ಮತ್ತು ಬಿಸ್ಕೆಟ್ ಪ್ಯಾಕೆಟ್, ಸಾರ್ವಜನಿಕರಿಗೆ ಸಿಹಿ ನೀಡುವ ಮೂಲಕ ಬಹಳ ವಿಭಿನ್ನವಾಗಿ ಆಚರಿಸಿದರು.
'ಯೂನಿಟಿ ಸಿಲ್ ಸಿಲಾ ಫೌಂಡೇಶನ್" ಸಂಸ್ಥೆಯು ಹಲವಾರು ಬಡರೋಗಿಗಳಿಗೆ, ಗರ್ಭೀಣಿಯರಿಗೆ ಸಹಾಯ ಹಸ್ತ ನೀಡಿದೆ. ಹಲವು ರಕ್ತದಾನ ಶಿಬಿರ ಮೂಲಕ 717 ಯುನಿಟ್ ರಕ್ತ ಸಂಗ್ರಹಿಸಿ ಶಿಡ್ಲಘಟ್ಟ ತಾಲ್ಲೂಕಿನಲ್ಲಿಯೇ ಇತಿಹಾಸ ನಿರ್ಮಿಸಿದೆ. ಮಾನವೀಯತೆ, ಭಾವೈಕ್ಯತೆ ಮೆರೆದ ಸಂಸ್ಥೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ ಎಂದು ನಿವೃತ್ತ ಪ್ರಾಂಶುಪಾಲರಾದ ಮೊಹಮ್ಮದ್ ಖಾಸಿಂ ಶ್ಲಾಘಿಸಿದರು.[ಸೇನಾ ಶಕ್ತಿ ಅನಾವರಣ, ಕರ್ನಾಟಕದ ಕಾಫಿ ಕಂಪು]

ಧರ್ಮ, ಜಾತಿ, ಕುಲ ಎಂಬ ಭೇದ ಬಿಟ್ಟು ಮನುಷ್ಯತ್ವಕ್ಕಾಗಿ ಸೇವೆ ಮಾಡಿದರೆ ಮಾತ್ರವೇ ಸಂವಿಧಾನದ ಪಾಲನೆ ಮಾಡಿದಂತಾಗುತ್ತದೆ. ಜನ್ಮಕೊಟ್ಟ ದೇಶಮಾತೆಯ ಋಣ ತೀರಿಸಿದಂತಾಗುವುದು. ನಮ್ಮ ಸಂಸ್ಥೆಯಿಂದ ಈ ಕಾರ್ಯ ನಿರಂತರವಾಗಿ ಮುಂದುವರೆಯುತ್ತದೆ ಎಂದು ಯೂನಿಟಿ ಸಿಲ್ ಸಿಲಾ ಫೌಂಡೇಶನ್ ನ ಅಧ್ಯಕ್ಷರಾದ ಮೊಹಮ್ಮದ್ ಅಸದ್ ರವರು ಭರವಸೆ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಕೆ.ಎಂ ಮನೋರಮ ಧ್ವಜಾರೋಹಣ ನೆರವೇರಿಸಿದರು. ಜಾಮಿಯಾ ಮಸೀದಿ ಉಪಾಧ್ಯಕ್ಷ ಅಮೀರ್ ಜಾನ್, ಕಾರ್ಯದರ್ಶಿ ಹೈದರ್ ಅಲಿ, ಖಜಾಂಚಿ ರಫೀಖ್ ಪಾಷಾ, ಮದೀನ ಮಸೀದಿ ಅಧ್ಯಕ್ಷ ಎಚ್.ಎಸ್ ಫಯಾಜ್ ಸಾಬ್, ಕಾರ್ಯದರ್ಶಿ ನಿಸಾರ್ ಅಹ್ಮದ್, ಯೂನಿಟಿ ಸಿಲ್ ಸಿಲಾ ಫೌಂಡೇಶನ್ ಕಾರ್ಯದರ್ಶಿ ಇಂತಿಯಾಜ್ ಪಾಷ, ಸಯ್ಯದ್ ತೌಫೀಖ್, ಮೊಹಮ್ಮದ್ ಫಾರೋಖ್, ಮಾನವ ಹಕ್ಕುಗಳ ಜನಜಾಗೃತಿ ಸಮಿತಿ ತಾಲೂಕು ಅಧ್ಯಕ್ಷ ಮುನಿಕೃಷ್ಣ, ಅಪ್ಪಿ,ಶಂಶೀರ್, ಡಾ.ಸತ್ಯ ನಾರಾಯಣ ರಾವ್ ಭಾಗವಹಿಸಿದ್ದರು.[ಹೆಣ್ಣುಮಕ್ಕಳ ಕಲಾವಂತಿಕೆಗೆ ಸಾಕ್ಷಿಯಾದ ಗಣರಾಜ್ಯೋತ್ಸವ]
ಕೃಷಿ ಶೀಲ ಪ್ರಶಸ್ತಿ ಪುರಸ್ಕೃತರು ಹಿತ್ತಲಹಳ್ಳಿ ಸುರೇಶ್, ರೈತ ಸಂಘದ ತಾಲೂಕು ಅಧ್ಯಕ್ಷ ಎಸ್.ಎಂ ರವಿಪ್ರಕಾಶ್, ಸಮಾನ ಮನಸ್ಕರ ಹೋರಾಟ ಸಮಿತಿ ಮತ್ತು ರೈತ ಸಂಘದ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್, ಹಿರಿಯ ಫುಟ್ಬಾಲ್ ಆಟಗಾರರು ಮುಷೀರ್ ಮಾಮ್, ದಾರುಲ್ ಉಲುಮ್ ಸಬೀಲುಲ್ ಹುದಾ ಮದರಸಾದ ಹಿರಿಯರು ಹಾಗು ವಿಧ್ಯಾರ್ಥಿಗಳು ಮತ್ತು ಇತರೆ ಗಣ್ಯರು ಉಪಸ್ಥಿತರಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications