ಕರ್ನಾಟಕ ಲಾಕ್ಡೌನ್ ಸಡಿಲಿಕೆ 3.0: ಏನಿರುತ್ತೆ, ಏನಿರಲ್ಲ?
ಬೆಂಗಳೂರು, ಜುಲೈ 03: ಕರ್ನಾಟಕದಲ್ಲಿ ಕೊರೊನಾ ಲಾಕ್ಡೌನ್ ಸಡಿಲಿಕೆ ಮಾಡಿದ್ದು, ಯಾವುದಕ್ಕೆಲ್ಲಾ ಅನುಮತಿ ದೊರೆತಿದೆ, ಯಾವುದಕ್ಕೆ ಇಲ್ಲ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.ಈ ನಿಯಮ ಜುಲೈ 5ರಿಂದ ಜುಲೈ 19ರವರೆಗೆ ಜಾರಿಯಲ್ಲಿರಲಿದೆ.
1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
2. ಮಾಲ್ಗಳನ್ನುತೆರೆಯಲು ಅವಕಾಶ ನೀಡಲಾಗಿದೆ.
3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.

4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.
6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.
9. ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
10. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
Recommended Video
11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
13. ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
14. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.
• ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.
• ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವಿನಂತಿ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications