ಆಲಿಕಲ್ಲು ಮಳೆಗೆ ನೆಲಕಚ್ಚಿದ ಮಾವು, ಹಲಸು, ಕಲ್ಲಂಗಡಿ; ಕೈಗೆ ಬಂದ ತುತ್ತು ಬಾಯಿಗಿಲ್ಲ
ಬೆಂಗಳೂರು: ಯುಗಾದಿಗೂ ಮುನ್ನ ಪೂರ್ವ ಮುಂಗಾರು ಮಳೆ ಸುರಿದು ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದ ಜನರಲ್ಲಿ ಸಂಭ್ರಮ ಮೂಡಿಸಿದೆ. ಹಾಸನ, ಧಾರವಾಡ ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆ ದಾಖಲಾಗಿದೆ. ರಸ್ತೆ ತುಂಬೆಲ್ಲ ಆಲಿಕಲ್ಲು ಕಂಡು ಜನರ ಬೇಸಿಗೆಗೆ ತಂಪಾಯಿತು ಎಂದು ಖುಷಿಪಟ್ಟಿದ್ದಾರೆ. ಆದರೆ ಮಾವು, ಹಲಸು, ಕಲ್ಲಂಗಡಿ, ಜೋಳ ಸೇರಿ ಇನ್ನಿತರ ಕೈಗೆ ಬಂದ ಬೆಳೆಗಳಿಗೆ ಮಳೆ ಹಾನಿ ಉಂಟು ಮಾಡಿದೆ. ಇದರಿಂದ ರೈತರಿಗೆ ಅಪಾರ ನಷ್ಟವಾಗಿದೆ.
ತೋಟಗಾರಿಕೆ ಬೆಳೆ ಮಾವು, ಹಲಸು ಹಾಗೂ ಕಲ್ಲಂಗಡಿ ಸೇರಿ ಇನ್ನಿತರ ಕೃಷಿ ಬೆಳೆಗಳು ಅಕಾಲಿಕ ಮಳೆಗೆ ಹಾನಿಗೊಳಗಾಗಿವೆ. ಬೇಸಿಗೆ ವೇಳೆ ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದ ರೈತರಿಗೆ ಈ ಮಳೆ ನಿರಾಶೆ ಮೂಡಿಸಿದೆ. ಆದರೆ ದಿಢೀರ್ ಬಂದ ವರ್ಷದ ಮೊದಲ ಮಳೆಯಿಂದ ಬೆಳೆಗೆ ಹಾನಿಯಾಗಿದೆ. ಸಾಮಾನ್ಯ ಮಳೆಗೆ ಅಷ್ಟಾಗಿ ತೊಂದರೆ ಆಗದು, ಆದರೆ ಕಳೆದ ಎರಡು ದಿನಗಳಿಂದ ವಿಪರೀತ ಸುರಿದ ಆಲಿಕಲ್ಲು ಮಳೆ ಪರಿಣಾಮ ಹಾನಿ ಆಗಿದೆ.

ಹಲಸು ಮತ್ತು ಮಾವು ಋತು ಮಾರ್ಚ್ ನಿಂದ ಜೂನ್ ಅಥವಾ ಜುಲೈವರೆಗೆ ಕಂಡು ಬರುತ್ತದೆ. ಬೇಸಿಗೆ ಆರಂಭವಾಗುತ್ತಿದ್ದಂತೆ ಇಳುವರಿ ಮಾರಾಟಕ್ಕೆ ಬರುವ ಕಲ್ಲಂಗಡಿ (ಫೆಬ್ರವರಿ-ಏಪ್ರಿಲ್) ದಣಿವರಿದ ಬಾಯಿಗೆ ಸಿಹಿ ನೀಡುತ್ತದೆ. ಇನ್ನು ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾಗಿ ಬೆಳೆಯುವ ಹಿಂಗಾರು ಬೆಳೆ ಜೋಳ ಸಹ ಬೇಸಿಗೆ ಕಟಾವಿಗೆ ಬರುತ್ತದೆ. ಕಳೆದ ಎರಡು ದಿನಗಳಿಂದ ಸುರಿದ ಮಳೆಗೆ ಈ ಬೆಳೆಗಳು ಸಿಲುಕಿವೆ. ಮುಂದಿನ ಮೂರು ದಿನವು ಆಲಿಕಲ್ಲು ಮಳೆ ಎಚ್ಚರಿಕೆ ನೀಡಲಾಗಿದ್ದು, ಇದು ಹಲವು ರೈತರ ಆತಂಕಕ್ಕೆ ಕಾರಣವಾಗಿದೆ.
ಮಾವು ಬೆಳೆಗಾರರಿಗೆ ಸಂಕಷ್ಟ
ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಕೋಲಾರ, ದೇವನಹಳ್ಳಿ, ರಾಮನಗರ, ತುಮಕೂರು, ಧಾರವಾಡ ಭಾಗಗಳಲ್ಲಿ ಮಾವು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಲಸು ಸಹ ಇದೇ ಭಾಗದಲ್ಲಿ ಕಂಡು ಬರುತ್ತಿದೆ. ಮಾವು ಅದಾಗಲೇ ನಿಧಾನವಾಗಿ ಮಾರುಕಟ್ಟೆ ಪ್ರವೇಶಿಸುತ್ತಿತ್ತು. ಬಹುಪಾಲು ಮಾವು ಮರದಲ್ಲಿಯೇ ಇತ್ತು. ಕೆಲವೇ ದಿನಗಳಲ್ಲಿ ಮಾರುಕಟ್ಟೆಗೆ ತರುವ ಮೊಲದೇ ಆಲಿಕಲ್ಲು ಮಳೆಗೆ ಸಿಲುಕಿದೆ. ಆಲಿಕಲ್ಲು ಹೊಡೆತಕ್ಕೆ ಮಾವು ಉದುರಿದೆ. ಕೆಳಗೆ ಬಿದ್ದ ಮಾವಿಗೆ ಉತ್ತಮ ಬೆಲೆ ಸಿಗದು. ಇದೇ ರೀತಿ ಮಾರಕುಟ್ಟೆಗೆ ಬರಬೇಕಿದ್ದ ಹಲಸಿಗೂ ಅಕಾಲಿಕ ಮಳೆಯಿಂದ ತೊಂದರೆ ಆಗಿದ್ದು, ರೈತರು ಆರ್ಥಿಕ ನಷ್ಟ ಅನುಭವಿಸುವಂತಾಗಿದೆ.

ಕಲ್ಲಂಗಡಿ, ಜೋಳ ಬೆಳದವರಿಗೆ ನಷ್ಟ
ಹಾಸನದಲ್ಲಿ ಸುರಿದ ಮಳೆಗೆ ಬಾಳೆ, ಕಲ್ಲಂಗಡಿ ಬೆಳೆಗೆ ಹಾನಿ ಆಗಿದೆ. ಹೊಲದಲ್ಲಿದ್ದ ಕಲ್ಲಂಗಡಿ ಆಲಿಕಲ್ಲು ಬಿದ್ದ ರಭಸಕ್ಕೆ ಹಾಳಾಗಿವೆ. ಮಾರುಕಟ್ಟೆಗೆ ಹೋಗಬೇಕಿದ್ದ ಹಣ್ಣುಗಳು ತಿಪ್ಪೆ ಸೇರಿವೆ. ಮುಂಗಾರು ಮಳೆಗಾಲದಲ್ಲಿ ಉತ್ತಮ ಆದಾಯ ಕಾಣದ ಅದೆಷ್ಟೋ ರೈತರಿಗೆ ಹಿಂಗಾರು ಫಸಲು, ತೋಟಗಾರಿಕೆ ಬೆಳೆ, ಹಣ್ಣುಗಳ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಆದರೆ ಅವರ ನಿರೀಕ್ಷೆ ಹುಸಿಯಾಗಿದೆ.
ಉತ್ತರ ಕರ್ನಾಟಕದ ಹಾವೇರಿ, ರಾಯಚೂರು, ಗದಗ, ಕಲಬುರಗಿ, ಧರವಾಡ, ವಿಜಯಪುರ ದಾವಣಗೆರೆ ಭಾಗದಲ್ಲಿ ಜೋಳ ಹೆಚ್ಚಾಗಿ ಬೆಳೆಯಲಾಗುತ್ತದೆ. ಬಹುತೇಕ ಮಂದಿ ಈ ಜೋಳ ಕಟಾವು ಮಾಡಿ ಒಕ್ಕಲು ಮಾಡಿದ್ದಾರೆ. ದರ ಸಿಗದಿದ್ದಕ್ಕೆ ದಾಸ್ತಾನು ಮಾಡಿಟ್ಟುಕೊಂಡಿದ್ದಾರೆ. ಕೆಲವರು ಇನ್ನೇನು ಜೋಳ ಕಟಾವು ಮಾಡಬೇಕು ಅನ್ನುವಷ್ಟರಲ್ಲಿ ಸುರಿದ ಮಳೆಗೆ ಜೋಳದ ತೆನೆ ಹೊಲದಲ್ಲಿ ಬಿದ್ದಿದೆ. ಮಳೆ ನೀರಿಗೆ ಜೋಳ ಕಪ್ಪು ಬಣ್ಣಕ್ಕೆ ತಿರುಗಿದರೆ ನಿರೀಕ್ಷಿತ ಬೆಲೆ ಸಿಗುವುದು ಅನುಮಾನ ಇದರಿಂದ ರೈತರಿಗೆ ಲಾಭವಾಗದೇ ನಷ್ಟ ಉಂಟಾಗುತ್ತದೆ. ಇಂತಹ ಸ್ಥಿತಿಯನ್ನು ಅನೇಕ ರೈತರು ಎದರಿಸುವಂತಾಗಿದೆ.
-
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ













Click it and Unblock the Notifications