Government Employees: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕಡ್ಡಾಯ, ಅಪ್ಡೇಟ್
ಬೆಂಗಳೂರು, ಡಿಸೆಂಬರ್ 23: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಿದೆ. ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳಲ್ಲಿ ಉತ್ತಿರ್ಣರಾಗಲು ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಸರ್ಕಾರಿ ನೌಕರರು ಪರೀಕ್ಷೆ ಉತ್ತೀರ್ಣರಾಗಲು ಮತ್ತಷ್ಟು ಅವಕಾಶವನ್ನು ನೀಡಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ವಾರ್ಷಿಕ ಬಡ್ತಿಗೆ ಅರ್ಹರಾಗುವುದಿಲ್ಲ ಎಂದು ಸಹ ಸುದ್ದಿ ಹಬ್ಬಿದೆ.
ಸದ್ಯದ ಮಾಹಿತಿ ಪ್ರಕಾರ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣರಾಗಲು ಡಿಸೆಂಬರ್ 31ರ ತನಕ ಅವಕಾಶ ನೀಡಲಾಗಿದೆ. ಕೆಲವೊಂದು ಹುದ್ದೆಗಳನ್ನು ಹೊರತುಪಡಿಸಿ ಉಳಿದ ಹುದ್ದೆಗಳಲ್ಲಿರುವ ಸರ್ಕಾರಿ ನೌಕರರು ಕಡ್ಡಾಯವಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕಡ್ಡಾಯ: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012 ರೂಪಿಸಿದೆ.
ಈ ನಿಯಮಾವಳಿಗಳ ನಿಯಮ 1(3)ರಲ್ಲಿ ನಿರ್ಧಿಷ್ಟಪಡಿಸಿರುವ ಕೆಲವೊಂದು ಹುದ್ದೆಗಳನ್ನು ಹೊರತುಪಡಿಸಿ, 50 ವರ್ಷಗಳ ವಯಸ್ಸಾಗಿರುವ ಸರ್ಕಾರಿ ನೌಕರರನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸು ಮಾಡುವುದು ಕಡ್ಡಾಯವಾಗಿದೆ.
ಈ ಹಿಂದೆ ಸರ್ಕಾರ ದಿನಾಂಕ 31/12/2022ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಂಡು ಕಡ್ಡಾಯವಾಗಿ ಉತ್ತೀರ್ಣರಾಗಬೇಕು ಎಂದು ಆದೇಶಿಸಿತ್ತು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೇಡಿಕೆಯಂತೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ದಿನಾಂಕವನ್ನು ಬಳಿಕ ಮುಂದೂಡಲಾಗಿತ್ತು.
ಮತ್ತೊಮ್ಮೆ ಆದೇಶ ಹೊರಡಿಸಿದ ಸರ್ಕಾರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗದಿಪಡಿಸಿದ್ದ ಕಾಲಾವಧಿಯನ್ನು 31/12/2024 ರವರೆಗೆ ವಿಸ್ತರಿಸಿತು. ಈಗ ಡಿಸೆಂಬರ್ 31 ಸಮೀಪಿಸುತ್ತಿದೆ. ಪುನಃ ಸರ್ಕಾರ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಕಾಲಾವಧಿಯನ್ನು ವಿಸ್ತರಣೆ ಮಾಡಲಿದೆಯೇ? ಎಂಬುದು ಇನ್ನೂ ತಿಳಿದುಬಂದಿಲ್ಲ.
ಕರ್ನಾಟಕ ಸರ್ಕಾರ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದಲ್ಲಿ ವಾರ್ಷಿಕ ಬಡ್ತಿ ಗಳಿಸಲು ಅರ್ಹನಾಗತಕ್ಕದ್ದಲ್ಲ ಎಂದು ನಿಯಮಗಳಲ್ಲಿ ಸ್ಪಷ್ಟಪಡಿಸಿದೆ. ಅಲ್ಲದೇ ಈ ಹಿಂದೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೇರ್ಗಡೆ ಹೊಂದಿದ ಅಧಿಕಾರಿ/ ನೌಕರರಿಗೆ ರೂ. 5000 ಪ್ರೋತ್ಸಾಹ ಧನವನ್ನು ನೀಡಲಾಗುತ್ತಿತ್ತು.
ಈ ಹಿಂದಿನ ಆದೇಶದಲ್ಲಿ ಕರ್ನಾಟಕ ಸರ್ಕಾರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸು ಮಾಡುವ ಅವಧಿಯನ್ನು 31/12/2024 ರವರೆಗೆ ವಿಸ್ತರಿಸಿತ್ತು. ಸದ್ಯ ಎಷ್ಟು ನೌಕರರು ಇನ್ನೂ ಪರೀಕ್ಷೆ ಪಾಸು ಮಾಡಿಲ್ಲ? ಎಂಬ ಮಾಹಿತಿ ಲಭ್ಯವಿಲ್ಲ. ಸರ್ಕಾರಿ ನೌಕರರಿಗೆ ನೆರವಾಗಲು ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗುತ್ತದೆಯೇ?.
ಸರ್ಕಾರದ ಆದೇಶದ ಪ್ರಕಾರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ವಾಹನ ಚಾಲಕರು, ಪ್ರಾಥಮಿಕ ಶಿಕ್ಷಕರು, ಕಾನ್ಸ್ಟೇಬಲ್ಗಳು, ನರ್ಸ್ಗಳು, ರೇಷ್ಮೆ ಪ್ರದರ್ಶಕರು, ಅರಣ್ಯ ರಕ್ಷಕರು, ಅಬಕಾರಿ ರಕ್ಷಕರು, ಆರೋಗ್ಯ ಕಾರ್ಯಕರ್ತರು, ಅರಣ್ಯ ವೀಕ್ಷಕರು, ಬೇಲಿಫ್ಸ್ ಮತ್ತು ಪ್ರೋಸಸ್ ಸರ್ವ್ರಗಳು ಮತ್ತು ಡಿ ಗುಂಪಿನ ಹುದ್ದೆಗಳು. ಈ ಹುದ್ದೆಗಳಿಗೆ ಆಯ್ಕೆಗೊಳ್ಳುವ ಅಥವಾ ಈ ಹುದ್ದೆಗಳನ್ನು ಹೊಂದಿರುವ ವ್ಯಕ್ತಿಗಳಿಗೆ ಹಾಗೂ ಕಾಲಕಾಲಕ್ಕೆ ಸರ್ಕಾರವು ಅಧಿಸೂಚಿಸಬಹುದಾದ ಇತರ ಹುದ್ದೆಗಳಿಗೆ ಅನ್ವಯವಾಗುವುದಿಲ್ಲ.
ಸರ್ಕಾರವು ನಿರ್ದಿಷ್ಟ ಪಡಿಸಿರುವ ಹುದ್ದೆಗಳನ್ನು ಹೊರತುಪಡಿಸಿ, ಕಂಪ್ಯೂಟರ್ ಸಾಕ್ಷರ ಪರೀಕ್ಷೆಯನ್ನು ಶೇಕಡ 60 ಅಂಕಗಳಿಗೆ ಕಡಿಮೆ ಇಲ್ಲದಂತೆ ಪಡೆದು ಪಾಸು ಮಾಡದಿದ್ದಲ್ಲಿ, ಅಂತಹ ಅಭ್ಯರ್ಥಿಯನ್ನು ನೇಮಕ ಮಾಡತಕ್ಕದ್ದಲ್ಲ. ಅಂತಹ ಪರೀಕ್ಷೆಯನ್ನು ಸರ್ಕಾರ ಅಥವಾ ಅದು ಅನುಮೋದಿಸಿದ ಏಜೆನ್ಸಿಯು ನಡೆಸತಕ್ಕದ್ದು ಎಂದು ನಿಯಮ ಹೇಳಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications