ಕೆಪಿಜೆಪಿ ಸ್ಥಾಪನೆ ಮಾಡಿದ ಉಪೇಂದ್ರ : ಯಾರು, ಏನು ಹೇಳಿದರು?
ಬೆಂಗಳೂರು, ಅಕ್ಟೋಬರ್ 31 : ನಟ, ನಿರ್ದೇಶಕ ಉಪೇಂದ್ರ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವನ್ನು ಮಂಗಳವಾರ ಸ್ಥಾಪನೆ ಮಾಡಿದ್ದಾರೆ. ಉಪೇಂದ್ರ ಪಕ್ಷ ಸ್ಥಾಪನೆ ಬಗ್ಗೆ ಸಿನಿಮಾ ಮತ್ತು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ಮಂಗಳವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಉಪೇಂದ್ರ ಅವರು ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ (ಕೆಪಿಜೆಪಿ)ಕ್ಕೆ ಚಾಲನೆ ನೀಡಿದರು. ನವೆಂಬರ್ 10ರಂದು ಪಕ್ಷದ ವೆಬ್ ಸೈಟ್, ಅಪ್ಲಿಕೇಶನ್ ಬಿಡುಗಡೆಯಾಗಲಿದ್ದು, ಎಲ್ಲಾ ಯೋಜನೆಗಳು ಅದರಲ್ಲಿ ಸಿಗಲಿವೆ.
'ರಾಜಕಾರಣ ಮಾಡಿದರೆ ಶತ್ರುಗಳು ಹುಟ್ಟುಕೊಳ್ಳುತ್ತಾರೆ. ನಮ್ಮದು ಪ್ರಜಾಕೀಯ, ಎಲ್ಲರೂ ಒಟ್ಟಿಗೆ ಮುಂದುವರಿಯುವುದು. ಪಾರದರ್ಶಕ ಆಡಳಿತಕ್ಕೆ ಮುಂದಾಗುವುದೇ ಪಕ್ಷದ ಸಿದ್ಧಾಂತ' ಎಂದು ಉಪೇಂದ್ರ ಹೇಳಿದರು.
ವಿವಿಧ ರಾಜಕೀಯ ಪಕ್ಷದ ಮುಖಂಡರು ಉಪೇಂದ್ರ ಅವರು ಪಕ್ಷ ಸ್ಥಾಪನೆ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷದ ಬಗ್ಗೆ ಪ್ರತಿಕ್ರಿಯೆ ನೀಡಲು ಇದು ಸರಿಯಾದ ಸಮಯವಲ್ಲ ಎಂದು ಹೇಳಿದ್ದಾರೆ. ಯಾರು, ಏನು ಹೇಳಿದರು ಚಿತ್ರಗಳಲ್ಲಿ ನೋಡಿ...

ಪರಮೇಶ್ವರ ಹೇಳಿದ್ದೇನು?
'ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಎಷ್ಟೊಂದು ಪಕ್ಷಗಳು ಆರಂಭ ಆಗುತ್ತಿವೆ. ಉಪೇಂದ್ರ ಅವರ ಪಕ್ಷದ ಬಗ್ಗೆ ಹೆಚ್ಚು ಮಾಹಿತಿ ಇಲ್ಲ. ಆ ಪಕ್ಷದ ಅಧ್ಯಕ್ಷರು ಉಪೇಂದ್ರ ಅಂತ ಗೊತ್ತು. ಸದಸ್ಯರು ಯಾರು?' ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಪ್ರಶ್ನೆ ಮಾಡಿದರು.

'ದೇಶ ಮೊದಲು ಎಂಬುವುದು ಗುರಿಯಾಗಲಿ'
ಒನ್ ಇಂಡಿಯಾ ಕನ್ನಡದ ಜೊತೆ ದೂರವಾಣಿಯಲ್ಲಿ ಮಾತನಾಡಿದ ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಟಿ.ರವಿ ಅವರು, 'ನಮ್ಮ ಸಂವಿಧಾನ ವ್ಯವಸ್ಥೆಯಲ್ಲಿ ಪಕ್ಷ ಕಟ್ಟಲು ಸ್ವತಂತ್ರವಿದೆ. ಕಲಾವಿದರಾಗಿ ಉಪೇಂದ್ರರನ್ನು ನಾವು ಗೌರವಿಸಿದ್ದೇವೆ. ಪಕ್ಷದ ಬಗ್ಗೆ ಪ್ರತಿಕ್ರಿಯೆ ನೀಡಲು ಸಮಯ ಇನ್ನೂ ಪಕ್ವವಾಗಿಲ್ಲ. ಟೀಕೆ ಮಾಡಲು ಅಥವ ಹೊಗಳಲು ಏನೂ ಮಾಡಿಲ್ಲ. ಬಿಜೆಪಿ ದೇಶ ಮೊದಲು ಎಂಬ ತತ್ವದಡಿ ಕೆಲಸ ಮಾಡುತ್ತದೆ. ಉಪೇಂದ್ರ ಅವರ ಪಕ್ಷವೂ ಅದೇ ಉದ್ದೇಶದಿಂದ ಕೆಲಸ ಮಾಡಲಿ' ಎಂದರು.

ರಾಜಕಾರಣಕ್ಕೆ ಅಪ್ರಸ್ತುತ
'ಕರ್ನಾಟಕದ ರಾಜಕಾರಣಕ್ಕೆ ಉಪೇಂದ್ರ ಅವರು ಅಪ್ರಸ್ತುತ. ಪಕ್ಷ ಸ್ಥಾಪನೆ ಬಗ್ಗೆ ಪ್ರತಿಕ್ರಿಯೆ ನೀಡಲು ಇದು ಸಕಾಲವಲ್ಲ' ಎಂದು ಜೆಡಿಎಸ್ ವಕ್ತಾರ, ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ಒನ್ ಇಂಡಿಯಾಕ್ಕೆ ಪ್ರತಿಕ್ರಿಯೆ ನೀಡಿದರು.

‘224 ಕ್ಷೇತ್ರದಲ್ಲಿ ಸ್ಪರ್ಧಿಸುವ ಚಿಂತನೆ ಇದೆ'
ಪಕ್ಷ ಸ್ಥಾಪನೆ ಮಾಡಿದ ಉಪೇಂದ್ರ ಅವರು '224 ಕ್ಷೇತ್ರದಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಆಲೋಚನೆ ಇದೆ. ಈಗಾಗಲೇ ನೂರಾರು ಅಭ್ಯರ್ಥಿಗಳು ಸಂಪರ್ಕದಲ್ಲಿದ್ದಾರೆ. ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು? ಎಂಬುದು ಇನ್ನೂ ಖಚಿತವಾಗಿಲ್ಲ' ಎಂದು ಹೇಳಿದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ












Click it and Unblock the Notifications