ರಾಜ್ಯದ ಎಲ್ಲಾ ಲೋಕಸಭೆ ಕ್ಷೇತ್ರದಿಂದ ಉಪೇಂದ್ರ ಪಕ್ಷ ಸ್ಪರ್ಧೆ, ಅಭ್ಯರ್ಥಿ ಆಯ್ಕೆ ಡಿಫರೆಂಟ್!
ಬೆಂಗಳೂರು, ಜನವರಿ 26 : ಉಪೇಂದ್ರ ಸ್ಥಾಪಿಸಿರುವ ಉತ್ತಮ ಪ್ರಜಾಕೀಯ ಪಕ್ಷವು ರಾಜ್ಯದ ಎಲ್ಲಾ 28 ಕ್ಷೇತ್ರಗಳಿಂದಲೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದೆ. ಈ ಬಗ್ಗೆ ಉಪೇಂದ್ರ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಉತ್ತಮ ಪ್ರಜಾಕೀಯ ಪಕ್ಷದಿಂದ ಸುದ್ದಿಗೋಷ್ಠಿ ಕರೆದಿದ್ದ ಅವರು, ಆಟೋ ಚಿಹ್ನೆಯ ಉತ್ತಮ ಪ್ರಜಾಕೀಯಕ ಪಕ್ಷವು ರಾಜ್ಯದ ಎಲ್ಲ ಲೋಕಸಭೆ ಕ್ಷೇತ್ರಗಳಿಂದ ಸ್ಪರ್ಧೆಗಿಳಿಯಲಿದ್ದು, ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದೆ ಎಂದರು. ಅಭ್ಯರ್ಥಿ ಆಯ್ಕೆಗೆ ಮಾತ್ರ ಭಿನ್ನ ಮಾನದಂಡಗಳನ್ನು ಉಪೇಂದ್ರ ಅನುಸರಿಸುತ್ತಿದ್ದಾರೆ.
ಅಭ್ಯರ್ಥಿಗಳು ತಮ್ಮ ಕ್ಷೇತ್ರದಲ್ಲಿ ತಾವು ಹೇಗೆ ಜನಪರವಾಗಿ ಕೆಲಸ ಮಾಡುತ್ತೇವೆ ಎಂಬುದನ್ನು ಉಪೇಂದ್ರ ನೇತೃತ್ವದ ಸಮಿತಿಗೆ ವರದಿ ಸಲ್ಲಿಸಬೇಕು. ಅದರಲ್ಲಿ ಯಾವ ಕೆಲಸ ಎಷ್ಟು ವರ್ಷದಲ್ಲಿ ಮುಗಿಸುತ್ತೇವೆ, ಕ್ಷೇತ್ರದ ಜನರಿಗೆ ಏನು ಬೇಕಿದೆ. ಜನರೊಂದಿಗೆ ಬೆರೆತಾಗ ಅವರು ಹೇಳಿಕೊಂಡ ಸಮಸ್ಯೆಗಳು ಯಾವುವು? ಅವರು ಅವುಗಳನ್ನು ಹೇಗೆ ಬಗೆಹರಿಸುತ್ತೀರಿ? ಎಂಬಿತ್ಯಾದಿ ವಿವರಗಳನ್ನು ಉತ್ತಮ ಪ್ರಜಾಕೀಯ ಪಕ್ಷಕ್ಕೆ ಸಲ್ಲಿಸಬೇಕು.

ಉಪೇಂದ್ರ ನೇತೃತ್ವದ ಸಮಿತಿಯು ಅಭ್ಯರ್ಥಿಯ ವರದಿಯನ್ನು ನೋಡಿ ಉತ್ತಮವಾದುದನ್ನು ಮತ್ತೆ ಜನರ ಮುಂದೆ ಆಯ್ಕೆಗೆ ಇಡುತ್ತಾರೆ. ಯಾವ ಅಭ್ಯರ್ಥಿಯನ್ನು ಜನರು ಆಯ್ಕೆ ಮಾಡುತ್ತಾರೋ ಅವರಿಗೆ ಪಕ್ಷದ ಟಿಕೆಟ್ ನೀಡಲಾಗುತ್ತದೆ. ಇದು ಉಪೇಂದ್ರ ಅವರು ಪಕ್ಷದ ಅಭ್ಯರ್ಥಿಗಳನ್ನು ಆರಿಸುವ ವಿಧಾನ.
ಪ್ರಜಾಕೀಯದ ಸಾಮಾಜಿಕ ಜಾಲತಾಣದಲ್ಲಿ ಅಭ್ಯರ್ಥಿಗಳು ಟಿಕೆಟ್ಗಾಗಿ ಅರ್ಜಿ ಸಲ್ಲಿಸಬೇಕಾದ ಬಗ್ಗೆ ನಿಯಮಗಳು, ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಉಪೇಂದ್ರ ಅವರು ಹೇಳಿದ್ದಾರೆ.
ತಮ್ಮ ಪಕ್ಷ ಕ್ಯಾಶ್ಲೆಸ್ ಪಕ್ಷವಾಗಿದ್ದು, ಯಾವುದೇ ದೇಣಿಗೆಗಳನ್ನು ಸಹ ಸ್ವೀಕರಿಸುವುದಿಲ್ಲ. ಪಕ್ಷ ಸಂಘಟನೆಗೆ ಬರುವ ಸಣ್ಣ ಖರ್ಚುಗಳನ್ನು ತಾವೇ ಸ್ವಂತ ಹಣದಿಂದ ಖರ್ಚು ಮಾಡುತ್ತೇವೆ ಎಂದು ಉಪೇಂದ್ರ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications