ಉಪೇಂದ್ರ ಹೊಸ ಪಕ್ಷಕ್ಕೆ ಸಿಕ್ತು ಕೇಂದ್ರ ಚುನಾವಣಾ ಆಯೋಗದ ಗ್ರೀನ್ ಸಿಗ್ನಲ್
ಬೆಂಗಳೂರು, ಮೇ 10: ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೇನೂ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿರುವಾಗ ನಟ ಉಪೇಂದ್ರ ಅವರ ಹೊಸ ಪಕ್ಷ 'ಉತ್ತಮ ಪ್ರಜಾಕೀಯ ಪಕ್ಷ'ಕ್ಕೆ ಕೇಂದ್ರ ಚುನಾವಣಾ ಆಯೋಗ ಗ್ರೀನ್ ಸಿಗ್ನಲ್ ನೀಡಿದೆ.
ಈ ಮುಂಚೆ ಉಪೇಂದ್ರ ಅವರೇ ಸ್ಥಾಪಿಸಿದ್ದ ಕೆಪಿಜೆಪಿ (ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ)ದಿಂದ ಉಪೇಂದ್ರ ಅವರು ಹೊರ ಬಂದ ನಂತರ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದರು ಅಂತೆಯೇ ಇಂದು ಅವರ ಹೊಸ ಪಕ್ಷ 'ಉತ್ತಮ ಪ್ರಜಾಕೀಯ ಪಕ್ಷ' ಕೇಂದ್ರ ಚುನಾವಣಾ ಆಯೋಗಕ್ಕೆ ನೊಂದಾವಣಿ ಆಗಿದೆ.
ಎಲ್ಲರಿಗೂ ಸಿಹಿ ಸುದ್ದಿ ! ನಮ್ಮ “ ಉತ್ತಮ ಪ್ರಜಾಕೀಯ ಪಕ್ಷ “ ಭಾರತದ ಚುನಾವಣಾ ಆಯೋಗದಲ್ಲಿ ನೋಂದಣಿ ಯಾಗಿದೆ
— Upendra (@nimmaupendra) May 10, 2018
ನಾವೆಲ್ಲರೂ ಸೇರಿ ಈಗಿಂದಲೇ ಈ ರಾಜಕೀಯ ವ್ಯವಸ್ಥೆಯನ್ನು ಕಿತ್ತೊಗೆದು “ ಪ್ರಜಾಕೀಯ “ ಸ್ಥಾಪಿಸಲು ಮುಂದಾಗೋಣ. ನಿಮ್ಮ ಉಪ್ಪಿ. pic.twitter.com/b7Uktek0QJ
ಈ ಬಗ್ಗೆ ಟ್ವಿಟ್ಟರ್ನಲ್ಲಿ ಪೋಸ್ಟ್ ಹಾಕಿರುವ ಉಪೇಂದ್ರ ಅವರು, ನಮ್ಮ 'ಉತ್ತಮ ಪ್ರಜಾಕೀಯ ಪಕ್ಷ ಚುನಾವಣಾ ಆಯೋಗದಲ್ಲಿ ನೊಂದಾವಣಿ ಆಗಿದೆ. ನಾವೆಲ್ಲರೂ ಸೇರಿ ಈಗಿಂದಲೇ ಈ ರಾಜಕೀಯ ವ್ಯವಸ್ಥೆಯನ್ನು ಕಿತ್ತೊಗೆದು " ಪ್ರಜಾಕೀಯ " ಸ್ಥಾಪಿಸಲು ಮುಂದಾಗೋಣ' ಎಂದಿದ್ದಾರೆ.

ಚುನಾವಣೆ ನಂತರ ಸಕ್ರಿಯ ರಾಜಕಾರಣಕ್ಕೆ
ಕರ್ನಾಟಕದ ಚುನಾವಣೆ ಇನ್ನು ವಾರದಲ್ಲಿ ಮುಗಿಯುವ ಹಂತದಲ್ಲಿರುವ ಕಾರಣ ಪ್ರಜಾಕೀಯ ಈ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಭಾಗಿಯಾಗುವಂತಿಲ್ಲ. ಆದರೆ ಮುಂದಿನ ದಿನಗಳಲ್ಲಿ ಉಪೇಂದ್ರ ಅವರು ತಮ್ಮ ಹೊಸ ಪಕ್ಷದ ಮೂಲಕ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಲಿದ್ದಾರೆ.

ಕೆಪಿಜೆಪಿ ಪದಾಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯ
ಈ ಮುಂಚೆ ಸ್ಥಾಪಿಸಿದ್ದ ಕೆಪಿಜೆಪಿಯ ಸಹ ಸಂಸ್ಥಾಪಕ ಮಹೇಶ್ ಗೌಡ ಹಾಗೂ ಇತರ ಸದಸ್ಯರಿಗೂ ಉಪೇಂದ್ರ ಅವರಿಗೂ ಟಿಕೆಟ್ ಹಂಚಿಕೆ ವಿಷಯದಲ್ಲಿ ಭಿನ್ನಾಭಿಪ್ರಾಯ ಉಂಟಾದ ಕಾರಣ ಉಪೇಂದ್ರ ಅವರು ಕೆಪಿಜೆಪಿಯಿಂದ ಹೊರಬಂದಿದ್ದರು. ಅಂದೇ ಹೊಸ ಪಕ್ಷ ಸ್ಥಾಪಿಸುವುದಾಗಿ ಉಪೇಂದ್ರ ಅವರು ಘೋಷಿಸಿದ್ದರು.

ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧೆ ಸಾಧ್ಯತೆ
ಹೇಳಿದಂತೆ ಉಪೇಂದ್ರ ಅವರು ಹೊಸ ಪಕ್ಷ ಸ್ಥಾಪನೆ ಮಾಡಿದ್ದಾರೆ ಆದರೆ ಈ ವಿಧಾನಸಭೆ ಚುನಾವಣೆಯಿಂದ ಅವರು ದೂರವೇ ಉಳಿಯಬೇಕಿದೆ ಆದರೆ ಮೂಲಗಳ ಪ್ರಕಾರ ಉಪೇಂದ್ರ ಅವರ ಹೊಸ ಪಕ್ಷದ ಸದಸ್ಯರು ಮುಂಬರುವ ಕಾರ್ಪೊರೇಟ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಶ್ರೀರಾಮುಲು ಬಿಜೆಪಿಗೆ ಕರೆದಿದ್ದರು
ಕೆಪಿಜೆಪಿ ಪಕ್ಷವನ್ನು ತೊರೆದಿದ್ದ ಉಪೇಂದ್ರ ಅವರನ್ನು ಬಿಜೆಪಿ ಸಂಸದ ಶ್ರೀರಾಮುಲು ಅವರು ತಮ್ಮ ಪಕ್ಷಕ್ಕೆ ಆಹ್ವಾನಿಸಿದ್ದರು. ಜೊತೆಗೆ ಇನ್ನಿತರ ಪಕ್ಷಗಳೂ ಉಪೇಂದ್ರ ಅವರನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಿದ್ದವು ಆದರೆ ಉಪೇಂದ್ರ ಅವರು ತಮ್ಮದೇ ಪಕ್ಷವನ್ನು ಕಟ್ಟುವ ಆಸೆಯಿಂದಾಗಿ ಬೇರೆ ಪಕ್ಷಗಳತ್ತ ಮುಖ ಮಾಡಿರಲಿಲ್ಲ.

ಕೆಪಿಜೆಪಿ ಕಿತ್ತಾಟ ಏಕೆ?
ಈ ಹಿಂದೆ ಉಪೇಂದ್ರ ಅವರು ನೇತೃತ್ವ ವಹಿಸಿದ್ದ ಉಪೇಂದ್ರ ಅವರ ಕೆಪಿಜೆಪಿ ಪಕ್ಷದಲ್ಲಿ ಸಹ ಸಂಸ್ಥಾಪಕ ಮಹೇಶ್ ಗೌಡ ಸೇರಿದಂತೆ ಇನ್ನಿತರ ಪದಾಧಿಕಾರಿಗಳ ಜೊತೆ ಉಪೇಂದ್ರ ಭಿನ್ನಾಭಿಪ್ರಾಯ ಹೊಂದಿದ್ದರು. ವಿಶೇಷವಾಗಿ ಟಿಕೆಟ್ ವಿತರಣೆ ಕುರಿತಂತೆ ಉಪೇಂದ್ರ ಅವರು ತೀವ್ರ ಅಸಮಾಧಾನಗೊಂಡಿದ್ದರು. ಟಿಕೆಟ್ ಅನ್ನು ಸಂದರ್ಶನದ ಆಧಾರದಲ್ಲಿಯೇ ನೀಡಬೇಕು ಎಂದು ಉಪೇಂದ್ರ ಪಟ್ಟು ಹಿಡಿದಿದ್ದರು ಆದರೆ ಇತರ ಪದಾಧಿಕಾರಿಗಳು ಇದಕ್ಕೆ ವಿರುದ್ಧವಾಗಿದ್ದರು ಹಾಗಾಗಿ ಭಿನ್ನಾಭಿಪ್ರಾಯ ಹೆಚ್ಚಾಗಿ ಉಪೇಂದ್ರ ಕೆಪಿಜೆಪಿಯಿಂದ ಹೊರ ಬಂದಿದ್ದರು.

ಸರ್ವಾಧಿಕಾರಿ ವರ್ತನೆ
ಉಪೇಂದ್ರ ಅವರು ಎಲ್ಲಾ ಸೈನಿಂಗ್ ಅಥಾರಿಟಿ ನನಗೊಬ್ಬನಿಗೇ ಕೊಡಬೇಕು ಎಂದು ಒತ್ತಾಯ ಮಾಡಿದ್ದರು. ಅಲ್ಲದೆ ಅವರು ಕಾಂಗ್ರೆಸ್ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದರು ಎಂದು ಕೆಪಿಜೆಪಿ ಉಪಾಧ್ಯಕ್ಷ ಶಿವಕುಮಾರ್ ಆರೋಪ ಮಾಡಿದ್ದರು. ಆದರೆ ಉಪೇಂದ್ರ ಅವರು ಇವನ್ನು ತಳ್ಳಿ ಹಾಕಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications