'ರಾಘವೇಶ್ವರ ಶ್ರೀಗಳ ಅತ್ಯಾಚಾರ ಆರೋಪ ಸತ್ಯಕ್ಕೆ ದೂರ'
ವೇಣೂರು, ಅಕ್ಟೋಬರ್, 26 : ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿಗಳ ವಿರುದ್ಧ ಮಾಡುತ್ತಿರುವ ಅತ್ಯಾಚಾರ ಆರೋಪಗಳು ಸತ್ಯಕ್ಕೆ ದೂರವಾಗಿದೆ. ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಉಪ್ಪಿನಂಗಡಿ ಹವ್ಯಕ ಮಂಡಲ ಅಧ್ಯಕ್ಷ ಬಾಲ್ಯಶಂಕರಭಟ್ ಮತ್ತು ಕಾರ್ಯದರ್ಶಿ ಅಶೋಕ್ ಕೆದ್ಲ ಅಕ್ಟೋಬರ್ 25ರಂದು ನಡೆದ ಕಾರ್ಯಕ್ರಮದಲ್ಲಿ ಕಿಡಿಕಾರಿದ್ದಾರೆ.
ಶ್ರೀಗಳ ಪರವಾಗಿದ್ದ ಶಿಷ್ಯ ಭಕ್ತಸಮೂಹದವರಿಗೆ ಸುಳ್ಳನ್ನೇ ಸತ್ಯವೆಂದು ಬಿಂಬಿಸುವ ಪ್ರಯತ್ನವನ್ನು ವ್ಯವಸ್ಥಿತವಾಗಿ ಮಾಡಲಾಗುತ್ತಿದೆ. ಶ್ರೀಗಳ ಪರವಾಗಿ ಸಿಐಡಿ ತನಿಖಾ ವೇಳೆ ಸಾಕ್ಷಿ ನುಡಿದ ವ್ಯಕ್ತಿಗಳು ಈಗ ಶ್ರೀಗಳ ವಿರುದ್ಧ ತಿರುಗಿ ಬಿದ್ದಿರುವುದು ವಿಚಿತ್ರವಾಗಿದೆ. ಮಠದ ಮುಖವನ್ನೇ ನೋಡದ ಮಂದಿ ತಾವು ಹವ್ಯಕ ಸಮಾಜದ ಮುಖಂಡರೆಂದು ಮಾಧ್ಯಮಗಳ ಮುಂದೆ ಹೇಳಿಕೊಳ್ಳುತ್ತಾರೆ ರಾಘವೇಶ್ವರ ಸ್ವಾಮೀಜಿಗಳ ಪರ ಮಾತನಾಡಿದರು.['169 ಬಾರಿ ರೇಪ್ ಆಗುವವರೆಗೆ ಯಾರಾದ್ರೂ ಸುಮ್ಮನಿರ್ತಾರಾ?']

'ಮಠದ ಆಡಳಿತ ವ್ಯವಸ್ಥೆಯ ಬಗ್ಗೆ, ಶ್ರೀಗಳ ಬಗ್ಗೆ ಅವಹೇಳನಕಾರೀ ಹೇಳಿಕೆ ನೀಡುತ್ತಿರುವುದು, ಫೇಸ್ ಬುಕ್, ವಾಟ್ಸ್ ಆಪ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ತೀರಾ ಕೀಳು ಅಭಿರುಚಿಯ ಬರಹಗಳನ್ನು ಪ್ರಕಟಿಸುತ್ತಿರುವುದು, ವಿಷಾದನೀಯ.
ಉಪ್ಪಿನಂಗಡಿ ಹವ್ಯಕ ಮಂಡಲದಲ್ಲಿ ಹನ್ನೆರಡು ಹವ್ಯಕ ವಲಯಗಳಿದ್ದು, ಸುಮಾರು 3150ರಷ್ಟು ಹವ್ಯಕ ಮನೆಗಳು ಇರುತ್ತದೆ. 134 ಗುರುಕಾರರು, 600ಮಂದಿ ಶ್ರೀ ಕಾರ್ಯಕರ್ತರೂ ಶ್ರೀ ಮಠಕ್ಕೆ ನಿಷ್ಠರಾಗಿದ್ದು, ಸಂಘಟನೆಯಲ್ಲಿದ್ದುಕೊಂಡು ಸೇವೆ ಸಲ್ಲಿಸುತ್ತಿದ್ದಾರೆ' ಎಂದು ಹವ್ಯಕ ಕಾರ್ಯಕರ್ತರು ಹರಿಹಾಯ್ದಿದ್ದಾರೆ.[ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ರಾಮಚಂದ್ರಾಪುರ ಮಠದ 12 ಪ್ರಶ್ನೆಗಳು]
ಬೆರಳೆಣಿಕೆಯ ಮಂದಿ ತಾವು ಹವ್ಯಕ ಮುಖಂಡರೆಂಬ ಸುಳ್ಳು ಹೇಳಿಕೆ ನೀಡುತ್ತಾ ಸಮಾಜವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಶ್ರೀಗಳಿಗೆ, ಶ್ರೀಮಠದ ವಿರುದ್ಧ ಹೇಳಿಕೆ ನೀಡುವ ಇಂತಹವರ ಕೃತ್ಯವನ್ನು ಉಪ್ಪಿನಂಗಡಿ ಹವ್ಯಕ ಮಂಡಲವು ತೀವ್ರವಾಗಿ ಖಂಡಿಸುತ್ತದೆ. ಶ್ರೀಗಳ ವಿರುದ್ಧ ಬರುವ ಯಾವುದೇ ಸುಳ್ಳು ಹೇಳಿಕೆಗಳನ್ನು ನಂಬಬಾರದೆಂದು ಹವ್ಯಕ ಸಂಘದ ಕಾರ್ಯದರ್ಶಿಗಳು ಸಲಹೆ ನೀಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications