ವಿಜಯಾನಂದ ಕಾಶಪ್ಪನವರ್ ಅವಿವೇಕಿ: ರಮೇಶ್ಕುಮಾರ್
ಬೆಂಗಳೂರು, ಜು.4: ರೌಡಿ ಶೀಟರ್ ಸೋಮೇಗೌಡ ಜತೆ ಸೇರಿ ಹುನಗುಂದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ಪ್ರಕರಣ ಶುಕ್ರವಾರ ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪವನ್ನೇ ನುಂಗಿ ಹಾಕಿತು.
ಘಟನೆ ಬಗ್ಗೆ ಆಡಳಿತ ಪಕ್ಷದ ಸದಸ್ಯ ರಮೇಶ್ ಕುಮಾರ್ ಮಾತನಾಡಿ " ವಿಜಯಾನಂದ ಕಾಶಪ್ಪನವರ್ ಬುದ್ಧಿವಂತಿಕೆ ಪ್ರದರ್ಶನ ಮಾಡಬೇಕಿತ್ತು. ಸಿಕ್ಕಿಹಾಕಿಕೊಳ್ಳಬಾರದಿತ್ತು, ದಡ್ಡ, ಅವಿವೇಕಿ, ನುಣುಚಿಕೊಳ್ಳುವ ವಿಧಾನ ಗೊತ್ತಿಲ್ಲ" ಎಂದು ತಮ್ಮ ಪಕ್ಷದ ಸದಸ್ಯರನ್ನು ಹೀಯಾಳಿಸಿದಾಗ ಸಭೆಯಲ್ಲಿ ನಗೆಯ ಅಲೆ ತೇಲಾಡಿತು.
ಎರಡನೇ ದಿನವಾದ ಇಂದು ಕೂಡ ವಿಧಾನಸಭೆಯಲ್ಲಿ ಹಲ್ಲೆ ಪ್ರಕರಣ ಪ್ರತಿಧ್ವನಿಸಿ ಆಡಳಿತ ಮತ್ತು ವಿರೋಧಿ ಸದಸ್ಯರ ನಡುವೆ ಮಾತಿನ ಚಕಮಕಿ, ಆರೋಪ ಪ್ರತ್ಯಾರೋಪಕ್ಕೆ ಸಾಕ್ಷಿಯಾಗಿ ಬಿಜೆಪಿ ಸದಸ್ಯರು ಎರಡು ಬಾರಿ ಧರಣಿ ನಡೆಸಿ ಸೋಮವಾರಕ್ಕೆ ಕಲಾಪ ಮುಂದೂಡಲಾಯಿತು.
ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮಾತನಾಡಿ, ಇದೊಂದು ತಲೆ ತಗ್ಗಿಸುವ ವಿಚಾರವಾಗಿದೆ. ಶಾಸಕರು ತಪ್ಪು ಮಾಡಿಲ್ಲ ಎನ್ನುವುದಾದರೆ ಶಾಸಕರು ಅವಿತಿರುವುದು ಏಕೆ ಬಹಿರಂಗವಾಗಿ ಓಡಾಡಬಹುದಿತ್ತಲ್ಲ ಎಂದು ಅವರು ಸರ್ಕಾರವನ್ನು ಪ್ರಶ್ನಿಸಿದರು.
ನಮಗೆ ರಕ್ಷಣೆ ನೀಡುವ ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವುದು ಸರಿಯಲ್ಲ. ಇದೆಲ್ಲವನ್ನೂ ನೋಡಿದರೆ ರಾಜ್ಯದಲ್ಲಿ ಪೊಲೀಸ್ ಇಲಾಖೆಯೇ ಬೇಡ ಎನಿಸುತ್ತದೆ. ಸರ್ಕಾರ ನಿನ್ನೆ ಸದನದಲ್ಲಿ ಉತ್ತರ ನೀಡುವುದಾಗಿ ಹೇಳಿಕೆ ನೀಡಿತ್ತು. ಶಾಸಕರು ಬಂಧನದ ಭೀತಿ ಎದುರಿಸುತ್ತಿದ್ದಾರೆ ಎಂದು ಪತ್ರಿಕೆಗಳಲ್ಲಿ ಬಂದಿದೆ. ಶಾಸಕರು ಕದ್ದುಮುಚ್ಚಿ ಆಟವಾಡುತ್ತಿರುವುದನ್ನು ನೋಡಿದರೆ ಅವರು ತಪ್ಪು ಮಾಡಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ. ಸರ್ಕಾರ ಈ ಪ್ರಕರಣದಲ್ಲಿ ಉತ್ತರ ಕೊಡಲು ಏನು ಸಮಸ್ಯೆ ಇದೆ. ಇದೆಲ್ಲವನ್ನೂ ನೋಡಿದರೆ ಸರ್ಕಾರ ಏನೋ ಮುಚ್ಚಿಡಲು ಪ್ರಯತ್ನ ಮಾಡುತ್ತಿದೆ ಎಂದು ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.[ಪೊಲೀಸರ ಮೇಲೆ ಹಲ್ಲೆ: ಶಾಸಕ ಕಾಶಪ್ಪನವರ್ ಪರಾರಿ]
ಆಡಳಿತ ಪಕ್ಷದ ಸದಸ್ಯರ ಗಲಾಟೆ ಜೋರಾದಾಗ ಕಾಂಗ್ರೆಸ್ ಸದಸ್ಯರು ನೀವು ಆಡಳಿತದಲ್ಲಿದ್ದಾಗ ಬ್ಲೂ ಫಿಲಂ ಪ್ರಕರಣ ಏನಾಯಿತು? ಶಾಸಕರ ಮೇಲೆ ಯಾವ ಕ್ರಮ ಕೈಗೊಂಡಿದ್ದಿರಿ ಎಂದಾಗ ಪ್ರತಿಪಕ್ಷ ಮತ್ತು ಆಡಳಿತ ಸದಸ್ಯರ ಮೇಲೆ ಮಾತಿನ ಚಕಮಕಿ ನಡೆದು ಸಭೆಯಲ್ಲಿ ಯಾರು ಏನು ಹೇಳುತ್ತಾರೆ ಎನ್ನುವುದು ಕೇಳಿಸದಂತಹ ಪರಿಸ್ಥಿತಿ ನಿರ್ಮಾಣವಾಯಿತು.
ವಿಪಕ್ಷಗಳ ಆರೋಪ ರಾಜಕೀಯ ಪ್ರೇರಿತ:
ವಿಪಕ್ಷಗಳಿಗೆ ಉತ್ತರ ನೀಡಲು ಮೂರು ದಿನಗಳ ಕಾಲ ಅವಕಾಶವಿದೆ. ಯಾವುದೇ ವಿಚಾರ ಇಲ್ಲದೇ ವಿಪಕ್ಷ ಸದಸ್ಯರು ಗದ್ದಲ ಎಬ್ಬಿಸುತ್ತಿದ್ದಾರೆ. ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗುತ್ತದೆ. ತನಿಖೆ ಪ್ರಗತಿಯಲ್ಲಿದೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ವಿಜಯಾನಂದ ಕಾಶಪ್ಪನವರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿಯಾದ ಉತ್ತರ ನೀಡಲು ವಿಫಲವಾದ ಸರ್ಕಾರದ ವಿರುದ್ಧ ವಿಧಾನ ಪರಿಷತ್ನಲ್ಲಿ ಉತ್ತರ ಪ್ರತಿಯನ್ನು ವಿರೋಧ ಪಕ್ಷದ ನಾಯಕ ಈಶ್ವರಪ್ಪ ಹಾರಿದು ಹಾಕಿ ಪ್ರತಿಭಟಿಸಿದರು.
ಸ್ಕೈಬಾರ್ಗೆ ಶೋಕಾಸ್ ನೋಟಿಸ್:
ಶಾಸಕ ವಿಜಯಾನಂದ ಕಾಶನಪ್ಪವರ್ ಹಾಗೂ ಬೆಂಬಲಿಗರಿಗೆ ಅವಧಿ ಮೀರಿ ಮದ್ಯ ಸರಬರಾಜು ಮಾಡಿರುವುದು ಹಾಗೂ ತಡ ರಾತ್ರಿವರೆಗೆ ಬಾರ್ ತೆರೆದಿದ್ದುದನ್ನು ಪ್ರಶ್ನಿಸಿ ಅಬಕಾರಿ ಇಲಾಖೆ ಯುಬಿ ಸಿಟಿಯ ಸ್ಕೈಬಾರ್ನವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ನೋಟಿಸ್ಗೆ ಉತ್ತರಿಸಲು ಏಳು ದಿನಗಳ ಗಡುವು ನೀಡಿದೆ. ಅಷ್ಟರೊಳಗೆ ಉತ್ತರ ನೀಡದಿದ್ದರೆ ಸ್ಕೈಬಾರ್ ಲೈಸನ್ಸ್ ರದ್ದು ಪಡಿಸುವುದಾಗಿ ನೋಟಿಸ್ನಲ್ಲಿ ಎಚ್ಚರಿಕೆ ನೀಡಲಾಗಿದೆ.
ಆರೋಪಿಗಳ ಬಂಧನಕ್ಕೆ ಪೊಲೀಸರ ಶೋಧ:
ಪ್ರಕರಣದ ಮೊದಲ ಆರೋಪಿ ಸೋಮಶೇಖರ ಗೌಡ, ಶಾಸಕ ವಿಜಯಾನಂದ ಕಾಶನಪ್ಪವರ್ ಮತ್ತು ಬೆಂಬಲಿಗರ ಪತ್ತೆ ಕಾರ್ಯಕ್ಕೆ ಪೊಲೀಸರು ವಿಶೇಷ ತಂಡ ರಚಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಸಿಸಿ ಕ್ಯಾಮೆರಾದ ದೃಶ್ಯ ನೀಡದಂತೆ ಸರ್ಕಾರದಿಂದ ಆದೇಶ!
ಪೊಲೀಸರ ಮೇಲೆ ಶಾಸಕರು ಮತ್ತು ಬೆಂಬಲಿಗರು ನಡೆಸಿದ್ದಾರೆ ಎನ್ನಲಾದ ಹಲ್ಲೆ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದರೂ, ಯಾವುದೇ ಕಾರಣಕ್ಕೂ ಮಾಧ್ಯಮಗಳಿಗೆ ವಿಡಿಯೋವನ್ನು ನೀಡದಂತೆ ಪೊಲೀಸ್ ಇಲಾಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದೆ ಎಂದು ಹೇಳಲಾಗುತ್ತಿದೆ.
-
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ












Click it and Unblock the Notifications