ಕನ್ನಡದಲ್ಲೇ ಯುಪಿಎಸ್ಸಿ ಬರೆದ ಭೈರಪ್ಪ ಸಂದರ್ಶನ
ಬೆಂಗಳೂರು, ಮೇ 12: ಕನ್ನಡದಲ್ಲೇ ಯುಪಿಎಸ್ಸಿ ಪರೀಕ್ಷೆ ಬರೆದು ರಾಜ್ಯಕ್ಕೆ ಹೆಮ್ಮೆ ತಂದ ಕೋಲಾರದ ಭೈರಪ್ಪ ಒನ್ ಇಂಡಿಯಾ ಕನ್ನಡದೊಂದಿಗೆ ಮಾತನಾಡಿದ್ದಾರೆ. ತಮ್ಮ ಸಾಧನೆಗೆ ಕಾರಣರಾದವರನ್ನು ನೆನೆಯುತ್ತ ಮುಂದಿನ ಹೆಜ್ಜೆಗಳ ಬಗ್ಗೆ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಯಾಗುವ ಕನಸು ಹೊತ್ತುಕೊಂಡಿರುವ ಭೈರಪ್ಪ ಕೋಲಾರ ಜಿಲ್ಲೆ ಮಾಲೂರು ತಾಲೂಕು ಪಡುವನಹಳ್ಳಿಯವರು. ರಸಾಯನಶಾಸ್ತ್ರವನ್ನು ಸಹ ಕನ್ನಡದಲ್ಲೇ ಬರೆದ ಭೈರಪ್ಪ ಬೆಂಗಳೂರಿನ ವಿಜಯನಗರದಲ್ಲಿ ವಿದ್ಯಾರ್ಥಿಗಳಿಗೆ ಕೆಪಿಎಸ್ ಸಿ ಕೋಚಿಂಗ್ ನೀಡುತ್ತಿದ್ದಾರೆ.[ಯುಪಿಎಸ್ಸಿಯಲ್ಲಿ 56ನೇ ಶ್ರೇಯಾಂಕ ಪಡೆದ ಮೈಸೂರಿನ ಹುಡುಗ]
ತಹಶೀಲ್ದಾರ್ ಹುದ್ದೆ: 2012 ರಲ್ಲೇ ಭೈರಪ್ಪ ಕೆ ಪಿ ಎಸ್ ಸಿಯಲ್ಲಿ ಉತ್ತೀರ್ಣರಾಗಿ ತಹಶೀಲ್ದಾರ್ ಹುದ್ದೆಗೆ ನೇಮಕವಾಗಿದ್ದರು. ಆದರೆ ಕೆಪಿಎಸ್ ಸಿ ಗೊಂದಲಗಳು ಅವರಿಗೆ ಅಡಚಣೆ ಉಂಟುಮಾಡಿದವು. ಛಲಬಿಡದ ಭೈರಪ್ಪ 2015 ರಲ್ಲಿ ಯುಪಿಎಸ್ಸಿ ಬರೆದು 1037 ನೇ ಶ್ರೇಯಾಂಕ ತಮ್ಮದಾಗಿರಿಸಿಕೊಂಡಿದ್ದಾರೆ.

ನಿಲ್ಲದ ಓದಿನ ಹಸಿವು: ಆದರೆ ಭೈರಪ್ಪ ಓದಿನ ಹಸಿವು, ಡಿಸಿಯಾಗುವ ಹಂಬಲ ಇಲ್ಲಿಗೆ ನಿಲ್ಲುವುದಿಲ್ಲ. ಮುಂಬರುವ ಅಂದರೆ 2016ರ ಯುಪಿಎಸ್ ಸಿ ಪರೀಕ್ಷೆಯನ್ನು ಬರೆದು ಇನ್ನು ಹೆಚ್ಚಿನ ಶ್ರೇಯಾಂಕ ಪಡೆದುಕೊಳ್ಳುತ್ತೇನೆ ಎಂದು ಹೇಳುತ್ತಾರೆ.
ಯಾಕೆ ಡಿಸಿಯಾಗಬೇಕು?: ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುವುದು ನನ್ನ ಮುಂದಿರುವ ಗುರಿ. ಇದೇ ಕಾರಣಕ್ಕೆ ಜಿಲ್ಲಾಧಿಕಾರಿಯಾಗಬೇಕು ಎಂದು ಭೈರಪ್ಪ ಹೇಳುತ್ತಾರೆ.[ನಿಡ್ಡೋಡಿಯ ರೈತನ ಮಗಳು ಮಿಶಲ್ ಯುಪಿಎಸ್ಸಿ ಸಾಧಕಿ!]
ಕನ್ನಡದಲ್ಲೇ ಬರೆದದ್ದಕ್ಕೆ ಸಂತೃಪ್ತಿಯಿದೆ: ರಸಾಯನಶಾಸ್ತ್ರವನ್ನು ಕನ್ನಡದಲ್ಲಿಯೇ ಬರೆದು ಉತ್ತೀರ್ಣನಾಗಿದ್ದೇನೆ. ಕನ್ನಡದಲ್ಲಿ ಬೇರೆಯವರು ಬರೆಯಬೇಕು ಎಂಬ ಆಸೆ ಇದೆ ಎಂದು ಭೈರಪ್ಪ ಹೇಳುತ್ತಾರೆ.[ಯುಪಿಎಸ್ಸಿ: ಕರ್ನಾಟಕದ ಸಾಧಕರ ಪಟ್ಟಿ]
ವಿಜಯನಗರದಲ್ಲಿ ಟೀಚರ್: ಸದ್ಯ ಭೈರಪ್ಪ ವಿಜಯನಗರದ ಜೈಸ್ ಕೋಚಿಂಗ್ ಸೆಂಟರ್ ನಲ್ಲಿ ವಿದ್ಯಾರ್ಥಿಗಳಿಗೆ ಕೆ ಪಿಎಸ್ ಸಿ ತರಬೇತಿಯನ್ನು ನೀಡುತ್ತಿದ್ದಾರೆ. ನಾನು ತರಬೇತಿ ನೀಡಿದ 159 ವಿದ್ಯಾರ್ಥಿಗಳು ಯುಪಿಎಸ್ ಸಿ ಬರೆಯಲು ಆಯ್ಕೆಯಾಗಿದ್ದಾರೆ ಎನ್ನುವಾಗ ಅವರ ಮುಖದಲ್ಲಿ ಸಂತೃಪ್ತಿಯ ಕಳೆ.
ಧನ್ಯವಾದ ಹೇಳಲು ಮರೆಯಲ್ಲ: ನನಗೆ ಸ್ಫೂರ್ತಿ ತುಂಬಿದ ಸಂಪಿಗೆ ಹಳ್ಳಿಯ ಇನ್ಸ್ ಪೆಕ್ಟರ್ ಜಿ ಕೇಶವ್ ಮೂರ್ತಿ, ತಮ್ಮ ಅಣ್ಣ ಮತ್ತು ಕುಟುಂಬದವರ ಸಹಕಾರಕ್ಕೆ ಧನ್ಯವಾದ ಹೇಳಲು ಮರೆಯಲ್ಲ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications