Breaking: ಯುಪಿಎಸ್ಸಿ ಫಲಿತಾಂಶ: ದಾವಣಗೆರೆಯ ಅವಿನಾಶ್ ದೇಶಕ್ಕೆ 31ನೇ ರ್ಯಾಂಕ್
ಬೆಂಗಳೂರು, ಮೇ 30: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಫಲಿತಾಂಶ ಸೋಮವಾರ ಪ್ರಕಟವಾಗಿದೆ. ದಾವಣಗೆರೆಯ ವಿ. ಅವಿನಾಶ್ 31ನೇ ರ್ಯಾಂಕ್ ಪಡೆದಿದ್ದಾರೆ. ಕರ್ನಾಟಕದಲ್ಲಿ ಮೊದಲ ಸ್ಥಾನದಲ್ಲಿ ಇದ್ದಾರೆ.
ಯುಪಿಎಸ್ಸಿ ನಾಗರಿಕ ಸೇವೆಗಳ 2021ನೇ ಸಾಲಿನ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಶೃತಿ ಶರ್ಮಾ ದೇಶದಕ್ಕೆ ಮೊದಲ ರ್ಯಾಂಕ್ ಗಳಿಸಿದ್ದಾರೆ. ಮೊದಲ ಮೂರು ರ್ಯಾಂಕ್ಗಳನ್ನು ಮಹಿಳೆಯರೇ ಪಡೆದಿದ್ದಾರೆ. ಅಭ್ಯರ್ಥಿಗಳು ವೆಬ್ಸೈಟ್: upsc.gov.in ನಲ್ಲಿ ವೀಕ್ಷಿಸಬಹುದು.

ದಾವಣಗೆರೆ ಮೂಲದ ಅವಿನಾಶ್ 31ನೇ ರ್ಯಾಂಕ್ ಪಡೆದಿದ್ದಾರೆ. ಬೆಂಗಳೂರಿನ ಎನ್ಸೈಟ್ ಅಕಾಡೆಮಿಯಲ್ಲಿ ತರಬೇತಿ ಪಡೆದ್ದಾರೆ. ಒಟ್ಟಾರೆ ಕರ್ನಾಟಕದ 24 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.












Click it and Unblock the Notifications