ಯುಪಿಎಸ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಕನ್ನಡಿಗರು
ಬೆಂಗಳೂರು, ಜೂ. 13 : ಕೇಂದ್ರ ಲೋಕಸೇವಾ ಆಯೋಗದ ಫಲಿತಾಂಶ ಪ್ರಕಟಗೊಂಡಿದ್ದು, ಕರ್ನಾಟಕದ ರಾಜ್ಯದ 40ಕ್ಕೂ ಹೆಚ್ಚು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. 2013ರ ಅಕ್ಟೋಬರ್ ಪರೀಕ್ಷೆ ನಡೆದಿದ್ದು, ಮೇ ಕೊನೆಯ ವಾರದಿಂದ ಜೂ.5ರವರೆಗೆ ಸಂದರ್ಶನ ನಡೆದಿತ್ತು. ರಾಜಸ್ಥಾನದ ಗೌರವ್ ಅಗರವಾಲ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ದೇಶಾದ್ಯಂತ 1,122 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
ಕರ್ನಾಟಕದಿಂದ ಧಾರವಾಡದ ಗುರುದತ್ತ ಹೆಗಡೆ 25ನೇ ರ್ಯಾಂಕ್ ಪಡೆದಿದ್ದರೆ, ವಿಜಾಪುರ ತಾಲೂಕು ಗುಣಕಿ ಗ್ರಾಮದ ಕೃಷಿ ಕುಟುಂಬದ ರವೀಂದ್ರ ಈರಣ್ಣ ಹತ್ತಳ್ಳಿ 364ನೇ ರ್ಯಾಂಕ್ ಪಡೆದಿದ್ದಾರೆ. ಉತ್ತರ ಕನ್ನಡ ಜಿ.ಪಂ ಸಿಇಒ ಅವರ ಪತ್ನಿ ದಿವ್ಯಪ್ರಭ, ಶಿವಮೊಗ್ಗದಲ್ಲಿ ಪಂಚಾಯತ್ ರಾಜ್ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಆಗಿರುವವರ ಪುತ್ರ ಜಿ.ಎಂ. ವಿನಯ್ ಸೇರಿದಂತೆ ಹಲವರು ಉತ್ತೀರ್ಣರಾಗಿದ್ದಾರೆ.

ಗುರುದತ್ತ ಹೆಗಡೆ : ಯುಪಿಎಸ್ ಸಿ ಪರೀಕ್ಷೆಯಲ್ಲಿ 25ನೇ ರ್ಯಾಂಕ್ ಪಡೆದಿರುವ ಧಾರವಾಡದ ಗುರುದತ್ತ ಹೆಗಡೆ ಅವರು ನಾರಾಯಣ ಹೆಗಡೆ ಹಾಗೂ ಶಶಿಕಲಾ ದಂಪತಿಯ ಪುತ್ರ. 5ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಈರಿದ ಇವರು 6ನೇ ತರಗತಿಯಿಂದ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದಾರೆ. ಮೂಲತಃ ಶಿರಸಿಯವರಾದ ನಾರಾಯಣ ಹೆಗಡೆ ಸದ್ಯ ಧಾರವಾಡದಲ್ಲಿ ನೆಲೆಸಿ ವ್ಯಾಪಾರ ಮಾಡುತ್ತಿದ್ದಾರೆ. ಗುರುದತ್ತ ಅವರ ತಾಯಿ ಶಶಿಕಲಾ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗುರುದತ್ತ ಅವರು ಐಎಎಸ್ ಪರೀಕ್ಷೆಗಾಗಿ ದೆಹಲಿಯ ಶ್ರೀರಾಮ ಕೋಚಿಂಗ್ ಸೆಂಟರ್ನಲ್ಲಿ ತರಬೇತಿ ಪಡೆದಿದ್ದರು.
ದಿವ್ಯಪ್ರಭ : ಯುಪಿಎಸ್ ಸಿ ಪರೀಕ್ಷೆಯಲ್ಲಿ 82ನೇ ರ್ಯಾಂಕ್ ಪಡೆದಿರುವ ದಿವ್ಯಪ್ರಭ ಅವರು, ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ರಾಮಪ್ರಸಾದ್ ಮನೋಹರ ಅವರ ಪತ್ನಿ. ಸದ್ಯ ಪತಿಯೊಂದಿಗೆ ಕಾರವಾರದಲ್ಲಿ ನೆಲೆಸಿರುವ ದಿವ್ಯಪ್ರಭ ಮೂಲತಃ ತಮಿಳುನಾಡಿನ ಮಧುರೈನವರು. ಬಿಎಸ್ಸಿ ಕೃಷಿ ವಿಷಯದಲ್ಲಿ ಚಿನ್ನದ ಪದಕ ಪಡೆದಿದ್ದು, ವಿಭಾಗೀಯ ಅರಣ್ಯ ಸಂರಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. [ಐಎಎಸ್ ಪರೀಕ್ಷೆ ಕನ್ನಡದಲ್ಲೇ ಬರೆಯಲು ಬಿಡಿ]
ಲಕ್ಷ್ಮಣ ನಿಂಬರಗಿ : ಹುಬ್ಬಳ್ಳಿಯ ವಿದ್ಯಾನಗರದ ಪ್ರಭಾತ್ ಕಾಲೊನಿ ನಿವಾಸಿ ಲಕ್ಷ್ಮಣ ನಿಂಬರಗಿ ಯುಪಿಎಸ್ ಸಿ ಪರೀಕ್ಷೆಯಲ್ಲಿ 104ನೇ ರ್ಯಾಂಕ್ ಪಡೆದಿದ್ದಾರೆ. ಕನ್ನಡ ಮಾಧ್ಯಮದಲ್ಲೇ ಪರೀಕ್ಷೆ ಬರೆದಿರುವುದು ಇವರ ಸಾಧನೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುರಗೋಡದಲ್ಲಿ ಉಪ ನೋಂದಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು, ದಿಲ್ಲಿಯ ವಾದಿರಾಮ್ ಆ್ಯಂಡ್ ರವಿ ಕೋಚಿಂಗ್ ಸೆಂಟರ್ ನಲ್ಲಿ ಎರಡು ವರ್ಷ ತರಬೇತಿ ಪಡೆದಿದ್ದರು.
ಬಿ.ಎಂ. ಲಕ್ಷ್ಮೀಪ್ರಸಾದ್ : ಯುಪಿಎಸ್ ಸಿ ಪರೀಕ್ಷೆಯಲ್ಲಿ 151ನೇ ರ್ಯಾಂಕ್ ಡೆದಿರುವ ಬಿ.ಎಂ.ಲಕ್ಷ್ಮೀ ಪ್ರಸಾದ್ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿನ ಕಸ್ತೂರಿನಗರದ ನಿವಾಸಿಯಾಗಿರುವ ಇವರು ಎಚ್ಪಿ ಕಂಪನಿಯಲ್ಲಿ 2009ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ತಂದೆ ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾಗಿದ್ದಾರೆ.
ರವೀಂದ್ರ ಈರಣ್ಣ ಹತ್ತಳ್ಳಿ : ವಿಜಾಪುರ ತಾಲೂಕಿನ ಗುಣಕಿ ಎಂಬ ಕುಗ್ರಾಮದ ಯುವಕ ರವೀಂದ್ರ ಈರಣ್ಣ ಹತ್ತಳ್ಳಿ ಯುಪಿಎಸ್ ಸಿ ಪರೀಕ್ಷೆಯಲ್ಲಿ 364ನೇ ರ್ಯಾಂಕ್ ಡೆದಿದ್ದಾರೆ. ಮೊದಲ ಪ್ರಯತ್ನದಲ್ಲಿ ಕೇವಲ 4 ಅಂಕಗಳಿಂದ ಸಂದರ್ಶನ ಕೈ ತಪ್ಪಿತ್ತು. ಎರಡನೇ ಪ್ರಯತ್ನದಲ್ಲಿ ಉತ್ತಿರ್ಣರಾಗಿದ್ದಾರೆ. ರವೀಂದ್ರ ಅವರ ತಂದೆ ವಿಜಾಪುರದ ಬಿಎಲ್ಡಿಇ ಪಾಲಿಟೆಕ್ನಿಕ್ ಕಾಲೇಜ್ನಲ್ಲಿ ಗುಮಾಸ್ತ. ತಾಯಿ ಗೃಹಿಣಿ.
ಜಿ.ಎಂ.ವಿನಯ್ : ಯುಪಿಎಸ್ ಸಿ ಪರೀಕ್ಷೆಯಲ್ಲಿ 459ನೇ ರ್ಯಾಂಕ್ ಪಡೆದಿರುವ ವಿನಯ್ ಅಪ್ಪಟ ಮಲೆನಾಡಿನ ಪ್ರತಿಭೆ. ತಂದೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಶಿವಮೊಗ್ಗದಲ್ಲಿಯೇ ಪ್ರಾಥಮಿಕ, ಪ್ರೌಢ ಮತ್ತು ಪಿಯುಸಿ ಶಿಕ್ಷಣ ಪಡೆದಿದ್ದಾರೆ. ಮೊದಲ ಬಾರಿಗೆ ಒಂದು ಸಾರಿ ಪರೀಕ್ಷೆ ಬರೆದು ವಿಫಲರಾಗಿದ್ದರು, ಎರಡನೇ ಬಾರಿ 459ನೇ ರ್ಯಾಂಕ್ ಗಳಿಸಿದ್ದಾರೆ.
ಡಾ. ರಾಘವೇಂದ್ರ ಪಿ. ರಾಯ್ಕರ್ : ಯುಪಿಎಸ್ ಸಿ ಪರೀಕ್ಷೆಯಲ್ಲಿ 769ನೇ ರ್ಯಾಂಕ್ ಪಡೆದಿರುವ ರಾಘವೇಂದ್ರ ಅವರು ಬಿಬಿಎಂಪಿಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎರಡು ಬಾರಿ ಪರೀಕ್ಷೆ ಬರೆದಿದ್ದ ಇವರು ಮೂರನೇ ಬಾರಿ ಉತ್ತೀರ್ಣರಾಗಿದ್ದಾರೆ. ರಾಘವೇಂದ್ರ ಪಿ.ರಾಯ್ಕರ್ ಹುಟ್ಟಿ, ಬೆಳೆದದ್ದೆಲ್ಲಾ ಭದ್ರಾವತಿಯಲ್ಲಿ. ಪ್ರೌಢಶಾಲೆಯವರೆಗೂ ಅಲ್ಲಿನ ವಿಶ್ವೇಶ್ವರಯ್ಯ ಶಾಲೆಯಲ್ಲೇ ವ್ಯಾಸಂಗ ಮಾಡಿದ್ದಾರೆ.
ದ್ಯಾಮಪ್ಪ ಐರಣಿ : ಯುಪಿಎಸ್ ಸಿ 833ನೇ ರ್ಯಾಂಕ್ ಪಡೆದಿರುವ ದ್ಯಾಮಪ್ಪ ಐರಣಿ ಅವರ ತಂದೆ ಕುರಿಗಾಹಿ. ಚಿಕ್ಕಂದಿನಲ್ಲಿ ದ್ಯಾಮಪ್ಪ ಆಗಾಗ ತಂದೆಯ ಜತೆ ಕುರಿ ಕಾಯಲು ಸಹ ಹೋಗುತ್ತಿದ್ದರು. ಬೆಂಗಳೂರು ಆರ್.ವಿ.ಕಾಲೇಜಿನಲ್ಲಿ ಎಂಜಿನಿಯರಿಂಗ್ ಪೂರ್ಣಗೊಳಿಸಿದ್ದಾರೆ.
ಉಮೇಶ್ ಎನ್.ರಾಠೋಡ್ : ಯುಪಿಎಸ್ ಸಿ ಪರೀಕ್ಷೆಯಲ್ಲಿ 939ನೇ ರ್ಯಾಂಕ್ ಡೆದಿರುವ ಉಮೇಶ್ ಹಗಲಿಡಿ ಅಂಚೆ ಕಚೇರಿಯಲ್ಲಿ ಪತ್ರಗಳನ್ನು ಪ್ರತ್ಯೇಕಿಸುವ ಕೆಲಸ, ರಾತ್ರಿಯಿಡಿ ಪರೀಕ್ಷೆಗಾಗಿ ಅಭ್ಯಾಸ ಮಾಡುತ್ತಿದ್ದರು. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಇವರು ಪೊಲಿಟಿಕಲ್ ಸೈನ್ಸ್ನಲ್ಲಿ ಎಂಎ ಪದವಿ ಪಡೆದಿದ್ದಾರೆ. ಬೆಂಗಳೂರಿನ ಜೆಎಸ್ಎಸ್ ಸ್ಪರ್ಧಾತ್ಮಕ ಪರೀಕ್ಷೆ ಕೇಂದ್ರದಲ್ಲಿ ಐಎಎಸ್ಗಾಗಿ ಎರಡು ವರ್ಷ ತರಬೇತಿ ಪಡೆದಿದ್ದಾರೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications