ಉರ್ದು ಜಾಹೀರಾತು ವಿವಾದ: ಬಿಜೆಪಿ 'ಹಿಪೋಕ್ರಸಿ' ಗೋಸುಂಬೆಯನ್ನೇ ನಾಚಿಸುವಂತಿದೆ: ಸಿ.ಎಂ ಸಿದ್ದರಾಮಯ್ಯ
ಬೆಂಗಳೂರು: ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ ಜಾಹೀರಾತು ನೀಡಿ, ಈಗ ನಮ್ಮ ವಿರುದ್ಧ ಮುಗಿಬೀಳುವುದು ಆತ್ಮವಂಚನೆ ಮತ್ತು ಅಸಹ್ಯದ ಪರಮಾವಧಿ. ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಅಧಿಕಾರದಲ್ಲಿದ್ದಾಗ ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು? ಎಂದು ಹೇಳಿ ಪುಣ್ಯಕಟ್ಟಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದಲೇ ಸರ್ಕಾರ ಜಾಹೀರಾತು ನೀಡುತ್ತದೆ. ಹೆಚ್ಚೆಚ್ಚು ಜನರನ್ನು ತಲುಪುತ್ತದೆ ಎನ್ನುವ ಕಾರಣಕ್ಕಾಗಿ ಆಯಾ ಭಾಷೆಯ ಪತ್ರಿಕೆಗಳಲ್ಲಿ ಅದೇ ಭಾಷೆಯ ಜಾಹೀರಾತು ನೀಡುವುದು ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿ. ಇದರಿಂದ ಪತ್ರಿಕೆಯ ಓದುಗರಿಗೆ ಜಾಹೀರಾತಿನ ವಿಚಾರ ಅರ್ಥವಾಗಿ, ಜಾಹೀರಾತು ನೀಡಿದ ಉದ್ದೇಶವೂ ಈಡೇರುತ್ತದೆ.

ಬಿಜೆಪಿ ನಾಯಕರು ಒಂದಲ್ಲ, ಎರಡಲ್ಲ ಹತ್ತಾರು ಬಾರಿ ಉರ್ದು ಜಾಹೀರಾತುಗಳನ್ನು ನೀಡಿದ್ದಾರೆ, ಆಗ ಅವರಿಗೆ ಅದು ತುಷ್ಟೀಕರಣ ಅನ್ನಿಸಲಿಲ್ಲ. ಈಗ ನಮ್ಮ ಸರ್ಕಾರ ನೀಡಿರುವ ಉರ್ದು ಜಾಹೀರಾತು ಕಂಡೊಡನೆ ಅವರೊಳಗಿನ ಕನ್ನಡಪ್ರೇಮ ಇದ್ದಕ್ಕಿದ್ದಂತೆ ಎದ್ದುನಿಂತಿದೆ. ನಿಮ್ಮ ಈ 'ಹಿಪೋಕ್ರಸಿ' ಗೋಸುಂಬೆಯನ್ನೇ ನಾಚಿಸುವಂತಿದೆ.
ನೆಲ - ಜಲ - ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಹೇಳಿಸಿಕೊಳ್ಳಬೇಕಾದ ದರಿದ್ರ ಸ್ಥಿತಿ ನಮಗೆ ಬಂದಿಲ್ಲ. ಕನ್ನಡ ಮತ್ತು ಕನ್ನಡಿಗರ ಹಿತ ಕಾಯುವ ವಿಚಾರ ಬಂದಾಗ ರಾಜಕೀಯ ಬದಿಗಿಟ್ಟು, ಹೋರಾಟದ ಮೊದಲ ಸಾಲಿನಲ್ಲಿ ನಿಂತವನು ನಾನು. ಇದಕ್ಕೆ ಇತಿಹಾಸ ಸಾಕ್ಷಿ. ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಿಯೇ ರಾಜಕೀಯ ಜೀವನಕ್ಕೆ ಕಾಲಿರಿಸಿದ ನನಗೆ ಕನ್ನಡ ಬರಿ ಭಾಷೆಯಲ್ಲ, ಬದುಕು ಹೌದು. ಜೈ ಕರ್ನಾಟಕ, ಜೈ ಕನ್ನಡ.. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಪ್ರತಿಕ್ರಿಯೆಗೆ ಕನ್ನಡಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಲಿಲ್ಲ: ಸಿದ್ದರಾಮಯ್ಯ
ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧ ಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು 2 ಕೋಟಿ ಉದ್ಯೋಗ ನೀಡುವುದಾಗಿ ತಿಳಿಸಿದರೇ ಹೊರತು, ಯಾರಿಗೂ ಉದ್ಯೋಗ ದೊರೆಯಲಿಲ್ಲ. ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸಿದ ಸಂದರ್ಭದಲ್ಲಿ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ. ಆದ್ದರಿಂದ ನಮ್ಮ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ.
ಸರ್ಕಾರಿ ನೇಮಕಾತಿಗಳಲ್ಲಿ ಒಳಮೀಸಲಾತಿಯ ಸಮಸ್ಯೆಯಿಂದ ವಿಳಂಬವಾಗಿತ್ತಾದರೂ, ಸದ್ಯದಲ್ಲಿಯೇ ನೇಮಕಾತಿಯನ್ನು ಪ್ರಾರಂಭಿಸಿ, ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನಮ್ಮ ಸರ್ಕಾರ ನುಡಿದಂತೆ ನಡೆದು ಸರ್ಕಾರಿ ನೇಮಕಾತಿಗಳನ್ನು ಮಾಡಲಿದ್ದು, ಈ ಬಗ್ಗೆ ಬಜೆಟ್ನಲ್ಲಿಯೂ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications