ಉಡುಪಿ ಕೃಷ್ಣ ಮಠದ ಸೇವೆ ಬುಕ್ ಮಾಡಲು ವೆಬ್ಸೈಟ್
ಉಡುಪಿ, ಜುಲೈ 14 : ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯುವ ವಿವಿಧ ಪೂಜೆಗಳಲ್ಲಿ ಸೇವೆ ಸಲ್ಲಿಸಲು ಅನುಕೂಲವಾಗುವಂತೆ ವೆಬ್ಸೈಟ್ ಮತ್ತು ಮೊಬೈಲ್ ಅಪ್ಲಿಕೇಷನ್ ರೂಪಿಸಲಾಗಿದೆ. ಏಕ್ಸಿಸ್ ಬ್ಯಾಂಕ್ನವರ ತಾಂತ್ರಿಕ ಸಹಕಾರದಿಂದ ಇದನ್ನು ಸಿದ್ಧಪಡಿಸಲಾಗಿದೆ.
'ಇ ಸೇವಾ' ಎಂಬ ಆನ್ಲೈನ್ ಸೇವಾ ಸೌಲಭ್ಯ ಮತ್ತು 'ಸೇವಾ' ಎಂಬ ಮೊಬೈಲ್ ಅಪ್ಲಿಕೇಷನ್ ಅನ್ನು ಬುಧವಾರ ಶ್ರೀ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದರು ಉದ್ಘಾಟಿಸಿದರು, ವೆಬ್ಸೈಟ್ ರೂಪಿಸಿದ ತಂಡವನ್ನು ಹರಸಿದರು. [ಉಡುಪಿ ಮಠದಿಂದ ದುಶ್ಚಟ ನಿವಾರಣಾ ಹುಂಡಿ ಸ್ಥಾಪನೆ]

udupisrikrishnamatha.org ಇದರ ಮೂಲಕ ಭಕ್ತರು ತಮಗೆ ಬೇಕಾದ ಸೇವೆಗಳನ್ನು ಸಲ್ಲಿಸಬಹುದು. ಯಾವುದೇ ಬ್ಯಾಂಕ್ನ ಡೆಬಿಟ್/ ಕ್ರೆಡಿಟ್ ಕಾರ್ಡ್ ಮೂಲಕ ಸೇವೆಗಳನ್ನು ಬುಕ್ ಮಾಡಬಹುದು, ದೇಣಿಗೆಗಳನ್ನು ಸಲ್ಲಿಸಬಹುದು. ಮಠಕ್ಕೆ ಆಗಮಿಸುವವರು ವಸತಿ ವ್ಯವಸ್ಥೆ ಪಡೆಯಲು ವೆಬ್ಸೈಟ್ ಮೂಲಕ ಬುಕ್ ಮಾಡುವ ವ್ಯವಸ್ಥೆಯನ್ನು ಶೀಘ್ರದಲ್ಲೇ ಆಳವಡಿಸಲಾಗುತ್ತದೆ. [ಉಡುಪಿ ಪರ್ಯಾಯ ಇತಿಹಾಸದಲ್ಲಿ ಮೊದಲ ಬಾರಿಗೆ ಮಹತ್ವದ ಬದಲಾವಣೆ]
'ಸೇವಾ ಎಂಬ ಆಪ್ ರೂಪಿಸಿದವರು ಉಡುಪಿಯ ಸಂದೀಪ್ ಸದಾನಂದ ಭಕ್ತ ಅವರ ತಂಡ. ಸೇವೆಗಳಿಗಾಗಿ ಆಪ್ ಹೊಂದಿದ ಮೊದಲ ಧಾರ್ಮಿಕ ಸಂಸ್ಥೆ ಶ್ರೀ ಕೃಷ್ಣ ಮಠ. ಇದರಲ್ಲಿಯೇ ರಶೀದಿ ಕೊಡುವ ವ್ಯವಸ್ಥೆಯನ್ನು ಅಳವಡಿಸಿದ್ದೇವೆ. ಆಪ್ ಉಚಿತವಾಗಿ ದೊರಕುತ್ತದೆ. ಇತರ ದೇವಸ್ಥಾನದವರು ಬಯಸಿದರೆ ಉಚಿತವಾಗಿ ನೋಂದಣಿ ಮಾಡಲಾಗುವುದು' ಎಂದು ಸಂದೀಪ್ ಭಕ್ತ ತಿಳಿಸಿದರು. [ಪೇಜಾವರ ಶ್ರೀಗಳಿಗೆ ಕೃಷ್ಣನ ಜೊತೆ ಒಲಿದ ಆಧುನಿಕ ಕುಬೇರ!]
ಎಕ್ಸಿಸ್ ಬ್ಯಾಂಕ್ ಮಂಗಳೂರು ವಲಯದ ಮುಖ್ಯಸ್ಥ ಸುರೇಶ್, ಉಡುಪಿ ಶಾಖಾ ಮುಖ್ಯಸ್ಥ ನರಸಿಂಹ ಕಾಮತ್, ದೀಪಕ್, ಆನ್ಲೈನ್ ಮೊದಲ ಸೇವಾಕರ್ತ ಸಿಸ್ಕಾಂ ವಾದಿರಾಜ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications