Get Updates
Get notified of breaking news, exclusive insights, and must-see stories!

ಮುಂದೊಂದು ದಿನ ಯುಟಿ ಖಾದರ್‌ ನಮ್ಮನ್ನೆಲ್ಲಾ ಮೀರಿಸಿ ಬೆಳೆಯಬಹುದು: ‌ಡಿ.ಕೆ.ಶಿವಕುಮಾರ್

ಬೆಂಗಳೂರು, ಸೆಪ್ಟೆಂಬರ್‌ 30: ಸ್ಪೀಕರ್ ಆಗಿರುವ ಯು.ಟಿ.ಖಾದರ್ ಅವರಿಗೆ ಮಂತ್ರಿ ಸ್ಥಾನ ನೀಡಿ ಎಂದು ಮನವಿ ಮಾಡಿದ್ದೀರಿ, ಅವರು ನಮಗಿಂತ ಎತ್ತರದ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ. ಎಸ್.ಎಂ.ಕೃಷ್ಣ, ಜಗದೀಶ್ ಶೆಟ್ಟರ್ ಅವರುಗಳು ಸ್ಪೀಕರ್ ಆಗಿದ್ದರು. ಯಾರ ಹಣೆಯಲ್ಲಿ ಏನು ಬರೆದಿರುತ್ತದೆ ಎಂದು ಯಾರಿಗೂ ತಿಳಿದಿಲ್ಲ, ನೀವು ನಮ್ಮನ್ನೆಲ್ಲಾ ಮೀರಿಸಿ ಮುಂದೊಂದು ದಿನ ಬೆಳೆಯಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಶನಿವಾರ ನಡೆದ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ನಿನ ನೂತನ ಸೌಹಾರ್ದ ಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಶೈಕ್ಷಣಿಕ ಬೆಳವಣಿಗೆಗೆ ಬ್ಯಾರಿ ಭಾಷಿಕ ಸಮುದಾಯ ಸಾಕಷ್ಟು ಕೊಡುಗೆ ನೀಡಿದೆಲೋಕಸಭೆ ಚುನಾವಣೆ ವೇಳೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಬ್ಯಾರಿ ಸಮುದಾಯ ಕಾಂಗ್ರೆಸ್ ಪಕ್ಷದ ಕೈ ಹಿಡಿಯಬೇಕು ಎಂದು ಮನವಿ ಮಾಡಿದರು.

ut-khader-can-surpass-all-of-us

ಎಲ್ಲಾ ಧರ್ಮದವರ ಜೊತೆ ಸ್ನೇಹಭಾವದಿಂದ ಇರುವ ಹಾಗೂ ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗುವ ಸೌಹಾರ್ದಯುತ ಗುಣ ಈ ಸಮುದಾಯಕ್ಕೆ ಇದೆ. ಕನ್ನಡ ಸಾಹಿತ್ಯ, ಸಂಸ್ಕೃತಿ, ಭಾಷೆಗೆ ಬ್ಯಾರಿ ಭಾಷಿಕರು ನೀಡಿರುವ ಕೊಡುಗೆ ಸ್ಮರಣೀಯವಾದುದು. ಹೆಣ್ಣುಮಕ್ಕಳು ಒಡವೆ ಹಾಕಿಕೊಂಡರೆ ಸುಂದರವಾಗಿ ಕಾಣುತ್ತಾರೋ, ಬ್ಯಾರಿ ಭಾಷಿಕರು ಕನ್ನಡವನ್ನು ಸುಂದರಗೊಳಿಸಿದ್ದಾರೆ ಎಂದರು.

ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿಯೊಂದೇ, ಕರ್ಮ ಯಾವುದಾದರೂ ನಿಷ್ಠೆಯೊಂದೆ, ದೇವನೊಬ್ಬ ನಾಮ ಹಲವು ಎನ್ನುವ ಮಾತಿನಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂರಾರು ದೇವಾಲಯಗಳಿಗೆ ದಾನ- ಧರ್ಮ ಮಾಡಿದವರು ಬ್ಯಾರಿ ಭಾಷಿಕರು. ಮುಲ್ಕಿಯ ದುರ್ಗಾಪರಮೇಶ್ವರಿ ದೇವಸ್ಥಾನ ಕಟ್ಟಿಸಿದ್ದು ಬಪ್ಪ ಬ್ಯಾರಿ ಎಂದು ಇದೇ ವೇಳೆ ಸ್ಮರಿಸಿಕೊಂಡರು.

ಬ್ಯಾರಿ ಸಮುದಾಯದ ಭವನಕ್ಕೆ ಸಹಾಯ ಮಾಡಲು ಅಥವಾ ನಿಮಗೆ ಆಶ್ವಾಸನೆಗಳನ್ನು ನೀಡಲು ಇಲ್ಲಿಗೆ ಬಂದಿಲ್ಲ, ಬದಲಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ ಕಾರಣ ನಿಮ್ಮ ಋಣ ತೀರಿಸಲು ಬಂದಿದ್ದೇನೆ. ದೇಶದಲ್ಲಿ ಬದಲಾವಣೆಯ ಗಾಳಿ ಎಬ್ಬಿಸಿ, ಸಮರ್ಥವಾದ ಉತ್ತರ ನೀಡಲು ಕಾರಣರಾಗಿದ್ದೀರಿ. ಎಲ್ಲಾ ಧರ್ಮ, ಜಾತಿಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಸರ್ಕಾರ ನಮ್ಮದು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಧರ್ಮದವರನ್ನು ಕಾಂಗ್ರೆಸ್ ಸರ್ಕಾರ ಕಾಪಾಡುತ್ತದೆ ಎಂದು ಭರವಸೆ ನೀಡಿದರು.

ಹುಟ್ಟಿದ ಊರಿನಲ್ಲೇ ಉದ್ಯೋಗ ಸೃಷ್ಟಿ ಮಾಡಿ:

ಬಿಜೆಪಿ ಸರ್ಕಾರ ಇದ್ದ ವೇಳೆ ಹೂಡಿಕೆದಾರರ ಸಮಾವೇಶದ ಮೂಲಕ 10 ಲಕ್ಷ ಕೋಟಿ ಬಂಡವಾಳ ರಾಜ್ಯಕ್ಕೆ ಹರಿದು ಬಂದಿತು ಎಂದು ಹೇಳಿದ್ದರು. ಆದರೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಿಂದ ಒಬ್ಬರೂ ಬಂದಿರಲಿಲ್ಲ. ಗಲ್ಫ್ ಸೇರಿದಂತೆ ಹೊರದೇಶಗಳಿಗೆ ಹೋಗದೆ, ಹುಟ್ಟಿದ ಊರಿನಲ್ಲಿ ಉದ್ಯೋಗ ಸೃಷ್ಟಿ ಮಾಡಿ, ಪ್ರತಿಭಾ ಪಲಾಯನ ರಾಜ್ಯದ ಅಭಿವೃದ್ಧಿಗೆ ಮಾರಕ ಎಂದು ತಿಳಿಸಿದರು.

ಮಂಗಳೂರು ಹೂಡಿಕೆದಾರರ ಸ್ವರ್ಗ. ಎಲ್ಲಾ ರೀತಿಯಲ್ಲೂ ಅಲ್ಲಿ ಅವಕಾಶವಿದ್ದು, ಸರ್ಕಾರ ನಿಮ್ಮ ಬೆನ್ನಿಗೆ ನಿಲ್ಲುತ್ತದೆ. ಸ್ಥಳೀಯವಾಗಿ ಉದ್ಯೋಗ ಸೃಷ್ಟಿಮಾಡಿ, ಕೋಮು ಗಲಭೆಯ ಪ್ರಯೋಗಶಾಲೆ ಎನ್ನುವ ಹೆಸರು ಅಳಿಸಿ ಹಾಕಿ. ಮಲೇಷ್ಯಾ ಮಾದರಿಯಲ್ಲಿ ಟ್ವಿನ್ ಸಿಟಿಯನ್ನು ಮೊದಲು ಕಟ್ಟಿದವರೇ ಬ್ಯಾರಿ ಸಮುದಾಯದವರು, ನಿಮ್ಮ ಕೈಲಿ ಎಲ್ಲವೂ ಸಾಧ್ಯ ಎಂದರು.

ಸಮುದಾಯದ ಬೆಳವಣಿಗೆಗೆ ನಿವೇಶನಗಳ ಅಗತ್ಯವಿದೆ ಎಂದು ಮನವಿ ಮಾಡಿದ್ದೀರಿ, ಕಾನೂನಿ ಚೌಕಟ್ಟಿನಲ್ಲಿ ಏನು ಸಾಧ್ಯತೆ ಇದ್ದರೂ ಸಹಾಯ ಮಾಡಲಾಗುವುದು. ಮುಖ್ಯಮಂತ್ರಿಗಳು ಕೈಗೆ ಪೆನ್ ಕೊಟ್ಟಿದ್ದಾರೆ, ಇದರಿಂದ ಏನು ಬೇಕಾದರೂ ಮಾಡಬಹುದು "You Can Make More Friends, You can Make More Enemies" ನಾವು ಸ್ನೇಹ ಸಂಪಾದನೆ ಮಾಡೋಣ. ನನ್ನ ಮನೆ ಹಾಗೂ ಮುಖ್ಯಮಂತ್ರಿಗಳ ಮನೆ ಬಾಗಿಲು ಸದಾ ತೆರೆದಿರುತ್ತದೆ ಎಂದು ಹೇಳಿದರು.

ರಾಜ್ಯಸಭೆಗೆ ಕಳಿಸುತ್ತೇವೆ ಎಂದರೂ ಫಾರೂಕ್ ಬರಲಿಲ್ಲ:

ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಬಿ.ಎಂ.ಫಾರೂಕ್ ಅವರಿಗೆ ನಾನು ಮತ್ತು ಸಿದ್ದರಾಮಯ್ಯ ಅವರು ಅನೇಕ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ಮಾಡಿ, ರಾಜ್ಯಸಭೆ ಸದಸ್ಯನನ್ನಾಗಿ ಮಾಡುತ್ತೇವೆ ಎಂದು ಹೇಳಿದೆವು. ಆದರೆ ಕುಮಾರಸ್ವಾಮಿ ಅವರೇ ಮುಖ್ಯ ಎಂದು ಅವರ ಜೊತೆ ಹೋದರು. ಮುಂದಕ್ಕೆ ಈ ತಪ್ಪು ಮಾಡಲು ಹೋಗಬೇಡಿ, ಇಡೀ ಸಮುದಾಯ ಬಳಲುತ್ತಾ ಇದೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+