ಬಿಜೆಪಿ ಮುಳುಗಿಸುವ 5 ನಾಯಕರ ಪಟ್ಟಿ ಕೊಟ್ಟ ಖಾದರ್!
ಬೆಂಗಳೂರು, ಜನವರಿ 03 : 'ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಮುಳುಗಿಸಲು ಪಕ್ಷದ 5 ನಾಯಕರು ಸಾಕು. ಜೈಲಿಗೆ ಹೋಗಿ ಬಂದವರನ್ನು ಜನರು ಮರೆಯುತ್ತಾರೆ. ಆದರೆ, ಅನ್ನ, ಕ್ಷೀರ, ಮನೆ ಕೊಟ್ಟವರನ್ನು ಮರೆಯುವುದಿಲ್ಲ' ಎಂದು ಯು.ಟಿ.ಖಾದರ್ ಹೇಳಿದರು.
ಬುಧವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಯು.ಟಿ.ಖಾದರ್ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದರು.
'ಗುಜರಾತ್ನಲ್ಲಿಯೇ ಮೋದಿ ಹವಾ ಇಲ್ಲ. ಇನ್ನು ಕರ್ನಾಟಕದಲ್ಲಿ ನಡೆಯುತ್ತದೆಯೇ?. ಗುಜರಾತ್ನಲ್ಲಿ ರಾಹುಲ್ ಗಾಂಧಿ ಅವರಿಗೆ ಸಿದ್ದರಾಮಯ್ಯ, ಖರ್ಗೆ, ಪರಮೇಶ್ವರ ಅವರಂತಹ ನಾಯಕರು ಸಿಕ್ಕಿದ್ದರೆ ಬಿಜೆಪಿ ಧೂಳಿಪಟವಾಗುತ್ತಿತ್ತು' ಎಂದು ಹೇಳಿದರು.
'ಅನ್ನಭಾಗ್ಯ ಯೋಜನೆ ಕೇಂದ್ರ ಸರ್ಕಾರದ್ದು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಹಾಗಾದರೆ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯದಲ್ಲಿ ಯೋಜನೆ ಏಕೆ ಜಾರಿಗೆ ಬಂದಿಲ್ಲ?' ಎಂದು ಖಾದರ್ ಪ್ರಶ್ನಿಸಿದರು. ಖಾದರ್ ಹೇಳಿದ 5 ನಾಯಕರ ಪಟ್ಟಿ ಇಲ್ಲಿದೆ...

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ
'ಒಬ್ಬರು ಸಂವಿಧಾನ ಬದಲಿಸಬೇಕು ಎಂದು ಹೇಳುತ್ತಾರೆ' ಎಂದು ಯು.ಟಿ.ಖಾದರ್ ಕೇಂದ್ರ ಕೌಶಾಲ್ಯಾಭಿವೃದ್ಧಿ ಸಚಿವ, ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗ್ಡೆ ಬಿಜೆಪಿ ಮುಳುಗಿಸುತ್ತಾರೆ ಎಂದರು.

'ಬೆಂಕಿ ಹಚ್ಚಬೇಕು'
'ಒಬ್ಬ ಬಿಜೆಪಿ ನಾಯಕರು ಬೆಂಕಿ ಹಚ್ಚಬೇಕು' ಎಂದು ಹೇಳುತ್ತಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಹೆಸರು ಹೇಳದೆ ಬಿಜೆಪಿ ಮುಳುಗಿಸುತ್ತಾರೆ ಎಂದು ಖಾದರ್ ಹೇಳಿದರು.

ಶೋಭಾ ಕರಂದ್ಲಾಜೆ
ಯು.ಟಿ.ಖಾದರ್ ಅವರು ಹೇಳಿದ ಬಿಜೆಪಿ ಮುಳುಗಿಸುವ ನಾಯಕರ ಪಟ್ಟಿಯಲ್ಲಿ ಶೋಭಾ ಕರಂದ್ಲಾಜೆ ಅವರನ್ನು ಸೇರಿಸಿದರು. ಇತ್ತೀಚಿನ ದಿನಗಳಲ್ಲಿ ತಮ್ಮ ಉಗ್ರ ಭಾಷಣದಿಂದಲೇ ಉಡುಪಿ-ಚಿಕ್ಕಮಗಳೂರು ಸಂಸದೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಸುದ್ದಿ ಮಾಡುತ್ತಿದ್ದಾರೆ.

ಗೋ.ಮಧುಸೂದನ್
ಕೆಲವು ದಿನಗಳ ಹಿಂದೆ ಸಂವಿಧಾನ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಹೇಳಿಕೆ ನೀಡಿದ್ದ ಗೋ.ಮಧುಸೂದನ್ ಅವರು ಸಹ ಕರ್ನಾಟಕದಲ್ಲಿ ಪಕ್ಷವನ್ನು ಮುಳುಗಿಸುವ ನಾಯಕರು ಎಂಬುದು ಖಾದರ್ ಹೇಳಿಕೆ.

ನಳೀನ್ ಕುಮಾರ್ ಕಟೀಲ್
ಸಚಿವ ಯು.ಟಿ.ಖಾದರ್ ಅವರ ಪ್ರಕಾರ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಕರ್ನಾಟಕದಲ್ಲಿ ಪಕ್ಷವನ್ನು ಮುಳುಗಿಸುತ್ತಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications